AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಕಿ ಪಾತ್ರವನ್ನೂ ಮರೆಸುತ್ತದೆ ಈ ಟಾಕ್ಸಿಕ್’; ಯಶ್ 19 ಟೈಟಲ್ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ಎಲ್ಲರ ಮನದಲ್ಲೂ ಯಶ್ ಎಂದಾಗ ನೆನಪಾಗೋದು ‘ಕೆಜಿಎಫ್’ ಸರಣಿಯ ‘ರಾಕಿ ಭಾಯ್’ ಪಾತ್ರ. ಈ ಪಾತ್ರವನ್ನು ‘ಟಾಕ್ಸಿಕ್’ ಮರೆಸಲಿದೆ ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಟೈಟಲ್ ಸಾಕಷ್ಟು ಭಿನ್ನವಾಗಿದೆ.

‘ರಾಕಿ ಪಾತ್ರವನ್ನೂ ಮರೆಸುತ್ತದೆ ಈ ಟಾಕ್ಸಿಕ್’; ಯಶ್ 19 ಟೈಟಲ್ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್
ಯಶ್
TV9 Web
| Edited By: |

Updated on: Dec 08, 2023 | 12:03 PM

Share

ಸಿನಿಮಾಗೆ ಹೈಪ್ ಹೆಚ್ಚಿದ್ದಾಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಹಲ್​ಚಲ್ ಸೃಷ್ಟಿ ಆಗುತ್ತದೆ. ‘ಯಶ್ 19’ (Yash 19 Movie) ಚಿತ್ರದ ಬಗ್ಗೆ ಇದ್ದ ನಿರೀಕ್ಷೆ ಅಷ್ಟಿಷ್ಟಲ್ಲ. ಇಂದು (ಡಿಸೆಂಬರ್ 8) ಈ ಚಿತ್ರದ ಟೈಟಲ್ ಅನಾವರಣ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಸಿನಿಮಾದ ಟೈಟಲ್ ಸಾಕಷ್ಟು ಸದ್ದು ಮಾಡುತ್ತಿದೆ. ‘ಟಾಕ್ಸಿಕ್’ ಎಂಬ ಟೈಟಲ್​ನ ಯಾಕೆ ಇಡಲಾಗಿದೆ ಎನ್ನುವುದರ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಿನಿಮಾದ ಟೈಟಲ್ ನೋಡಿದ ಫ್ಯಾನ್ಸ್ ವಿಮರ್ಶೆ ತಿಳಿಸುತ್ತಿದ್ದಾರೆ.

‘ಟಾಕ್ಸಿಕ್’ ಸಿನಿಮಾ ಟೈಟಲ್ ಸಾಕಷ್ಟು ಭಿನ್ನವಾಗಿದೆ. ಯಶ್ ಅವರ ಲುಕ್ ಹೇಗಿರಬಹುದು ಎಂಬುದನ್ನು ಕೂಡ ತೋರಿಸಲಾಗಿದೆ. ಸಿನಿಮಾದ ಕಥೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ‘ಟಾಕ್ಸಿಕ್’ ಸಿನಿಮಾಗೆ ಯಶ್ ಹೀರೋ, ಗೀತು ಮೋಹನ್​ದಾಸ್ ನಿರ್ದೇಶಕಿ, ಕೆವಿಎನ್ ಪ್ರೊಡಕ್ಷನ್ ಬಂಡವಾಳ ಹೂಡುತ್ತಿದೆ ಎಂಬ ಮಾಹಿತಿಯನ್ನು ಮಾತ್ರ ಸದ್ಯಕ್ಕೆ ರಿವೀಲ್ ಮಾಡಲಾಗಿದೆ. ಟೈಟಲ್ ನೋಡಿ ಅಭಿಮಾನಿಗಳ ವಲಯದಲ್ಲಿ ಸಂಭ್ರಮಾಚರಣೆ ಶುರುವಾಗಿದೆ.

ಇದನ್ನೂ ಓದಿ: Toxic Movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ರಿಲೀಸ್ ಆಗೋದು ಯಾವಾಗ? ಇಲ್ಲಿದೆ ವಿವರ

ಎಲ್ಲರ ಮನದಲ್ಲೂ ಯಶ್ ಎಂದಾಗ ನೆನಪಾಗೋದು ‘ಕೆಜಿಎಫ್’ ಸರಣಿಯ ‘ರಾಕಿ ಭಾಯ್’ ಪಾತ್ರ. ಈ ಪಾತ್ರವನ್ನು ‘ಟಾಕ್ಸಿಕ್’ ಮರೆಸಲಿದೆ ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ‘ಟಾಕ್ಸಿಕ್ ಸಿನಿಮಾ ಗ್ಯಾಂಬ್ಲಿಂಗ್ ಕುರಿತು ಇದೆ ಅನ್ನಿಸುತ್ತಿದೆ. ಸಿನಿಮಾದ ರಿಲೀಸ್ ದಿನಾಂಕವನ್ನೂ ರಿವೀಲ್ ಮಾಡಲಾಗಿದೆ. ಜನವರಿ 8ರಂದು ನಾವು ಏನನ್ನು ನಿರೀಕ್ಷಿಸಬಹುದು’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Toxic: ಯಶ್​ ಹೊಸ ಚಿತ್ರದ ನಿರ್ದೇಶಕಿ ಗೀತು ಮೋಹನ್​ದಾಸ್​ ಯಾರು? ಇಲ್ಲಿದೆ ಪರಿಚಯ

ಗೀತು ಮೋಹನ್​ದಾಸ್ ಅವರು ಎರಡು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಈಗ ಮೂರನೇ ಸಿನಿಮಾಗೆ ಅವರಿಗೆ ಯಶ್ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ‘ರಾಜಮೌಳಿ, ಪ್ರಶಾಂತ್ ನೀಲ್ ಅವರಂತೆ ಇಂಡಸ್ಟ್ರಿಯಲ್ಲಿ ಹೊಸ ಹೆಸರು ಗೀತು ಮೋಹನ್​ದಾಸ್​’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರಿಗೆ ಶೀರ್ಷಿಕೆಯಲ್ಲಿ ಬಳಕೆಯಾದ ಬಿಜಿಎಂ ಇಷ್ಟ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ