AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಎದುರು ಬರಲು ರೆಡಿ ಆಯ್ತು ಬಾಲಿವುಡ್​​ನ ಸ್ಟಾರ್ ನಟನ ಸಿನಿಮಾ

'ಟಾಕ್ಸಿಕ್' ಚಿತ್ರದ ಬಿಡುಗಡೆ ದಿನಾಂಕ ಜೂನ್ 4ಕ್ಕೆ ಮುಂದೂಡಲಾಗಿದೆ. ಈ ನಡುವೆ ಸಲ್ಮಾನ್ ಖಾನ್ ಅಭಿನಯದ 'ಮಾತೃಭೂಮಿ' ಸಿನಿಮಾ (ಹಿಂದಿನ 'ಬ್ಯಾಟಲ್ ಆಫ್ ಗಲ್ವಾನ್') ಕೂಡ ಜೂನ್ ತಿಂಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ. ರೀಶೂಟ್, ಸೆನ್ಸಾರ್ ವಿಳಂಬದಿಂದ ಮೇ 15ರ ಬಿಡುಗಡೆ ಸಾಧ್ಯವಾಗಿಲ್ಲ. 'ಮಾತೃಭೂಮಿ' 'ಟಾಕ್ಸಿಕ್' ಜೊತೆ ಕ್ಲಾಶ್ ಆಗುವ ಸಾಧ್ಯತೆ ಇದೆ.

‘ಟಾಕ್ಸಿಕ್’ ಎದುರು ಬರಲು ರೆಡಿ ಆಯ್ತು ಬಾಲಿವುಡ್​​ನ ಸ್ಟಾರ್ ನಟನ ಸಿನಿಮಾ
ಟಾಕ್ಸಿಕ್
ರಾಜೇಶ್ ದುಗ್ಗುಮನೆ
|

Updated on: Apr 08, 2026 | 9:08 AM

Share

‘ಟಾಕ್ಸಿಕ್’ vs ‘ಧುರಂಧರ್ 2’ ಸಿನಿಮಾ ಮಧ್ಯೆ ಕ್ಲ್ಯಾಶ್ ಆಗಲಿದೆ ಎಂದು ಎಲ್ಲರೂ ನಂಬಿದ್ದರು. ಆದರೆ, ಅದು ಸುಳ್ಳಾಯಿತು. ‘ಟಾಕ್ಸಿಕ್’ ಸಿನಿಮಾ ತನ್ನ ರಿಲೀಸ್ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಿದೆ. ಈ ಮೂಲಕ ದೊಡ್ಡ ಕ್ಲ್ಯಾಶ್ ತಪ್ಪಿದೆ. ಹೀಗಿರುವಾಗಲೇ ‘ಟಾಕ್ಸಿಕ್’ ಸಿನಿಮಾ (Toxic Movie) ಎದುರು ಒಂದು ದೊಡ್ಡ ಸಿನಿಮಾ ತೆರೆಗೆ ಬರಲು ರೆಡಿ ಆಗಿದೆ. ಅದು ಬೇರೆ ಯಾವೂದು ಅಲ್ಲ,ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ ಚಿತ್ರ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಬಾರಿ ಈದ್​ಗೆ ‘ಮಾತೃಭೂಮಿ’ ರಿಲೀಸ್ ಆಗಬೇಕಿತ್ತು. ಆದರೆ, ಸಿನಿಮಾ ರೀಶೂಟ್ ಕಾರಣಕ್ಕೆ ರಿಲೀಸ್ ಮುಂದಕ್ಕೆ ಹೋಯಿತು. ಈ ಚಿತ್ರದ ಟೈಟಲ್ (ಮೊದಲ ಟೈಟಲ್ ಬ್ಯಾಟಲ್ ಆಫ್ ಗಲ್ವಾನ್) ಹಾಗೂ ಕಥೆ ಬದಲಿಸಿ 40 ದಿನ ಮರುಚಿತ್ರೀಕರಣ ಮಾಡಲಾಗಿದೆ. ಮೇ 15ರಂದು ಚಿತ್ರ ತೆರೆಗೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ, ಈ ದಿನಾಂಕ ಕೂಡ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಮೇ 15 ಎಂದರೆ ಶಾಲಾ-ಕಾಲೇಜಿಗೆ ರಜೆ ಇರುತ್ತದೆ. ಆದರೆ. ಈ ರಜೆಯ ಲಾಭ ಪಡೆಯಲು ಸಲ್ಮಾನ್ ಖಾನ್ ಮುಂದಾಗಿದ್ದರು. ಆದರೆ, ಅದು ಅಸಾಧ್ಯ ಎಂಬ ರೀತಿಯಲ್ಲಿದೆ. ಇದು ಭಾರತ ಹಾಗೂ ಚೀನಾ ನಡುವಿನ ಗಲ್ವಾನ್ ಘರ್ಷಣೆಯ ವಿಷಯ. ಈ ವಿಷಯದಲ್ಲಿ ಕೊಂಚ ಎಡವಟ್ಟಾದರೂ ಭಾರತ ಹಾಗೂ ಚೀನಾ ಸಂಬಂಧ ಹದಗೆಡಬಹುದು. ಹೀಗಾಗಿ ಸೆನ್ಸಾರ್ ಮಂಡಳಿಯವರು ವಿಸ್ತೃತವಾಗಿ ಸಿನಿಮಾ ನೋಡುವ ಸಾಧ್ಯತೆ ಇದೆ.

ಸದ್ಯ ಪೋಸ್ಟ್ ಪ್ರೊಕಡ್ಷನ್ ಕೆಲಸಗಳು ನಡೆಯುತ್ತಿವೆ. ಸಿನಿಮಾ ಸಂಪೂರ್ಣವಾಗಿ ಸಿದ್ಧಗೊಳ್ಳಲು ಇನ್ನೂ ಸಾಕಷ್ಟು ಸಮಯ ಬೇಕಾಗುತ್ತದೆ. ಹೀಗಾಗಿ, ಸದ್ಯದ ಮಟ್ಟಿಗೆ ಮಾತೃಭೂಮಿ ಸಿನಿಮಾ ಮೇ 15ರಂದು ರಿಲೀಸ್ ಆಗಲು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರದಲ್ಲಿ ಯಾವ ಪಾತ್ರ? ಕೊನೆಗೂ ಮೌನ ಮುರಿದ ಟೊವಿನೋ ಥಾಮಸ್

ಈ ಎಲ್ಲಾ ಕಾರಣದಿಂದ ಸಿನಿಮಾ ರಿಲೀಸ್ ಜೂನ್​​ಗೆ ಹೋಗಿದೆ. ಜೂನ್ 4ರಂದು ‘ಟಾಕ್ಸಿಕ್’ ಸಿನಿಮಾ ಬರುತ್ತಿದೆ. ಈ ಸಂದರ್ಭದಲ್ಲೇ ‘ಮಾತೃಭೂಮಿ’ ಕೂಡ ರಿಲೀಸ್ ಆಗಬಹುದು ಎಂದು ಹೇಳಲಾಗುತ್ತಾ ಇದೆ. ಸಲ್ಮಾನ್​ ಖಾನ್​​ಗೆ ಬಾಲಿವುಡ್​​ನಲ್ಲಿ ಬೇಡಿಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ