AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್

ರಾಕಿಂಗ್ ಸ್ಟಾರ್ ಯಶ್ ಅವರ 'ಟಾಕ್ಸಿಕ್' ಟೀಸರ್ ಕುರಿತು ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದಕ್ಕೆ ಯಶ್, 'ಧನ್ಯವಾದಗಳು ಸರ್, ನೀವು ನನ್ನ ಹಿರಿಯರು' ಎಂದು ವಿನಮ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಮೂಲಕ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ವದಂತಿಗಳಿಗೆ ತೆರೆ ಬಿದ್ದಿದ್ದು, ಅವರ ಬಾಂಧವ್ಯ ಗಟ್ಟಿಗೊಂಡಿದೆ.

‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್
ಯಶ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 12, 2026 | 10:03 AM

Share

ರಾಕಿಂಗ್ ಸ್ಟಾರ್ ಯಶ್ (Yash) ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅವರ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು. ಈ ಟೀಸರ್ ಈವರೆಗೆ 83 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಟೀಸರ್ ನೋಡಿದ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ಯಶ್ ಹಾಗೂ ಸುದೀಪ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಇದು ಅಭಿಮಾನಿಗಳ ವಲಯದಲ್ಲಿ ಇರುವ ಚರ್ಚೆ. ಆದರೆ, ಇದನ್ನು ಅವರು ಸುಳ್ಳು ಮಾಡಿದ್ದಾರೆ. ಈ ಮೊದಲು ಒಟ್ಟಿಗೆ ಕಾಣಿಸಿಕೊಂಡಾಗ ಇಬ್ಬರೂ ಪರಸ್ಪರ ಹಗ್ ಮಾಡಿದ್ದು ಇದೆ. ಈಗ ‘ಟಾಕ್ಸಿಕ್’ ವಿಷಯದಲ್ಲಿ ಇವರ ಬಂಧ ಮತ್ತೆ ಸಾಬೀತಾಗಿದೆ.

ಟೀಸರ್ ರಿಲೀಸ್ ಬಳಿಕ ಟ್ವೀಟ್ ಮಾಡಿದ್ದ ಸುದೀಪ್, ‘ಯಶ್​​ಗೆ ಶುಭಾಶಯಗಳು. ಅಲೆಗಳ ವಿರುದ್ಧ ಸಾಗಲು ಯಾವಾಗಲೂ ಸಮಯ ಬೇಕಾಗುತ್ತದೆ.ಈ ಹೊಸ ಹೆಜ್ಜೆ ನಿಮ್ಮನ್ನು ಅದೃಷ್ಟದ ಬಳಿ ಕೊಂಡೊಯ್ಯಲಿ. ನೀವು ನಿಮ್ಮ ಗುರಿಯನ್ನು ನಿರ್ಧರಿಸಿದ್ದೀರಿ’ ಎಂದಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’; ‘ಟಾಕ್ಸಿಕ್’ ಟೀಸರ್​ಗೆ ಸುದೀಪ್ ವಿಶ್

‘ಧನ್ಯವಾದಗಳು ಸರ್. ಏಕಾಗ್ರತೆ ಅಥವಾ ಸಮಗ್ರತೆಯನ್ನು ಕಳೆದುಕೊಳ್ಳದೆ, ಪ್ರಾಮಾಣಿಕವಾಗಿ ಮತ್ತು ಧೈರ್ಯದಿಂದ ಉತ್ತಮವಾಗಿ ಹೇಗೆ ಕೆಲಸ ಮಾಡಬೇಕು ಎಂಬುದನ್ನು ನನ್ನ ಹಿರಿಯರಿಂದ ಕಲಿತಿದ್ದೇನೆ. ಆ ಹಿರಿಯರಲ್ಲಿ ನೀವು ಒಬ್ಬರು’ ಎಂದು ಅವರು ಉತ್ತರಿಸಿದ್ದಾರೆ.

ಸುದೀಪ್ ಹಾಗೂ ಯಶ್ ಪರಪಸ್ಪರ ಪ್ರತಿಕ್ರಿಯೆ ನೀಡಿಕೊಂಡ ವಿಷಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಬಾಂಧವ್ಯ ಹೀಗೆಯೇ ಮುಂದುವರಿದರೆ ಚಿತ್ರರಂಗಕ್ಕೆ ಸಹಕಾರಿ ಆಗಲಿದೆ ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ