AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಕಥೆ ಬಗ್ಗೆ ಸಿಕ್ತು ದೊಡ್ಡ ಅಪ್​​ಡೇಟ್

ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ಒಂದು ತಿಂಗಳಿರುವಾಗಲೂ ಪ್ರಚಾರವಿಲ್ಲ. ಈ ಮಧ್ಯೆ, 1940-70ರ ಗೋವಾ ಕ್ರೈಮ್ ಕಥೆಯ ಕುರಿತು ಕಥೆ ಸೋರಿಕೆಯಾಗಿದೆ. ಮಾರ್ಚ್ 19ರಂದು ಬಿಡುಗಡೆಯಾಗುವ ಈ ಚಿತ್ರಕ್ಕೆ 'ಧುರಂಧರ್ 2' ಸ್ಪರ್ಧೆಯೊಡ್ಡಲಿದೆ. ಯಶ್ ಎದುರು ಗೆಲುವು ಕಷ್ಟ ಎನ್ನಲಾಗುತ್ತಿದೆ. ಮಾರ್ಚ್ ಮೊದಲ ವಾರದಲ್ಲಿ ಟ್ರೇಲರ್ ಬರಲಿದೆ.

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಕಥೆ ಬಗ್ಗೆ ಸಿಕ್ತು ದೊಡ್ಡ ಅಪ್​​ಡೇಟ್
ಯಶ್
ರಾಜೇಶ್ ದುಗ್ಗುಮನೆ
|

Updated on: Feb 18, 2026 | 1:31 PM

Share

‘ಟಾಕ್ಸಿಕ್’ ಸಿನಿಮಾ ರಿಲೀಸ್​​ಗೆ ಇನ್ನು ಒಂದು ತಿಂಗಳು ಕೂಡ ಬಾಕಿ ಉಳಿದಿಲ್ಲ. ಈ ಚಿತ್ರದ ಪ್ರಚಾರ ಕಾರ್ಯ ಇನ್ನೂ ಆರಂಭ ಆಗಿಲ್ಲ ಎಂಬ ಬೇಸರ ಯಶ್ ಅಭಿಮಾನಿಗಳಿಗೆ ಇದೆ. ಈ ಮಧ್ಯೆ ಸಿನಿಮಾದ ಕಥೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಒಂದಿ ಹರಿದಾಡುತ್ತಿದೆ. ಸಿನಿಮಾದ ಥೀಮ್ ಯಾವ ರೀತಿ ಇರಬಹುದು ಎಂಬ ಕುತೂಹಲಕ್ಕೆ ತೆರೆ ಬಿದ್ದಂತೆ ಆಗಿದೆ.

‘ಟಾಕ್ಸಿಕ್’ ಸಿನಿಮಾದ ಕಥೆಯ ಬಗ್ಗೆ ಫಾರ್​ ಫಿಲ್ಮ್ಸ್ ಕೋ ಎಲ್​​ಎಲ್​ಎಲ್​ಸಿ ಎಂಬುವವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್’ ಸಿನಿಮಾ 1940-70ರ ಅವಧಿಯಲ್ಲಿ ಗೋವಾದಲ್ಲಿ ನಡೆಯುವ ಕಥೆಯಂತೆ. ಕ್ರೈಮ್ ಲೋಕವನ್ನು ಹಿಂಸೆ, ಭಯ ಮೊದಲಾದ ವಿಷಯಗಳ ಮೂಲಕ ಕಟ್ಟುವ ಕಥೆಯನ್ನು ಈ ಸಿನಿಮಾ ಹೊಂದಿದೆ ಎಂದು ಹೇಳಲಾಗುತ್ತಾ ಇದೆ.

ಸಾಮಾನ್ಯವಾಗಿ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಒಂದಷ್ಟು ಥಿಯರಿಗಳು ಹುಟ್ಟಿಕೊಳ್ಳೋದು ಸಾಮಾನ್ಯ. ಈಗ ‘ಟಾಕ್ಸಿಕ್’ ವಿಷಯದಲ್ಲೂ ಹೀಗೆಯೇ ಆಗಿರಬಹುದು ಎಂಬುದು ಕೆಲವರ ಊಹೆ. ‘ಟಾಕ್ಸಿಕ್’ ಟ್ರೇಲರ್ ರಿಲೀಸ್ ಆದ ಬಳಿಕವೇ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಮಾರ್ಚ್ ಮೊದಲ ವಾರದಲ್ಲಿ ಟಾಕ್ಸಿಕ್ ಟ್ರೇಲರ್ ಬರಲಿದೆ.

ಮಾರ್ಚ್ 19ರಂದು ‘ಟಾಕ್ಸಿಕ್’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಎದುರು ‘ಧುರಂಧರ್ 2’ ಸಿನಿಮಾ ರಿಲೀಸ್ ಆಗುತ್ತಿದೆ. ಯಶ್ ಎದುರು ರಿಲೀಸ್ ಆಗಿ ಗೆಲುವು ಸಾಧಿಸಿದವರೇ ಇಲ್ಲ ಎಂದರೂ ತಪ್ಪಾಗಲಾರದು. ಶಾರುಖ್ ಖಾನ್ (ಝೀರೋ), ದಳಪತಿ ವಿಜಯ್ (ಬೀಸ್ಟ್​) ಈ ಮೊದಲು ಯಶ್ ಸಿನಿಮಾ ಎದುರು ಬಂದು ಮಂಡಿ ಊರಿದ್ದಾರೆ. ಇದೇ ಪರಿಸ್ಥಿತಿ ‘ಧುರಂಧರ್ 2’ ಚಿತ್ರಕ್ಕೂ ಬರಲಿದೆ ಎಂಬ ಮಾತು ಕೇಳಿ ಬಂದಿವೆ.

‘ಟಾಕ್ಸಿಕ್’ ಸಿನಿಮಾನ ಮಲಯಾಳಂ ಗೀತು ಮೋಹನ್​ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಕಿಯಾರಾ ಅಡ್ವಾಣಿ,ರುಕ್ಮಿಣಿ ವಸಂತ್, ಹುಮಾ ಖುರೇಶಿ, ನಯನತಾರಾ, ತಾರಾ ಸುತಾರಿಯಾ ಮೊದಲಾದವರು ನಟಿಸಿದ್ದಾರೆ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ