AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾ ಟಿಕೆಟ್ ಬೆಲೆ ಬಗ್ಗೆ ಅಭಿಮಾನಿಗಳಿಗೆ ಶುರುವಾಗಿದೆ ಭಯ

ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ‘ಜನ ನಾಯಗನ್’ ಚಿತ್ರದ ಸಾವಿರ ರೂಪಾಯಿ ಟಿಕೆಟ್ ಬೆಲೆ ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಈಗ ರಾಕಿಂಗ್ ಸ್ಟಾರ್ ಯಶ್ ಅಭಿನಯದ, 500 ಕೋಟಿ ಬಜೆಟ್‌ನ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟಿಕೆಟ್ ದರವೂ ಗಗನಕ್ಕೇರಬಹುದೇ ಎಂಬ ಭೀತಿ ಎದುರಾಗಿದೆ. ಹಾಗಾಗದಿರಲಿ ಎಂಬುದು ಅಭಿಮಾನಿಗಳ ಕೋರಿಕೆ.

‘ಟಾಕ್ಸಿಕ್’ ಸಿನಿಮಾ ಟಿಕೆಟ್ ಬೆಲೆ ಬಗ್ಗೆ ಅಭಿಮಾನಿಗಳಿಗೆ ಶುರುವಾಗಿದೆ ಭಯ
ಜನ ನಾಯಗನ್-ಟಾಕ್ಸಿಕ್
ರಾಜೇಶ್ ದುಗ್ಗುಮನೆ
|

Updated on:Jul 22, 2026 | 12:22 PM

Share

ಮುಖ್ಯಾಂಶಗಳು

  • ‘ಜನ ನಾಯಗನ್’ ಶಾಕ್
  • ಸಿಂಗಲ್ ಸ್ಕ್ರೀನ್‌ನಲ್ಲೇ 1000 ಟಿಕೆಟ್ ಬೆಲೆಗೆ ಫ್ಯಾನ್ಸ್ ಕಂಗಾಲು
  • 500 ಕೋಟಿ ಬಜೆಟ್ ಕಲೆಕ್ಷನ್ ಟಾರ್ಗೆಟ್

ಕೆವಿಎನ್ ಪ್ರೊಡಕ್ಷನ್​ ನಿರ್ಮಾಣದ ‘ಜನ ನಾಯಗನ್’ ಸಿನಿಮಾ (Jana Nayagan) ರಿಲೀಸ್​​ಗೆ ರೆಡಿ ಇದೆ. ಈ ಚಿತ್ರದ ಟಿಕೆಟ್ ಬೆಲೆ ಈಗಾಗಲೇ ಗಗನಕ್ಕೇರಿದೆ. ಏಕಪರದೆ ಚಿತ್ರಮಂದಿರಗಳಲ್ಲೇ ಈ ಚಿತ್ರದ ಟಿಕೆಟ್ ಬೆಲೆ ಬರೋಬ್ಬರಿ ಸಾವಿರ ರೂಪಾಯಿ ತಲುಪಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಹಾಗೂ ಗಾಂಧಿನಗರದಲ್ಲಿ ಈಗಾಗಲೇ ದೊಡ್ಡ ಮಟ್ಟದ ಚರ್ಚೆ ಮತ್ತು ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇದೇ ಹೊತ್ತಲ್ಲಿ, ಇದೇ ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿರೋ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಆಗಸ್ಟ್ 26ರಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ‘ಜನ ನಾಯಗನ್’ ಚಿತ್ರದ ಟಿಕೆಟ್ ದರ ನೋಡಿ ಬೆಚ್ಚಿಬಿದ್ದಿರುವ ಅಭಿಮಾನಿಗಳಿಗೆ, ಈಗ ‘ಟಾಕ್ಸಿಕ್’ ಸಿನಿಮಾದ ಟಿಕೆಟ್ ಬೆಲೆ ಏನಾಗಬಹುದು ಎಂಬ ಆತಂಕ ಹಾಗೂ ಭಯ ಈಗಾಗಲೇ ಶುರುವಾಗಿದೆ.

‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ನಯನತಾರಾ, ರುಕ್ಮಿಣಿ ವಸಂತ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಇದೇ ನಿರೀಕ್ಷೆಯನ್ನೇ ಬಂಡವಾಳ ಮಾಡಿಕೊಳ್ಳಲು ನಿರ್ಮಾಣ ಸಂಸ್ಥೆ ಮುಂದಾದರೆ ಹೇಗೆ ಎಂದು ಅಭಿಮಾನಿಗಳು ಆತಂಕದಲ್ಲಿದ್ದಾರೆ. ‘ಟಾಕ್ಸಿಕ್’ ಟಿಕೆಟ್ ದರ ಹೆಚ್ಚಲು ಕಾರಣವಾಗಬಹುದಾದ ಅಂಶಗಳು ಈ ಕೆಳಗಿನಂತಿವೆ.

ಬಿಗ್ ಬಜೆಟ್ ಸಿನಿಮಾ: ‘ಟಾಕ್ಸಿಕ್’ ಅತಿ ದೊಡ್ಡ ಬಜೆಟ್‌ನಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಚಿತ್ರ. ಪ್ಯಾನ್-ಇಂಡಿಯಾ ಮಟ್ಟದಲ್ಲಿ ಮೂಡಿಬರುತ್ತಿರುವ ಕಾರಣ ನಿರ್ಮಾಣ ವೆಚ್ಚ 500 ಕೋಟಿ ರೂಪಾಯಿ ದಾಟಿದೆ. ಈ ಭಾರಿ ವೆಚ್ಚವನ್ನು ಸರಿದೂಗಿಸಲು ಟಿಕೆಟ್ ದರ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ.

ಹೆಚ್ಚು ಕಮಾಯಿ ಮಾಡುವ ಉದ್ದೇಶ: ಇತ್ತೀಚಿನ ದಿನಗಳಲ್ಲಿ ದೊಡ್ಡ ಸಿನಿಮಾಗಳು ಮೊದಲ ವಾರದಲ್ಲೇ ಗರಿಷ್ಠ ಕಲೆಕ್ಷನ್ ಮಾಡುವ ಗುರಿ ಹೊಂದಿರುತ್ತವೆ. ಆರಂಭದ ದಿನಗಳ ಕ್ರೇಜ್ ಬಳಸಿಕೊಂಡು ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆಯಲು ನಿರ್ಮಾಪಕರು ಮತ್ತು ವಿತರಕರು ಟಿಕೆಟ್ ದರವನ್ನು ಹೆಚ್ಚಿಸಲು ಮುಂದಾಗುತ್ತಾರೆ.

ಬಹುನಿರೀಕ್ಷಿತ ಸಿನಿಮಾ: ‘ಕೆಜಿಎಫ್ 2’ ನಂತರ ತೆರೆಗೆ ಬರುತ್ತಿರುವ ಯಶ್ ಚಿತ್ರ ಇದಾಗಿರುವುದರಿಂದ ಚಿತ್ರದ ಮೇಲಿನ ನಿರೀಕ್ಷೆ ಬೆಟ್ಟದಷ್ಟಿದೆ. ಇಂತಹ ಹೈ-ಹೈಪ್ ಇರುವ ಬಹುನಿರೀಕ್ಷಿತ ಸಿನಿಮಾಗಳನ್ನು ನೋಡಲು ಅಭಿಮಾನಿಗಳು ಮುಗಿಬೀಳುತ್ತಾರೆ ಎಂಬ ನಂಬಿಕೆಯಿಂದ ಸಹಜವಾಗಿಯೇ ಟಿಕೆಟ್ ದರ ದುಬಾರಿಯಾಗುವ ಆತಂಕ ಎದುರಾಗಿದೆ.

ಇದನ್ನೂ ಓದಿ: ಸೆನ್ಸಾರ್ ಕಟ್ ಇಲ್ಲದೆ ಜನ ನಾಯಗನ್ ಸಿನಿಮಾ ನೋಡಲು ವಿಜಯ್ ಅಭಿಮಾನಿಗಳಿಗೆ ಸುವರ್ಣಾವಕಾಶ

ಒಟ್ಟಿನಲ್ಲಿ ‘ಜನ ನಾಯಗನ್’ ಹಾದಿಯಲ್ಲೇ ‘ಟಾಕ್ಸಿಕ್’ ಸಿನಿಮಾ ಕೂಡ ಸಾಗಿದರೆ, ಸಾಮಾನ್ಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುವುದು ಕಷ್ಟ ಎಂಬ ಮಾತುಗಳು ಕೇಳಿಬರುತ್ತಿವೆ. ಯಶ್ ಕೂಡ ಈ ಚಿತ್ರದ ಸಹನಿರ್ಮಾಪಕರು. ಅವರು ಅಭಿಮಾನಿಗಳಿಗಾಗಿ ಟಿಕೆಟ್ ಬೆಲೆ ಕಡಿಮೆ ಇಡೋ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದು ಅನೇಕರ ಒತ್ತಾಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:48 am, Tue, 21 July 26

Follow Us
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!