AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್

ರಾಕಿಂಗ್ ಸ್ಟಾರ್ ಯಶ್ ಅವರ 'ಟಾಕ್ಸಿಕ್' ಟೀಸರ್ ಕುರಿತು ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದಕ್ಕೆ ಯಶ್, 'ಧನ್ಯವಾದಗಳು ಸರ್, ನೀವು ನನ್ನ ಹಿರಿಯರು' ಎಂದು ವಿನಮ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಮೂಲಕ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ವದಂತಿಗಳಿಗೆ ತೆರೆ ಬಿದ್ದಿದ್ದು, ಅವರ ಬಾಂಧವ್ಯ ಗಟ್ಟಿಗೊಂಡಿದೆ.

‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್
ಯಶ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 12, 2026 | 10:03 AM

Share

ರಾಕಿಂಗ್ ಸ್ಟಾರ್ ಯಶ್ (Yash) ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅವರ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು. ಈ ಟೀಸರ್ ಈವರೆಗೆ 83 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಟೀಸರ್ ನೋಡಿದ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ಯಶ್ ಹಾಗೂ ಸುದೀಪ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಇದು ಅಭಿಮಾನಿಗಳ ವಲಯದಲ್ಲಿ ಇರುವ ಚರ್ಚೆ. ಆದರೆ, ಇದನ್ನು ಅವರು ಸುಳ್ಳು ಮಾಡಿದ್ದಾರೆ. ಈ ಮೊದಲು ಒಟ್ಟಿಗೆ ಕಾಣಿಸಿಕೊಂಡಾಗ ಇಬ್ಬರೂ ಪರಸ್ಪರ ಹಗ್ ಮಾಡಿದ್ದು ಇದೆ. ಈಗ ‘ಟಾಕ್ಸಿಕ್’ ವಿಷಯದಲ್ಲಿ ಇವರ ಬಂಧ ಮತ್ತೆ ಸಾಬೀತಾಗಿದೆ.

ಟೀಸರ್ ರಿಲೀಸ್ ಬಳಿಕ ಟ್ವೀಟ್ ಮಾಡಿದ್ದ ಸುದೀಪ್, ‘ಯಶ್​​ಗೆ ಶುಭಾಶಯಗಳು. ಅಲೆಗಳ ವಿರುದ್ಧ ಸಾಗಲು ಯಾವಾಗಲೂ ಸಮಯ ಬೇಕಾಗುತ್ತದೆ.ಈ ಹೊಸ ಹೆಜ್ಜೆ ನಿಮ್ಮನ್ನು ಅದೃಷ್ಟದ ಬಳಿ ಕೊಂಡೊಯ್ಯಲಿ. ನೀವು ನಿಮ್ಮ ಗುರಿಯನ್ನು ನಿರ್ಧರಿಸಿದ್ದೀರಿ’ ಎಂದಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’; ‘ಟಾಕ್ಸಿಕ್’ ಟೀಸರ್​ಗೆ ಸುದೀಪ್ ವಿಶ್

‘ಧನ್ಯವಾದಗಳು ಸರ್. ಏಕಾಗ್ರತೆ ಅಥವಾ ಸಮಗ್ರತೆಯನ್ನು ಕಳೆದುಕೊಳ್ಳದೆ, ಪ್ರಾಮಾಣಿಕವಾಗಿ ಮತ್ತು ಧೈರ್ಯದಿಂದ ಉತ್ತಮವಾಗಿ ಹೇಗೆ ಕೆಲಸ ಮಾಡಬೇಕು ಎಂಬುದನ್ನು ನನ್ನ ಹಿರಿಯರಿಂದ ಕಲಿತಿದ್ದೇನೆ. ಆ ಹಿರಿಯರಲ್ಲಿ ನೀವು ಒಬ್ಬರು’ ಎಂದು ಅವರು ಉತ್ತರಿಸಿದ್ದಾರೆ.

ಸುದೀಪ್ ಹಾಗೂ ಯಶ್ ಪರಪಸ್ಪರ ಪ್ರತಿಕ್ರಿಯೆ ನೀಡಿಕೊಂಡ ವಿಷಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಬಾಂಧವ್ಯ ಹೀಗೆಯೇ ಮುಂದುವರಿದರೆ ಚಿತ್ರರಂಗಕ್ಕೆ ಸಹಕಾರಿ ಆಗಲಿದೆ ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ