Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಡೆಯಲಿದೆ ‘ಟಾಕ್ಸಿಕ್’ ಚಿತ್ರದ ಪ್ರಮುಖ ದೃಶ್ಯದ ಶೂಟ್; ಯಾರೆಲ್ಲ ಬರ್ತಾರೆ?

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬೆಂಗಳೂರು ಶೆಡ್ಯೂಲ್ ಶೀಘ್ರವೇ ಆರಂಭ ಆಗಲಿದೆ. ಕಿಯಾರಾ ಅಡ್ವಾಣಿ ಕೂಡ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ಮೊದಲು ಬೆಂಗಳೂರು, ಗೋವಾ, ಮುಂಬೈಗಳಲ್ಲಿ ಚಿತ್ರೀಕರಣ ನಡೆದಿದ್ದು, ಪ್ರಮುಖ ದೃಶ್ಯಗಳ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಚಿತ್ರದ ಬಿಡುಗಡೆ ದಿನಾಂಕ ಡಿಸೆಂಬರ್‌ಗೆ ಮುಂದೂಡಲ್ಪಟ್ಟಿದೆ.

ಬೆಂಗಳೂರಲ್ಲಿ ನಡೆಯಲಿದೆ ‘ಟಾಕ್ಸಿಕ್’ ಚಿತ್ರದ ಪ್ರಮುಖ ದೃಶ್ಯದ ಶೂಟ್; ಯಾರೆಲ್ಲ ಬರ್ತಾರೆ?
ಯಶ್
Follow us
ರಾಜೇಶ್ ದುಗ್ಗುಮನೆ
|

Updated on:Jan 30, 2025 | 7:54 AM

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಶೂಟ್​ನ ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿತ್ತು. ಆ ಬಳಿಕ ಇಡೀ ತಂಡ ಗೋವಾಗೆ ಶಿಫ್ಟ್ ಆಗಿತ್ತು. ಕಳೆದ ಒಂದು ತಿಂಗಳಿಂದ ಗೋವಾದಲ್ಲಿ ಬೀಡು ಬಿಟ್ಟಿದ್ದ ತಂಡ ಅಲ್ಲಿಯೇ ಚಿತ್ರೀಕರಣ ನಡೆಸುತ್ತಿತ್ತು. ಈ ಮಧ್ಯೆ ಮುಂಬೈನಲ್ಲೂ ಚಿತ್ರೀಕರಣ ಮಾಡಲಾಗಿತ್ತು. ಈಗ ‘ಟಾಕ್ಸಿಕ್’ ಚಿತ್ರದ ಪ್ರಮುಖ ದೃಶ್ಯವನ್ನು ಬೆಂಗಳೂರಿನಲ್ಲಿ ಶೂಟ್ ಮಾಡಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.

‘ಟಾಕ್ಸಿಕ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಸ್ಯಾಂಡಲ್​ವುಡ್ ಮಾತ್ರವಲ್ಲದೆ ಬಾಲಿವುಡ್​ನವರೂ ಕೂಡ ಚಿತ್ರಕ್ಕಾಗಿ ಕಾದಿದ್ದಾರೆ. ಈಗ ‘ಟಾಕ್ಸಿಕ್’ ಚಿತ್ರದ ಹೊಸ ಶೆಡ್ಯೂಲ್​ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಶೂಟ್ ಬೆಂಗಳೂರಿನಲ್ಲೇ ನಡೆಯಲಿದೆ ಅನ್ನೋದು ವಿಶೇಷ. ಇದಕ್ಕಾಗಿ ಕಿಯಾರಾ ಅಡ್ವಾಣಿ ಕೂಡ ಬೆಂಗಳೂರಿಗೆ ಬರಲಿದ್ದಾರೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಚಾರ. ಆದರೆ, ಈ ವಿಚಾರವನ್ನು ತಂಡದವರು ಎಲ್ಲಿಯೂ ರಿವೀಲ್ ಮಾಡಿಲ್ಲ. ಈಗ ಕೇಳಿ ಬರುತ್ತಿರುವ ಹೊಸ ಸುದ್ದಿ ಏನೆಂದರೆ ಈಗ ನಡೆಯುತ್ತಿರುವ ಹೊಸ ಹಂತದ ಶೂಟಿಂಗ್ ಪ್ರಮುಖ ದೃಶ್ಯಗಳನ್ನು ಒಳಗೊಂಡಿರಲಿದೆ. ಇದಕ್ಕಾಗಿ ಕಿಯಾರಾ ಕೂಡ ಬೆಂಗಳೂರಿಗೆ ಆಗಮಿಸಲಿದ್ದಾರೆ. ಯಶ್ ಕೂಡ ಶೂಟಿಂಗ್​ನ ಭಾಗವಾಗಲಿದ್ದಾರೆ. ಆದರೆ, ಅದು ಯಾವ ರೀತಿಯ ದೃಶ್ಯ ಎಂಬ ವಿಚಾರ ಇನ್ನೂ ರಿವೀಲ್ ಆಗಿಲ್ಲ. ಈ ಮೊದಲು ನಯನತಾರಾ ಹಾಗೂ ಕಿಯಾರಾ ಅವರು ಈ ಚಿತ್ರದ ಶೂಟ್​ನಲ್ಲಿ ಭಾಗಿ ಆಗಿದ್ದರು.

ಇದನ್ನೂ ಓದಿ: ‘ಟಾಕ್ಸಿಕ್’ ಗ್ಲಿಂಪ್ಸ್​ಗೆ ಮಲಯಾಳಂ ಚಿತ್ರರಂಗದ ವಿರೋಧ; ಗೀತು ಮೋಹನ್​ದಾಸ್​ಗೆ ನೇರ ಪ್ರಶ್ನೆ  

ಮಲಯಾಳಂನ ಗೀತು ಮೋಹನ್​ದಾಸ್ ಅವರು ‘ಟಾಕ್ಸಿಕ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡದ ವೆಂಕಟ್ ನಾರಾಯಣ್ ಅವರು ‘ಕೆವಿಎನ್ ಪ್ರೊಡಕ್ಷನ್’ ಸಂಸ್ಥೆ ಮೂಲಕ ‘ಟಾಕ್ಸಿಕ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಏಪ್ರಿಲ್​ನಲ್ಲಿ ರಿಲೀಸ್ ಆಗಬೇಕಿತ್ತು. ಆದರೆ, ಇದರ ರಿಲೀಸ್ ಡೇಟ್ ಡಿಸೆಂಬರ್​ಗೆ ಮುಂದೂಡಲ್ಪಟ್ಟಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:31 am, Thu, 30 January 25

ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್
ಆರೋಪಿಗಳನ್ನು ವಿಜಯಪುರದ ದರ್ಗಾ ಜೈಲಿಗೆ ಕರೆದೊಯ್ದ ಪೊಲೀಸರು
ಆರೋಪಿಗಳನ್ನು ವಿಜಯಪುರದ ದರ್ಗಾ ಜೈಲಿಗೆ ಕರೆದೊಯ್ದ ಪೊಲೀಸರು
ಉಪವಾಸ ಸತ್ಯಾಗ್ರಹ ನಿರತ ರೈತ ಮುಖಂಡರ ಜೊತೆ ಸಭೆ ನಡೆಸಿದ ಪ್ರಲ್ಹಾದ್ ಜೋಶಿ
ಉಪವಾಸ ಸತ್ಯಾಗ್ರಹ ನಿರತ ರೈತ ಮುಖಂಡರ ಜೊತೆ ಸಭೆ ನಡೆಸಿದ ಪ್ರಲ್ಹಾದ್ ಜೋಶಿ
ಸಿದ್ದರಾಮಯ್ಯ ಮುಂದುವರಿಯಲಿ ಅಂತ ಡಿಕೆಶಿ ಹೇಳಿದ್ದರೆ ಮಾತೇ ಮುಗೀತು: ಸಚಿವ
ಸಿದ್ದರಾಮಯ್ಯ ಮುಂದುವರಿಯಲಿ ಅಂತ ಡಿಕೆಶಿ ಹೇಳಿದ್ದರೆ ಮಾತೇ ಮುಗೀತು: ಸಚಿವ
ಕೇವಲ ವೋಟು ಗಿಟ್ಟಿಸಲು ಕಾಂಗ್ರೆಸ್ ನಾಯಕರು ಸುಳ್ಳು ಹೇಳಿದರೇ? ಮಹಿಳೆಯರು
ಕೇವಲ ವೋಟು ಗಿಟ್ಟಿಸಲು ಕಾಂಗ್ರೆಸ್ ನಾಯಕರು ಸುಳ್ಳು ಹೇಳಿದರೇ? ಮಹಿಳೆಯರು