AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲೇ ನಡೆಯಲಿದೆ ‘ಟಾಕ್ಸಿಕ್’ ಟ್ರೇಲರ್ ಲಾಂಚ್; ಆದರೆ, ಅಭಿಮಾನಿಗಳಿಗೆ ನಿರಾಸೆ

ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಯಶ್ ಅವರ ಪ್ಯಾನ್ ಇಂಡಿಯಾ ಜನಪ್ರಿಯತೆ ಕಾರಣ, ದೇಶ-ವಿದೇಶದ ಮಾಧ್ಯಮ ಪ್ರತಿನಿಧಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ, ಸುರಕ್ಷತಾ ಕಾರಣಗಳಿಂದಾಗಿ ಕಾರ್ಯಕ್ರಮಕ್ಕೆ ಅಭಿಮಾನಿಗಳ ಪ್ರವೇಶ ನಿರ್ಬಂಧಿಸಲಾಗಿದೆ. ಇದು ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ.

ಬೆಂಗಳೂರಲ್ಲೇ ನಡೆಯಲಿದೆ ‘ಟಾಕ್ಸಿಕ್’ ಟ್ರೇಲರ್ ಲಾಂಚ್; ಆದರೆ, ಅಭಿಮಾನಿಗಳಿಗೆ ನಿರಾಸೆ
ಯಶ್
ರಾಜೇಶ್ ದುಗ್ಗುಮನೆ
|

Updated on: Mar 03, 2026 | 6:52 AM

Share

ರಾಕಿಂಗ್ ಸ್ಟಾರ್ ಯಶ್ (Yash) ಈಗ ಪ್ಯಾನ್ ಇಂಡಿಯಾ ಸ್ಟಾರ್. ಅವರು ‘ಟಾಕ್ಸಿಕ್’ ಆರಂಭಿಸುವಾಗಲೇ, ‘ನಾನು ಪರಭಾಷೆಗೆ ಹೋಗಲ್ಲ, ಅವರನ್ನೇ ಇಲ್ಲಿಗೆ ಕರೆಯುತ್ತೇನೆ’ ಎಂದು ಹೇಳಿದ್ದರು. ಈ ಮಾತನ್ನು ನಿಜ ಮಾಡಿದ್ದಾರೆ. ಈಗ ಟ್ರೇಲರ್ ಲಾಂಚ್ ಈವೆಂಟ್ ಬೆಂಗಳೂರಲ್ಲೇ ನಡೆಯುತ್ತಿದ್ದು, ದೇಶ-ವಿದೇಶದ ಪತ್ರಕರ್ತರು ಆಗಮಿಸುವ ನಿರೀಕ್ಷೆ ಇದೆ. ಆದರೆ, ಈ ವಿಷಯದಲ್ಲಿ ಅಭಿಮಾನಿಗಳಿಗೆ ನಿರಾಸೆ ಕಾದಿದೆ.

ರಾಕಿಂಗ್ ಸ್ಟಾರ್ ಯಶ್ ಅವರು ‘ಕೆಜಿಎಫ್ 2’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮಿದರು.ಆ ಬಳಿಕ ಅವರು ಕೈಗೆತ್ತಿಕೊಂಡ ಚಿತ್ರ ಎಂದರೆ ‘ಟಾಕ್ಸಿಕ್’. ಈ ಚಿತ್ರಕ್ಕಾಗಿ ಫ್ಯಾನ್ಸ್ ಬರೋಬ್ಬರಿ ನಾಲ್ಕು ವರ್ಷ ಕಾದಿದ್ದಾರೆ. ಈ ಚಿತ್ರಕ್ಕೆ ಸರಿಯಾಗಿ ಪ್ರಚಾರ ಕೊಡಲಾಗುತ್ತಿಲ್ಲ ಎಂಬ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಈಗ ಟ್ರೇಲರ್ ಲಾಂಚ್ ಮೂಲಕ ಜನರನ್ನು ಸೆಳೆದುಕೊಳ್ಳಲು ಯಶ್ ರೆಡಿ ಆಗಿದ್ದಾರೆ.

ಯಶ್ ಪ್ಲ್ಯಾನ್ ಪ್ರಕಾರ ಭಾನುವಾರ (ಫೆಬ್ರವರಿ 8) ಟ್ರೇಲರ್ ಲಾಂಚ್ ಈವೆಂಟ್ ಬೆಂಗಳೂರಲ್ಲೇ ನಡೆಯಲಿದೆ. ಕರ್ನಾಟಕದ ಪತ್ರಕರ್ತರ ಜೊತೆ ಬೇರೆ ಬೇರೆ ಭಾಷೆಯ ಪತ್ರಕರ್ತರು ಇದಕ್ಕೆ ಹಾಜರಿ ಹಾಕುವ ನಿರೀಕ್ಷೆ ಇದೆ. ಆದರೆ, ಈ ಈವೆಂಟ್ ಮಲ್ಟಿಪ್ಲೆಕ್ಸ್ ಒಂದರಲ್ಲಿ ನಡೆಯುತ್ತಿರುವುದರಿಂದ ಅಭಿಮಾನಿಗಳ ಪ್ರವೇಶಕ್ಕೆ ಅವಕಾಶ ಇಲ್ಲ. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ.

ಪರಭಾಷೆಯಲ್ಲಿ ಪ್ರೀ ರಿಲೀಸ್ ಈವೆಂಟ್ ಅನ್ನು ಓಪನ್ ಗ್ರೌಂಡ್ ಅಲ್ಲಿ ಮಾಡಲಾಗುತ್ತದೆ. ‘ಟಾಕ್ಸಿಕ್’ ಕೂಡ ಅದೇ ರೀತಿ ಮಾಡಬೇಕಿತ್ತು ಎಂಬುದು ಅಭಿಮಾಗಳ ಕೋರಿಕೆ. ಆದರೆ, ಬೆಂಗಳೂರಲ್ಲಿ ನಡೆದ ಆರ್​​ಸಿಬಿ ಈವೆಂಟ್ ಕಾಲ್ತುಳಿತದ ಬಳಿಕ ಯಾರೊಬ್ಬರೂ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ರಿಸ್ಕ್ ತೆಗೆದುಕೊಳ್ಳುತ್ತಿಲ್ಲ. ಒಂದೊಮ್ಮೆ ಈವೆಂಟ್ ಮಾಡಿ ಏನಾದರೂ ತೊಂದರೆ ಆದರೆ, ಆ ರಿಸ್ಕ್​​ನ ಇವರೇ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹೀಗಾಗಿ, ರಿಸ್ಕ್ ಬೇಡ ಎಂಬ ನಿರ್ಧಾರಕ್ಕೆ ಯಶ್ ಬಂದಂತೆ ಇದೆ.

ಇದನ್ನೂ ಓದಿ: ‘ಟಾಕ್ಸಿಕ್’ಗೆ ತಿರುಗೇಟು ಕೊಡಲು ಸರ್​​​ಪ್ರೈಸ್ ಶಾಕ್ ರೆಡಿ ಮಾಡಿದ ‘ಧುರಂಧರ್ 2’

ಗೀತು ಮೋಹನ್​ದಾಸ್ ಅವರು ‘ಟಾಕ್ಸಿಕ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಕೆವಿಎನ್ ಹಾಗೂ ಯಶ್ ಒಟ್ಟಾಗಿ ಸಿನಿಮಾ ನಿರ್ಮಿಸಿದ್ದಾರೆ. ಮಾರ್ಚ್ 19ರಂದು ಚಿತ್ರ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು