AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲೇ ನಡೆಯಲಿದೆ ‘ಟಾಕ್ಸಿಕ್’ ಟ್ರೇಲರ್ ಲಾಂಚ್; ಆದರೆ, ಅಭಿಮಾನಿಗಳಿಗೆ ನಿರಾಸೆ

ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಯಶ್ ಅವರ ಪ್ಯಾನ್ ಇಂಡಿಯಾ ಜನಪ್ರಿಯತೆ ಕಾರಣ, ದೇಶ-ವಿದೇಶದ ಮಾಧ್ಯಮ ಪ್ರತಿನಿಧಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ, ಸುರಕ್ಷತಾ ಕಾರಣಗಳಿಂದಾಗಿ ಕಾರ್ಯಕ್ರಮಕ್ಕೆ ಅಭಿಮಾನಿಗಳ ಪ್ರವೇಶ ನಿರ್ಬಂಧಿಸಲಾಗಿದೆ. ಇದು ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ.

ಬೆಂಗಳೂರಲ್ಲೇ ನಡೆಯಲಿದೆ ‘ಟಾಕ್ಸಿಕ್’ ಟ್ರೇಲರ್ ಲಾಂಚ್; ಆದರೆ, ಅಭಿಮಾನಿಗಳಿಗೆ ನಿರಾಸೆ
ಯಶ್
ರಾಜೇಶ್ ದುಗ್ಗುಮನೆ
|

Updated on: Mar 03, 2026 | 6:52 AM

Share

ರಾಕಿಂಗ್ ಸ್ಟಾರ್ ಯಶ್ (Yash) ಈಗ ಪ್ಯಾನ್ ಇಂಡಿಯಾ ಸ್ಟಾರ್. ಅವರು ‘ಟಾಕ್ಸಿಕ್’ ಆರಂಭಿಸುವಾಗಲೇ, ‘ನಾನು ಪರಭಾಷೆಗೆ ಹೋಗಲ್ಲ, ಅವರನ್ನೇ ಇಲ್ಲಿಗೆ ಕರೆಯುತ್ತೇನೆ’ ಎಂದು ಹೇಳಿದ್ದರು. ಈ ಮಾತನ್ನು ನಿಜ ಮಾಡಿದ್ದಾರೆ. ಈಗ ಟ್ರೇಲರ್ ಲಾಂಚ್ ಈವೆಂಟ್ ಬೆಂಗಳೂರಲ್ಲೇ ನಡೆಯುತ್ತಿದ್ದು, ದೇಶ-ವಿದೇಶದ ಪತ್ರಕರ್ತರು ಆಗಮಿಸುವ ನಿರೀಕ್ಷೆ ಇದೆ. ಆದರೆ, ಈ ವಿಷಯದಲ್ಲಿ ಅಭಿಮಾನಿಗಳಿಗೆ ನಿರಾಸೆ ಕಾದಿದೆ.

ರಾಕಿಂಗ್ ಸ್ಟಾರ್ ಯಶ್ ಅವರು ‘ಕೆಜಿಎಫ್ 2’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮಿದರು.ಆ ಬಳಿಕ ಅವರು ಕೈಗೆತ್ತಿಕೊಂಡ ಚಿತ್ರ ಎಂದರೆ ‘ಟಾಕ್ಸಿಕ್’. ಈ ಚಿತ್ರಕ್ಕಾಗಿ ಫ್ಯಾನ್ಸ್ ಬರೋಬ್ಬರಿ ನಾಲ್ಕು ವರ್ಷ ಕಾದಿದ್ದಾರೆ. ಈ ಚಿತ್ರಕ್ಕೆ ಸರಿಯಾಗಿ ಪ್ರಚಾರ ಕೊಡಲಾಗುತ್ತಿಲ್ಲ ಎಂಬ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಈಗ ಟ್ರೇಲರ್ ಲಾಂಚ್ ಮೂಲಕ ಜನರನ್ನು ಸೆಳೆದುಕೊಳ್ಳಲು ಯಶ್ ರೆಡಿ ಆಗಿದ್ದಾರೆ.

ಯಶ್ ಪ್ಲ್ಯಾನ್ ಪ್ರಕಾರ ಭಾನುವಾರ (ಫೆಬ್ರವರಿ 8) ಟ್ರೇಲರ್ ಲಾಂಚ್ ಈವೆಂಟ್ ಬೆಂಗಳೂರಲ್ಲೇ ನಡೆಯಲಿದೆ. ಕರ್ನಾಟಕದ ಪತ್ರಕರ್ತರ ಜೊತೆ ಬೇರೆ ಬೇರೆ ಭಾಷೆಯ ಪತ್ರಕರ್ತರು ಇದಕ್ಕೆ ಹಾಜರಿ ಹಾಕುವ ನಿರೀಕ್ಷೆ ಇದೆ. ಆದರೆ, ಈ ಈವೆಂಟ್ ಮಲ್ಟಿಪ್ಲೆಕ್ಸ್ ಒಂದರಲ್ಲಿ ನಡೆಯುತ್ತಿರುವುದರಿಂದ ಅಭಿಮಾನಿಗಳ ಪ್ರವೇಶಕ್ಕೆ ಅವಕಾಶ ಇಲ್ಲ. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ.

ಪರಭಾಷೆಯಲ್ಲಿ ಪ್ರೀ ರಿಲೀಸ್ ಈವೆಂಟ್ ಅನ್ನು ಓಪನ್ ಗ್ರೌಂಡ್ ಅಲ್ಲಿ ಮಾಡಲಾಗುತ್ತದೆ. ‘ಟಾಕ್ಸಿಕ್’ ಕೂಡ ಅದೇ ರೀತಿ ಮಾಡಬೇಕಿತ್ತು ಎಂಬುದು ಅಭಿಮಾಗಳ ಕೋರಿಕೆ. ಆದರೆ, ಬೆಂಗಳೂರಲ್ಲಿ ನಡೆದ ಆರ್​​ಸಿಬಿ ಈವೆಂಟ್ ಕಾಲ್ತುಳಿತದ ಬಳಿಕ ಯಾರೊಬ್ಬರೂ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ರಿಸ್ಕ್ ತೆಗೆದುಕೊಳ್ಳುತ್ತಿಲ್ಲ. ಒಂದೊಮ್ಮೆ ಈವೆಂಟ್ ಮಾಡಿ ಏನಾದರೂ ತೊಂದರೆ ಆದರೆ, ಆ ರಿಸ್ಕ್​​ನ ಇವರೇ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹೀಗಾಗಿ, ರಿಸ್ಕ್ ಬೇಡ ಎಂಬ ನಿರ್ಧಾರಕ್ಕೆ ಯಶ್ ಬಂದಂತೆ ಇದೆ.

ಇದನ್ನೂ ಓದಿ: ‘ಟಾಕ್ಸಿಕ್’ಗೆ ತಿರುಗೇಟು ಕೊಡಲು ಸರ್​​​ಪ್ರೈಸ್ ಶಾಕ್ ರೆಡಿ ಮಾಡಿದ ‘ಧುರಂಧರ್ 2’

ಗೀತು ಮೋಹನ್​ದಾಸ್ ಅವರು ‘ಟಾಕ್ಸಿಕ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಕೆವಿಎನ್ ಹಾಗೂ ಯಶ್ ಒಟ್ಟಾಗಿ ಸಿನಿಮಾ ನಿರ್ಮಿಸಿದ್ದಾರೆ. ಮಾರ್ಚ್ 19ರಂದು ಚಿತ್ರ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು