AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash in Amrutheshwara Temple: ಶ್ರೀ ಅಮೃತೇಶ್ವರ ದೇವಸ್ಥಾನದ ಉದ್ಘಾಟನೆಯಲ್ಲಿ ಭಾಗಿಯಾದ ಯಶ್​, ರಾಜಮೌಳಿ

‘ರಾಕಿಂಗ್​ ಸ್ಟಾರ್​’ ಯಶ್​ ಹಾಗೂ ಪ್ಯಾನ್​ ಇಂಡಿಯಾ ಡೈರೆಕ್ಟರ್​ ರಾಜಮೌಳಿ ಅವರು ಬಳ್ಳಾರಿಯ ಶ್ರೀ ಅಮೃತೇಶ್ವರ ದೇವಸ್ಥಾನದ ಉದ್ಘಾಟನೆಯಲ್ಲಿ ಭಾಗಿ ಆಗಿದ್ದಾರೆ. ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ದೇವರಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದ ಬಳಿಕ ಮಾಧ್ಯಮಗಳ ಜೊತೆ ಯಶ್​ ಮಾತನಾಡಿದ್ದಾರೆ.

Yash in Amrutheshwara Temple: ಶ್ರೀ ಅಮೃತೇಶ್ವರ ದೇವಸ್ಥಾನದ ಉದ್ಘಾಟನೆಯಲ್ಲಿ ಭಾಗಿಯಾದ ಯಶ್​, ರಾಜಮೌಳಿ
ಎಸ್​ಎಸ್​ ರಾಜಮೌಳಿ, ಯಶ್​
ಮದನ್​ ಕುಮಾರ್​
|

Updated on: Feb 29, 2024 | 4:03 PM

Share

ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ (Yash) ಅವರು ‘ಟ್ಯಾಕ್ಸಿಕ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಅವರು ಬಳ್ಳಾರಿಗೆ ತೆರಳಿದ್ದಾರೆ. ಅಲ್ಲಿ ಶ್ರೀ ಅಮೃತೇಶ್ವರ ದೇವಸ್ಥಾನದ (Sri Amrutheshwara Temple) ಉದ್ಘಾಟನೆಯಲ್ಲಿ ಅವರು ಭಾಗಿ ಆಗಿದ್ದಾರೆ. ಟಾಲಿವುಡ್​ನ ಖ್ಯಾತ ನಿರ್ದೇಶಕ ರಾಜಮೌಳಿ ಅವರು ಕೂಡ ಈ ದೇವಸ್ಥಾನದ ಉದ್ಘಾಟನೆಯಲ್ಲಿ ಪತ್ನಿ ಸಮೇತರಾಗಿ ಭಾಗಿಯಾಗಿದ್ದಾರೆ. ಪ್ರಾಣ ಪ್ರತಿಷ್ಠಾಪನೆಗೆ ಸಾಕ್ಷಿಯಾದ ರಾಜಮೌಳಿ (SS Rajamouli) ಮತ್ತು ಯಶ್​ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

‘ದೇವರ ದರ್ಶನಕ್ಕೆ ಬಂದಿದ್ದೇನೆ. ಸಾಯಿ ಅವರು ನಮ್ಮ ಆತ್ಮೀಯರು. ‘ಕೆಜಿಎಫ್​ 1’ ಸಿನಿಮಾವನ್ನು ತೆಲುಗಿನಲ್ಲಿ ಅವರು ವಿತರಣೆ ಮಾಡಿದ್ದರು. ಆ ಸಿನಿಮಾದ ಗೆಲುವಿಗೆ ಅವರು ಕೂಡ ಕಾರಣ ಆಗಿದ್ದರು. ಅವರು ತುಂಬ ದೈವ ಭಕ್ತರು ಕೂಡ ಹೌದು. ಅವರು ಊರಿನಲ್ಲಿ ದೇವಸ್ಥಾನದ ಕಟ್ಟುವಾಗ ನನಗೆ ಮೊದಲೇ ಹೇಳಿದ್ದರು. ಅದಕ್ಕಾಗಿ ಇವತ್ತು ಬಂದಿದ್ದೇನೆ. ದೇವರ ದರ್ಶನ ಮಾಡಿದೆ. ಪೂಜೆಯಲ್ಲಿ ಭಾಗಿದ್ದು ಬಹಳ ಖುಷಿ ಆಯಿತು’ ಎಂದು ಯಶ್​ ಹೇಳಿದ್ದಾರೆ.

ಶ್ರೀ ಅಮೃತೇಶ್ವರ ದೇವಸ್ಥಾನದ ಉದ್ಘಾಟನೆ ಬಳಿಕ ಮಾಧ್ಯಮದವರ ಜೊತೆ ಯಶ್​ ಮಾತನಾಡಿದ್ದಾರೆ. ಈ ವೇಳೆ ತಮ್ಮ ವೈರಲ್​ ಫೋಟೋದ ಬಗ್ಗೆಯೂ ಅವರು ಮಾತನಾಡಿದರು. ‘ಅದು ನಮ್ಮ ರಾಧಿಕಾ ಅವರ ಮನೆಯ ಬಳಿಯ ದೇವಸ್ಥಾನಕ್ಕೆ ಹೋದಾಗ ಮಕ್ಕಳು ತಿಂಡಿ ಕೇಳಿದ್ದರು. ತಿಂಡಿ ಕೊಡಿಸುತ್ತಿದ್ದೆ ಅಷ್ಟೇ. ಆ ಅಂಗಡಿಗೆ ನಾವು 10-12 ವರ್ಷದಿಂದ ಹೋಗುತ್ತಿದ್ದೇವೆ’ ಎಂದು ಯಶ್​ ಹೇಳಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಯಶ್​ ವಿಡಿಯೋ ವೈರಲ್​:

‘ಸಿಂಪಲ್​ ಎಂಬುದು ಏನೂ ಅಲ್ಲ. ಯಾಕೆಂದರೆ ಐಷಾರಾಮಿ ಕಾರು ಮತ್ತು ವಿಮಾನದಲ್ಲಿ ಓಡಾಡುತ್ತೇವೆ. ಅದರಲ್ಲಿ ಯಾವ ಸರಳತೆ ಇದೆ? ಸಹಜವಾಗಿ ಇರುವುದನ್ನೇ ಜನರು ಸರಳತೆ ಅಂತಾರೆ ಈಗ. ನಾವು ಬೆಳೆದಿರುವುದೇ ಹಾಗೇ. ಅದನ್ನೂ ತಿನ್ನುತ್ತೇವೆ, ಫೈ ಸ್ಟಾರ್​ ಹೋಟೆಲ್​ಗೂ ಹೋಗುತ್ತೇವೆ. ಜೀವನದಲ್ಲಿ ಎಲ್ಲವೂ ಇರಬೇಕು’ ಎಂದು ಯಶ್​ ಹೇಳಿದ್ದಾರೆ.

ಇದನ್ನೂ ಓದಿ: ಅಭಿಮಾನಿಯ ಕಾಲ ಮೇಲೆ ಹರಿಯಿತು ಯಶ್ ಬೆಂಗಾವಲು ಪಡೆ ವಾಹನ

ಇದೇ ವೇಳೆ ರಾಜಕೀಯದ ಬಗ್ಗೆ ಬಗ್ಗೆಯೂ ಯಶ್​ ಅವರಿಗೆ ಪ್ರಶ್ನೆ ಎದುರಾಯಿತು. ದೇವಸ್ಥಾನದ ಆವರಣದಲ್ಲಿ ರಾಜಕೀಯದ ಕುರಿತು ವಿಷಯ ಎತ್ತಿದ್ದು ಅವರಿಗೆ ಸರಿ ಎನಿಸಲಿಲ್ಲ. ‘ನಿನಗೇನಾದರೂ ಬುದ್ಧಿ ಇದೆಯೇನಯ್ಯ? ರಾಜಕೀಯದ ಬಗ್ಗೆ ಕೇಳುವ ಜಾಗನಾ ಇದು? ನೀವು ಹೀಗೆಲ್ಲ ಮಾಡಬಾರದು’ ಎಂದು ಯಶ್​ ಗರಂ ಆಗಿದ್ದಾರೆ. ಆ ಮೂಲಕ ಅವರು ರಾಜಕೀಯದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ.

Toxic star Yash and SS Rajamouli inaugurates Sri Amrutheshwara Temple in Bellary mdn

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?