AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತ್ರಿಕೋನ’ ಚಿತ್ರದಲ್ಲಿ ಪಲ್ಲವಿ ಅನುಪಲ್ಲವಿ ತಾರಾ ಜೋಡಿ

ತಾಳ್ಮೆ ಮಹತ್ವ ಸಾರುವ ಈ ಚಿತ್ರದಲ್ಲಿ ಲಕ್ಷಿ, ಸುರೇಶ್ ಹೆಬ್ಳಿಕರ್ ಒಳಗೊಂಡಂತೆ ಅಚ್ಯುತ್ ಕುಮಾರ್, ಸುಧಾರಾಣಿ, ಮಾರುತೇಶ್, ರಾಜ್ ವೀರ್, ಸಾಧುಕೋಕಿಲ ಮುಖ್ಯ ತಾರಾಬಳಗದಲ್ಲಿದ್ದಾರೆ.

‘ತ್ರಿಕೋನ’ ಚಿತ್ರದಲ್ಲಿ ಪಲ್ಲವಿ ಅನುಪಲ್ಲವಿ ತಾರಾ ಜೋಡಿ
ತ್ರಿಕೋನ ಸಿನಿಮಾದಲ್ಲಿ ಅಚ್ಯುತ್​ ಕುಮಾರ್
TV9 Web
| Edited By: |

Updated on: Apr 04, 2022 | 9:47 PM

Share

ಟ್ರೇಲರ್ ಹಾಗೂ ತನ್ನ ಸ್ಟಾರ್ ತಾರಾಬಳಗದಿಂದ ಟಾಕ್ ಕ್ರಿಯೇಟ್ ಮಾಡಿರುವ ಸ್ಯಾಂಡಲ್ ವುಡ್ ಅಂಗಳದ ಬಹು ನಿರೀಕ್ಷಿತ ಸಿನಿಮಾ ‘ತ್ರಿಕೋನ’. ಹಾಡು ಹಾಗೂ ಟ್ರೇಲರ್ ಮೂಲಕ ಸಿನಿರಸಿಕರ ಮನಗೆದ್ದಿರುವ ಈ ಚಿತ್ರ ಏಪ್ರಿಲ್ 8ರಂದು ಬಿಡುಗಡೆಯಾಗುತ್ತಿದೆ. ಶಕ್ತಿ, ಅಹಂ, ತಾಳ್ಮೆ ಈ ಮೂರರಲ್ಲಿ ತಾಳ್ಮೆ ಜೀವನದಲ್ಲಿ ಎಷ್ಟು ಮುಖ್ಯ ಅನ್ನೋ ಮೆಸೇಜ್ ಇಟ್ಟುಕೊಂಡು ಸಿನಿಮ್ಯಾಟಿಕ್ ರೂಪದಲ್ಲಿ ಅದನ್ನು ಪ್ರೇಕ್ಷಕರಿಗೆ ಹೇಳ ಹೊರಟಿದೆ ‘ತ್ರಿಕೋನ’ ಚಿತ್ರತಂಡ.

ತ್ರಿಕೋನ ಸಿನಿಮಾದ ಕಥೆ ಎಷ್ಟು ಗಟ್ಟಿತನ ಹೊಂದಿದೆಯೋ ಅದಕ್ಕೆ ಆಯ್ಕೆ ಮಾಡಿಕೊಂಡ ತಾರಬಳಗವೂ ಅಷ್ಟೇ ಪರ್ಫೆಕ್ಟ್ ಆಗಿದೆ. ಬಹುತೇಕ ಸ್ಟಾರ್ ಪೋಷಕ ನಟರೇ ಅಭಿನಯಿಸಿರೋ ಈ ಚಿತ್ರದಲ್ಲಿ ಮೂರು ಜನರೇಷನ್ ಕಥೆ ಹೇಳ ಹೊರಟಿದ್ದೇವೆ ಎನ್ನುತ್ತಾರೆ ನಿರ್ದೇಶಕರು. ಇಂಟ್ರಸ್ಟಿಂಗ್ ಫ್ಯಾಕ್ಟರ್ ಏನಪ್ಪ ಅಂದ್ರೆ ಚಿತ್ರದಲ್ಲಿ ಹಿರಿಯ ನಟಿ ಲಕ್ಷ್ಮಿ ಹಾಗೂ ಹಿರಿಯ ನಟ ಸುರೇಶ್ ಹೆಬ್ಳಿಕರ್ ಜೋಡಿಯಾಗಿ ಕಾಣಿಸಿಕೊಂಡಿರೋದು. ಸ್ಯಾಂಡಲ್ ವುಡ್ ಎವರ್ ಗ್ರೀನ್ ಸಿನಿಮಾ ಪಲ್ಲವಿ ಅನುಪಲ್ಲವಿಯಲ್ಲಿ ನಟಿಸಿದ್ದ ಇವರು ಮೂರು ದಶಕದ ನಂತರ ಅದರಲ್ಲೂ ಜೋಡಿಯಾಗಿ ಕಾಣಿಸಿಕೊಳ್ಳುತ್ತಿರುವ ಸಿನಿಮಾವಿದು.

ತಾಳ್ಮೆ ಮಹತ್ವ ಸಾರುವ ಈ ಚಿತ್ರದಲ್ಲಿ ಲಕ್ಷಿ, ಸುರೇಶ್ ಹೆಬ್ಳಿಕರ್ ಒಳಗೊಂಡಂತೆ ಅಚ್ಯುತ್ ಕುಮಾರ್, ಸುಧಾರಾಣಿ, ಮಾರುತೇಶ್, ರಾಜ್ ವೀರ್, ಸಾಧುಕೋಕಿಲ ಮುಖ್ಯ ತಾರಾಬಳಗದಲ್ಲಿದ್ದಾರೆ. ಆಕ್ಷನ್ ಥ್ರಿಲ್ಲರ್, ಸಸ್ಪೆನ್ಸ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಕಥೆಯಷ್ಟೇ ತಾಂತ್ರಿಕವಾಗಿಯೂ ಸಿನಿಮಾ ಶ್ರೀಮಂತವಾಗಿ ಮೂಡಿ ಬಂದಿದೆ. ಪೊಲೀಸ್ ಪ್ರಕಿ ಪ್ರೊಡಕ್ಷನ್ ಬ್ಯಾನರ್ ನಡಿ ರಾಜಶೇಖರ್ ಚಿತ್ರಕ್ಕೆ ಕಥೆ ಬರೆದು ನಿರ್ಮಾಣ ಮಾಡಿದ್ದು, ಚಂದ್ರಕಾಂತ್ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಶ್ರೀನಿವಾಸ್ ವಿನ್ನಕೋಟ ಕ್ಯಾಮೆರಾ ವರ್ಕ್, ಸುರೇಂದ್ರನಾಥ್ ಬಿ ಆರ್ ಸಂಗೀತ ನಿರ್ದೇಶನ, ಜೀವನ್ ಪ್ರಕಾಶ್ ಎನ್ ಸಂಕಲನ ತ್ರಿಕೋನ ಚಿತ್ರಕ್ಕಿದೆ. ಟೈಟಲ್, ತಾರಾಗಣ, ಸಬ್ಜೆಕ್ಟ್ ಮುಖಾಂತರ ಸುದ್ದಿಯಲ್ಲಿರುವ ಈ ಚಿತ್ರ ಏಪ್ರಿಲ್ 8ಕ್ಕೆ ಥಿಯೇಟರ್ ಅಂಗಳಕ್ಕೆ ಕಾಲಿಡಲಿದೆ.

ಇದನ್ನೂ ಓದಿ: ತಲೆಕೂದಲು ದಾನ ಮಾಡಿದ ಸಂಜನಾ ಗಲ್ರಾನಿ; ಹೊಸ ಲುಕ್​ ನೋಡಿ ಅಚ್ಚರಿ ಹೊರಹಾಕಿದ ಫ್ಯಾನ್ಸ್

ಏಪ್ರಿಲ್​ 1ರ ಬದಲು ಏಪ್ರಿಲ್ 8ಕ್ಕೆ ‘ತ್ರಿಕೋನ’ ಸಿನಿಮಾ; ಚಿತ್ರದ ಬಗ್ಗೆ ಸುಚೇಂದ್ರ ಪ್ರಸಾದ್ ಮಾತು

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ