AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದು ಮಾಡುತ್ತಿದೆ ‘ಫ್ಯಾಮಿಲಿ ಡ್ರಾಮಾ’ ಟ್ರೇಲರ್​; ಭರವಸೆ ಮೂಡಿಸಿದ ಹೊಸ ಸಿನಿಮಾ ತಂಡ

ಟ್ರೇಲರ್​ ಮೂಲಕ ಸಿನಿಪ್ರಿಯರ ಗಮನ ಸೆಳೆದ ‘ಫ್ಯಾಮಿಲಿ ಡ್ರಾಮಾ’ ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾಗೆ ಹೊಸ ಡೈರೆಕ್ಟರ್​ ಆಕರ್ಷ್​ ಅವರು ನಿರ್ದೇಶನ ಮಾಡಿದ್ದಾರೆ. ಸಿಂಧು ಶ್ರೀನಿವಾಸ್​ ಮೂರ್ತಿ, ಅಭಯ್​, ಪೂರ್ಣಚಂದ್ರ ಮೈಸೂರು, ಅನನ್ಯಾ ಅಮರ್​, ಮಹದೇವ್​ ಹಡಪದ್​ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಸದ್ದು ಮಾಡುತ್ತಿದೆ ‘ಫ್ಯಾಮಿಲಿ ಡ್ರಾಮಾ’ ಟ್ರೇಲರ್​; ಭರವಸೆ ಮೂಡಿಸಿದ ಹೊಸ ಸಿನಿಮಾ ತಂಡ
ಫ್ಯಾಮಿಲಿ ಡ್ರಾಮಾ
ಮದನ್​ ಕುಮಾರ್​
|

Updated on: Apr 29, 2024 | 6:02 PM

Share

ಕನ್ನಡ ಚಿತ್ರರಂಗದಲ್ಲಿ (Sandalwood) ಬೇರೆ ಬೇರೆ ರೀತಿಯ ಪ್ರಯೋಗಗಳು ನಡೆಯುತ್ತಿವೆ. ಅಂಥ ಡಿಫರೆಂಟ್​ ಪ್ರಯತ್ನ ಯಾವಾಗಲೂ ಪ್ರೇಕ್ಷಕರ ಗಮನ ಸೆಳೆಯುತ್ತದೆ. ಈಗ ‘ಫ್ಯಾಮಿಲಿ ಡ್ರಾಮಾ’ (Family Drama) ಚಿತ್ರತಂಡ ತಮ್ಮ ಹೊಸ ಬಗೆಯ ಕಹಾನಿ ಮತ್ತು ಟ್ರೇಲರ್​ ಮೂಲಕ ಸುದ್ದಿ ಆಗುತ್ತಿದೆ. ಇದೊಂದು ಹೊಸಬರ ತಂಡ ಮಾಡಿದ ಸಿನಿಮಾ. ಅದೇ ಕಾರಣಕ್ಕೆ ಇದರಲ್ಲಿ ಹೊಸತನ ಕಾಣಿಸುತ್ತಿದೆ. ‘ಫ್ಯಾಮಿಲಿ ಡ್ರಾಮಾ’ ಟ್ರೇಲರ್​ (Family Drama Trailer) ನೋಡಿ ಪ್ರೇಕ್ಷಕರು ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಈ ಹೊಸ ಟೀಮ್​ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ…

ಸಿನಿಮಾ ಮೇಲಿನ ಕುತೂಹಲ ಹೆಚ್ಚಿಸುವಲ್ಲಿ ‘ಫ್ಯಾಮಿಲಿ ಡ್ರಾಮಾ’ ಟ್ರೇಲರ್​ ಯಶಸ್ವಿ ಆಗಿದೆ. ಬಹಳ ಕ್ರಿಯೇಟಿವ್​ ಆಗಿ ಈ ಟ್ರೇಲರ್​ ಮೂಡಿಬಂದಿದೆ. ಇದರ ಮೇಕಿಂಗ್​ ಕೂಡ ಗಮನ ಸೆಳೆಯುತ್ತಿದೆ. ಹೊಸ ನಿರ್ದೇಶಕ ಆಕರ್ಷ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇದು ಅವರ ನಿರ್ದೇಶನದಲ್ಲಿ ಸಿದ್ಧವಾದ ಮೊದಲ ಸಿನಿಮಾ. ಈ ಮೊದಲು ಕೆಲವು ಕಿರುಚಿತ್ರಗಳನ್ನು ಅವರು ಮಾಡಿದ್ದಾರೆ. ರಿಷಬ್ ಶೆಟ್ಟಿಯ ತಂಡದಲ್ಲಿ ಕೆಲಸ ಮಾಡಿದ ಅನುಭವ ಆಕರ್ಷ್​ ಅವರಿಗೆ ಇದೆ. ಬಿಡುಗಡೆ ಸಿದ್ಧವಾಗಿರುವ ‘ಲಾಫಿಂಗ್ ಬುದ್ದ’ ಚಿತ್ರತಂಡದಲ್ಲಿ ಆಕರ್ಷ್ ಅವರು ಕೆಲಸ ಮಾಡಿದ್ದಾರೆ.

‘ಫ್ಯಾಮಿಲಿ ಡ್ರಾಮಾ’ ಸಿನಿಮಾದಲ್ಲಿ ಪ್ರತಿಭಾವಂತ ಕಲಾವಿದರು ಅಭಿನಯಿಸಿದ್ದಾರೆ. ‘ಆಚಾರ್ ಆ್ಯಂಡ್ ಕೋ’ ಸಿನಿಮಾಗೆ ನಿರ್ದೇಶನ ಮಾಡಿ ನಟಿಸಿದ್ದ ಸಿಂಧೂ ಶ್ರೀನಿವಾಸ ಮೂರ್ತಿ ಹಾಗೂ ‘ಡೇರ್​ಡೆವಿಲ್ ಮುಸ್ತಾಫ’ ಚಿತ್ರದಲ್ಲಿ ಅಭಿನಯಿಸಿದ್ದ ಅಭಯ್, ಪೂರ್ಣಚಂದ್ರ ಮೈಸೂರು ಅವರು ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಅಲ್ಲದೇ, ಅನನ್ಯಾ ಅಮರ್, ರೇಖಾ ಕೂಡ್ಲಿಗಿ, ಆಶಿತ್​, ಮಹದೇವ್​ ಹಡಪದ್​ ಮುಂತಾದವರು ಕೂಡ ‘ಫ್ಯಾಮಿಲಿ ಡ್ರಾಮಾ’ ಸಿನಿಮಾದಲ್ಲಿ ನಟಿಸಿದ್ದಾರೆ.

‘ಫ್ಯಾಮಿಲಿ ಡ್ರಾಮಾ’ ಟ್ರೇಲರ್:​

‘ಆಚಾರ್ ಆ್ಯಂಡ್ ಕೋ’ ಬಳಿಕ ಸಿಂಧೂ ಶ್ರೀನಿವಾಸ​ ಮೂರ್ತಿ ಒಪ್ಪಿಕೊಂಡ ಸಿನಿಮಾ ‘ಫ್ಯಾಮಿಲಿ ಡ್ರಾಮ’. ಇದು ಡಾರ್ಕ್ ಕಾಮಿಡಿ ಕಥಾಹಂದರವನ್ನು ಹೊಂದಿದೆ. ಮುಗ್ಧ ಫ್ಯಾಮಿಲಿಯೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ ಕಹಾನಿ ಇದರಲ್ಲಿದೆ. ಆ ಕಥೆಯನ್ನು ಪೂರ್ತಿಯಾಗಿ ನೋಡಿ ಎಂಜಾಯ್​ ಮಾಡಲು ಪ್ರೇಕ್ಷಕರು ಕಾದಿದ್ದಾರೆ. ಟ್ರೇಲರ್​ ನೋಡಿದ ಬಳಿಕ ಈ ಚಿತ್ರತಂಡದ ಮೇಲೆ ಭರವಸೆ ಮೂಡಿದೆ.

ಇದನ್ನೂ ಓದಿ: Achar And Co Review: ಮೆಟ್ರೋ ಕಾಲಕ್ಕೂ ಅನ್ವಯ ಆಗುವ ರೆಟ್ರೋ ಕಥೆಯ ಸಿನಿಮಾ ‘ಆಚಾರ್​ ಆ್ಯಂಡ್​ ಕೋ’

ಕೇವಲ ಟ್ರೇಲರ್​ ಮಾತ್ರವಲ್ಲದೇ, ‘ಫ್ಯಾಮಿಲಿ ಡ್ರಾಮಾ’ ಸಿನಿಮಾದ ಪೋಸ್ಟರ್​ಗಳು ಕೂಡ ಗಮನ ಸೆಳೆಯುತ್ತಿವೆ. ಬಹಳ ಕ್ರಿಯೇಟಿವ್​ ಆಗಿ ಪೋಸ್ಚರ್ ವಿನ್ಯಾಸ ಮಾಡಿಸಲಾಗಿದೆ. ವಿದೇಶದ ಪೋಸ್ಟರ್​ ಡಿಸೈನರ್​ಗಳು ಇದರ ಹಿಂದೆ ಕೆಲಸ ಮಾಡಿದ್ದಾರೆ. ಈ ಸಿನಿಮಾದ ಮ್ಯೂಸಿಕ್​ ಕೂಡ ರೆಟ್ರೋ ಶೈಲಿಯಲ್ಲಿದೆ. ಚೇತನ್ ಅಮಯ್ಯ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಈ ಚಿತ್ರದ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಸಿನಿಪ್ರಿಯರು ಕಾದಿದ್ದಾರೆ. ದಬ್ಬುಗುಡಿ ಮುರಳಿಕೃಷ್ಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ