AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ರಿಶೂಟ್, ಮುಂದಿನ ವರ್ಷ ರಿಲೀಸ್ ಎಂದು ಹೇಳಿ ಉಲ್ಟಾ ಹೊಡೆದ ಬಾಕ್ಸ್ ಆಫೀಸ್ ಪಂಡಿತ

ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಮುಂದಕ್ಕೆ ಹೋಗಿದೆ, ರೀಶೂಟ್ ಆಗುತ್ತಿದೆ ಎಂಬ ಕಾಲಿವುಡ್ ವದಂತಿಗಳಿಗೆ ತೆರೆ ಬಿದ್ದಿದೆ. ಕೆಲ ಬಾಕ್ಸ್ ಆಫೀಸ್ ಪಂಡಿತರು ಹಬ್ಬಿಸಿದ 2027 ರಿಲೀಸ್ ಸುದ್ದಿ ಸುಳ್ಳು ಎಂದು ನಿರ್ಮಾಣ ಸಂಸ್ಥೆ ಸ್ಪಷ್ಟಪಡಿಸಿದೆ. ಕನ್ನಡ ಚಿತ್ರರಂಗದ ಬೆಳೆಯುತ್ತಿರುವ ಜನಪ್ರಿಯತೆ ನೋಡಿ ಕಾಲಿವುಡ್ ಮಂದಿ ಹೊಟ್ಟೆ ಉರಿದುಕೊಂಡು ಇಂತಹ ತಂತ್ರ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

‘ಟಾಕ್ಸಿಕ್’ ರಿಶೂಟ್, ಮುಂದಿನ ವರ್ಷ ರಿಲೀಸ್ ಎಂದು ಹೇಳಿ ಉಲ್ಟಾ ಹೊಡೆದ ಬಾಕ್ಸ್ ಆಫೀಸ್ ಪಂಡಿತ
ಟಾಕ್ಸಿಕ್
ರಾಜೇಶ್ ದುಗ್ಗುಮನೆ
|

Updated on: Jun 04, 2026 | 2:51 PM

Share

‘ಟಾಕ್ಸಿಕ್’ ಸಿನಿಮಾ (Toxic Movie) ತಂಡ ಒಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ಸಿನಿಮಾನ ಮುಂದಕ್ಕೆ ಹಾಕಿಕೊಂಡಿದೆ. ವಿಶ್ವ ಮಟ್ಟದಲ್ಲಿ ದೊಡ್ಡದಾಗಿ ಬಿಡುಗಡೆ ಮಾಡಬೇಕು ಎಂಬುದು ತಂಡದ ಪ್ಲ್ಯಾನ್. ಆದರೆ, ಇದನ್ನು ಕೆಲವರು ತಪ್ಪಾಗಿ ಬಿಂಬಿಸೋ ಕೆಲಸ ಮಾಡುತ್ತಿದ್ದಾರೆ. ಹೌದು, ‘ಟಾಕ್ಸಿಕ್’ ಸಿನಿಮಾ ರೀಶೂಟ್ ಮಾಡಲಾಗುತ್ತದೆ, ಸಿನಿಮಾ ರಿಲೀಸ್ 2027ಕ್ಕೆ ಹೋಗುತ್ತದೆ ಎಂದೆಲ್ಲ ಹೇಳಲಾಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿದವರೇ ಆ ಬಳಿಕ ಉಲ್ಟಾ ಹೊಡೆದಿದ್ದಾರೆ.

ಕಾಲಿವುಡ್ ಸಿನಿಮಾ ಬಗ್ಗೆ ಅಪ್​​ಡೇಟ್ ಕೊಡುವ ವಲೈ ಪೆಚು ಅವರು ‘ಟಾಕ್ಸಿಕ್’ ಮುಂದಕ್ಕೆ ಹೋಗಲಿದೆ ಎಂದು ಹೇಳಿದ್ದರಂತೆ. ಈ ವಿಷಯವನ್ನು ಆಧರಿಸಿ, ಕಾಲಿವುಡ್ ಬಾಕ್ಸ್ ಆಫೀಸ್ ಬಗ್ಗೆ ಮಾಹಿತಿ ನೀಡುವ ಕ್ರಿಸ್ಟೋಫರ್ ಕನಗರಾಜ್ ಅವರು ಟ್ವೀಟ್ ಮಾಡಿದ್ದರು.

‘ಟಾಕ್ಸಿಕ್ ಸಿನಿಮಾ ಬಗ್ಗೆ ಯಶ್​ ಅವರಿಗೆ ಖುಷಿ ಇಲ್ಲ. ಹೀಗಾಗಿ, 100 ದಿನಗಳ ರೀ ಶೂಟ್ ಮಾಡಲು ಅವರು ಪ್ಲ್ಯಾನ್ ಮಾಡಿದ್ದಾರೆ. 2027ರಲ್ಲಿ ಸಿನಿಮಾ ರಿಲೀಸ್ ಆಗಲಿದೆ. ವಿಪಿ ಹೇಳಿದ್ದು’ ಎಂದು ಕನಗರಾಜ್ ಟ್ವೀಟ್ ಮಾಡಿದ್ದರು. ವಿಪಿ ಎಂದರೆ ವಲೈ ಪೆಚು ಎಂದರ್ಥ.

ಆ ಬಳಿಕ ಕನಗರಾಜ್ ಅವರಿಂದ ಸ್ಪಷ್ಟನೆ ಸಿಕ್ಕಿದೆ. ವಲೈ ಪೆಚು ಹಬ್ಬಿಸಿರೋ ಸುದ್ದಿ ಸುಳ್ಳು ಎಂದು ನಿರ್ಮಾಣ ಸಂಸ್ಥೆ ಮಾಹಿತಿ ನೀಡಿದೆ ಎಂದು ಅವರು ಆ ಬಳಿಕ ಟ್ವೀಟ್ ಮಾಡಿದ್ದಾರೆ. ಈ ಮೂಲಕ ವದಂತಿಗೆ ತೆರೆ ಬಿದ್ದಿದೆ. ಇದೆಲ್ಲ ಜನಪ್ರಿಯತೆ ಪಡೆದುಕೊಳ್ಳಲು ಮಾಡುವ ತಂತ್ರ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್​​ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?

ತಮಿಳುನಾಡಿನಲ್ಲಿ ಯಾವುದೇ ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್ ಆಗಿಲ್ಲ. ಅವರ ಚಿತ್ರಗಳು ಸಾವಿರ ಕೋಟಿ ರೂಪಾಯಿ ಗಳಿಸಿಲ್ಲ. ಕನ್ನಡ ಚಿತ್ರವೊಂದು ಇಷ್ಟು ದೊಡ್ಡ ಮಟ್ಟಕ್ಕೆ ಹೋಗುವುದನ್ನು ನೋಡಿ ಕಾಲಿವುಡ್ ಮಂದಿ ಹೊಟ್ಟೆ ಉರಿದುಕೊಂಡಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್