AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toxic Song: ‘ಟಾಕ್ಸಿಕ್’ ಚಿತ್ರದ ‘ಮನಮೋಹಕ..’ ಸಾಂಗ್; ಯಶ್-ತಾರಾ ಸುತಾರಿಯಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ

ಟಾಕ್ಸಿಕ್​ ಮನಮೋಹಕ ಹಾಡು: ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಎರಡನೇ ಹಾಡು ‘ಮನಮೋಹಕ’ ಇಂದು ಬಿಡುಗಡೆಯಾಗಿದ್ದು, ಪ್ರಮೋದ್ ಮರವಂತೆ ಸಾಹಿತ್ಯ ಹಾಗೂ ಸಿದ್ದಾರ್ಥ್ ಬಸರೂರ್ ಧ್ವನಿಯಲ್ಲಿ ಮೂಡಿಬಂದಿರುವ ಈ ಮಧುರ ಪ್ರಣಯಗೀತೆಯಲ್ಲಿ ಯಶ್ ಮತ್ತು ತಾರಾ ಸುತಾರಿಯಾ ಕೆಮಿಸ್ಟ್ರಿ ಅಭಿಮಾನಿಗಳ ಮನಗೆದ್ದಿದೆ.

Toxic Song: ‘ಟಾಕ್ಸಿಕ್’ ಚಿತ್ರದ ‘ಮನಮೋಹಕ..’ ಸಾಂಗ್; ಯಶ್-ತಾರಾ ಸುತಾರಿಯಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ
ತಾರಾ-ಯಶ್
ರಾಜೇಶ್ ದುಗ್ಗುಮನೆ
|

Updated on:Jul 21, 2026 | 11:53 AM

Share

ಮುಖ್ಯಾಂಶಗಳು

  • 'ತಬಾಹಿ' ಬೆನ್ನಲ್ಲೇ ಮೆಲೋಡಿ ಜಾದೂ
  • 'ಟಾಕ್ಸಿಕ್' ಚಿತ್ರದ ಎರಡನೇ ರೋಮ್ಯಾಂಟಿಕ್ ಹಾಡು ‘ಮನಮೋಹಕ’ ಔಟ್
  • ಭಟ್ರು ಅಲ್ಲ, ಈ ಬಾರಿ ಮರವಂತೆ ಸಾಹಿತ್ಯ

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್​ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಈಗಾಗಲೇ ಬಿಡುಗಡೆಯಾಗಿ ಕೋಟ್ಯಂತರ ವೀಕ್ಷಣೆಗಳೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ್ದ ಬೋಲ್ಡ್ ಅಂಡ್ ರೊಮ್ಯಾಂಟಿಕ್ ‘ತಬಾಹಿ’ ಹಾಡಿನ ಬೆನ್ನಲ್ಲೇ, ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ಇಂದು (ಜುಲೈ 21) ಬೆಳಿಗ್ಗೆ 11.33ಕ್ಕೆ ರಿಲೀಸ್ ಆಗಿರುವ ‘ಮನಮೋಹಕ..’ ಸಾಂಗ್ ಇಂಟರ್ನೆಟ್‌ನಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದೆ.

ಮೆಲೋಡಿ ಪ್ರಿಯರ ಮನಗೆದ್ದ ‘ಮನಮೋಹಕ’

ಮೊದಲ ಹಾಡು ‘ತಬಾಹಿ’ಯಲ್ಲಿ ಯಶ್ ಹಾಗೂ ಕಿಯಾರಾ ಅಡ್ವಾಣಿ ಸಖತ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡು ಬೋಲ್ಡ್ ನೆಸ್ ಮೂಲಕ ಗಮನ ಸೆಳೆದಿದ್ದರು. ಇಂದು ಬಿಡುಗಡೆಯಾಗಿರುವ ‘ಮನಮೋಹಕ’ ಹಾಡು ಮಧುರವಾದ ಪ್ರಣಯಗೀತೆ. ಈ ಹಾಡಿನಲ್ಲಿ ಯಶ್ ಹಾಗೂ ತಾರಾ ಸುತಾರಿಯಾ ಜೋಡಿಯಾಗಿ ಕಾಣಿಸಿಕೊಂಡಿದ್ದು, ಇಬ್ಬರ ನಡುವಿನ ಸ್ಕ್ರೀನ್ ಕೆಮಿಸ್ಟ್ರಿ ಗಮನ ಸೆಳೆಯುತ್ತಿದೆ. ಈ ಹಾಡಿನಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ ಕೂಡ ಕಾಣಿಸಿಕೊಳ್ಳುತ್ತಾರೆ.

ಪ್ರಮೋದ್ ಮರವಂತೆ ಸಾಹಿತ್ಯ

‘ಟಾಕ್ಸಿಕ್’ ಚಿತ್ರದ ಮೊದಲ ಹಾಡು ‘ತಬಾಹಿ’ಗೆ  ನಿರ್ದೇಶಕ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದರು. ಈಗ ಮನಮೋಹಕ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಸಿದ್ದಾರ್ಥ್ ಬಸರೂರ್ ಅವರು ಹಾಡಿದ್ದಾರೆ.

‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಈಗಾಗಲೇ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ನಯನತಾರಾ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ. ಯಶ್ ಅವರು ಯಾರ ಜೊತೆ ಫೈಟ್ ಮಾಡುತ್ತಾರೆ, ಯಾರ ಜೊತೆ ರೊಮ್ಯಾನ್ಸ್ ಮಾಡುತ್ತಾರೆ ಎಂಬ ಗೊಂದಲ ಅಭಿಮಾನಿಗಳಲ್ಲಿ ಇದ್ದ ಬೆನ್ನಲ್ಲೇ, ಈಗ ತಾರಾ ಸುತಾರಿಯಾ ಜೊತೆಗಿನ ಈ ಮಧುರ ಪ್ರಣಯಗೀತೆ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ದುಪ್ಪಟ್ಟು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:44 am, Tue, 21 July 26

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ