AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್

ರಾಕಿಂಗ್ ಸ್ಟಾರ್ ಯಶ್ ಅವರ 'ಟಾಕ್ಸಿಕ್' ಟೀಸರ್ ಕುರಿತು ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದಕ್ಕೆ ಯಶ್, 'ಧನ್ಯವಾದಗಳು ಸರ್, ನೀವು ನನ್ನ ಹಿರಿಯರು' ಎಂದು ವಿನಮ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಮೂಲಕ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ವದಂತಿಗಳಿಗೆ ತೆರೆ ಬಿದ್ದಿದ್ದು, ಅವರ ಬಾಂಧವ್ಯ ಗಟ್ಟಿಗೊಂಡಿದೆ.

‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್
ಯಶ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 12, 2026 | 10:03 AM

Share

ರಾಕಿಂಗ್ ಸ್ಟಾರ್ ಯಶ್ (Yash) ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅವರ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು. ಈ ಟೀಸರ್ ಈವರೆಗೆ 83 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಟೀಸರ್ ನೋಡಿದ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ಯಶ್ ಹಾಗೂ ಸುದೀಪ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಇದು ಅಭಿಮಾನಿಗಳ ವಲಯದಲ್ಲಿ ಇರುವ ಚರ್ಚೆ. ಆದರೆ, ಇದನ್ನು ಅವರು ಸುಳ್ಳು ಮಾಡಿದ್ದಾರೆ. ಈ ಮೊದಲು ಒಟ್ಟಿಗೆ ಕಾಣಿಸಿಕೊಂಡಾಗ ಇಬ್ಬರೂ ಪರಸ್ಪರ ಹಗ್ ಮಾಡಿದ್ದು ಇದೆ. ಈಗ ‘ಟಾಕ್ಸಿಕ್’ ವಿಷಯದಲ್ಲಿ ಇವರ ಬಂಧ ಮತ್ತೆ ಸಾಬೀತಾಗಿದೆ.

ಟೀಸರ್ ರಿಲೀಸ್ ಬಳಿಕ ಟ್ವೀಟ್ ಮಾಡಿದ್ದ ಸುದೀಪ್, ‘ಯಶ್​​ಗೆ ಶುಭಾಶಯಗಳು. ಅಲೆಗಳ ವಿರುದ್ಧ ಸಾಗಲು ಯಾವಾಗಲೂ ಸಮಯ ಬೇಕಾಗುತ್ತದೆ.ಈ ಹೊಸ ಹೆಜ್ಜೆ ನಿಮ್ಮನ್ನು ಅದೃಷ್ಟದ ಬಳಿ ಕೊಂಡೊಯ್ಯಲಿ. ನೀವು ನಿಮ್ಮ ಗುರಿಯನ್ನು ನಿರ್ಧರಿಸಿದ್ದೀರಿ’ ಎಂದಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’; ‘ಟಾಕ್ಸಿಕ್’ ಟೀಸರ್​ಗೆ ಸುದೀಪ್ ವಿಶ್

‘ಧನ್ಯವಾದಗಳು ಸರ್. ಏಕಾಗ್ರತೆ ಅಥವಾ ಸಮಗ್ರತೆಯನ್ನು ಕಳೆದುಕೊಳ್ಳದೆ, ಪ್ರಾಮಾಣಿಕವಾಗಿ ಮತ್ತು ಧೈರ್ಯದಿಂದ ಉತ್ತಮವಾಗಿ ಹೇಗೆ ಕೆಲಸ ಮಾಡಬೇಕು ಎಂಬುದನ್ನು ನನ್ನ ಹಿರಿಯರಿಂದ ಕಲಿತಿದ್ದೇನೆ. ಆ ಹಿರಿಯರಲ್ಲಿ ನೀವು ಒಬ್ಬರು’ ಎಂದು ಅವರು ಉತ್ತರಿಸಿದ್ದಾರೆ.

ಸುದೀಪ್ ಹಾಗೂ ಯಶ್ ಪರಪಸ್ಪರ ಪ್ರತಿಕ್ರಿಯೆ ನೀಡಿಕೊಂಡ ವಿಷಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಬಾಂಧವ್ಯ ಹೀಗೆಯೇ ಮುಂದುವರಿದರೆ ಚಿತ್ರರಂಗಕ್ಕೆ ಸಹಕಾರಿ ಆಗಲಿದೆ ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!