AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್​ ವೇಳೆ ಎಡವಟ್ಟು ಮಾಡಿಕೊಂಡ ತ್ರಿಶಾ ಕೃಷ್ಣನ್​; ಪುನೀತ್​ ಸಿನಿಮಾ ನಟಿಗೆ ಕಾಡುತ್ತಿದೆ ಬಂಧನ ಭೀತಿ

ಶಿವಲಿಂಗ ಮತ್ತು ನಂದಿ ಮಧ್ಯದಲ್ಲಿ ತ್ರಿಶಾ ನಿಂತಿದ್ದು, ಅವರು ಚಪ್ಪಲ್ಲಿ​ ಧರಿಸಿರುವುದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗುತ್ತಿದೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಶೂಟಿಂಗ್​ ವೇಳೆ ಎಡವಟ್ಟು ಮಾಡಿಕೊಂಡ ತ್ರಿಶಾ ಕೃಷ್ಣನ್​; ಪುನೀತ್​ ಸಿನಿಮಾ ನಟಿಗೆ ಕಾಡುತ್ತಿದೆ ಬಂಧನ ಭೀತಿ
TV9 Web
| Edited By: |

Updated on: Sep 06, 2021 | 8:34 PM

Share

ಸಿನಿಮಾ ಶೂಟಿಂಗ್​ ವೇಳೆ ನಟ-ನಟಿಯರು ಮಾಡಿಕೊಳ್ಳುವ ಎಡವಟ್ಟು ಅವರನ್ನು ಸಂಕಷ್ಟಕ್ಕೆ ತಳ್ಳುತ್ತದೆ. ಈಗ ದಕ್ಷಿಣ ಭಾರತದ ನಟಿ ತ್ರಿಶಾ ಕೃಷ್ಣನ್​ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಸೆಟ್​ನಲ್ಲಿ ಅವರು ಮಾಡಿಕೊಂಡ ಎಡವಟ್ಟಿನಿಂದ ಬಂಧನ ಭೀತಿಗೆ ತುತ್ತಾಗಿದ್ದಾರೆ. ಹಿಂದೂ ಸಂಘಟನೆಗಳು ಅವರನ್ನು ಬಂಧಿಸಬೇಕು ಎಂದು ಆಗ್ರಹಿಸುತ್ತಿವೆ.

ಮಣಿರತ್ನಂ​ ನಿರ್ದೇಶನ ಮಾಡುತ್ತಿರುವ ‘ಪೊನ್ನಿಯಿನ್ ಸೆಲ್ವನ್​’ ಸಿನಿಮಾದಲ್ಲಿ ತ್ರಿಶಾ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಇದು ತಮಿಳಿನ ಕಾದಂಬರಿ ಆಧಾರಿತ ಸಿನಿಮಾ. ಈ ಚಿತ್ರದ ಶೂಟಿಂಗ್​ ಇಂದೋರ್​​ನ ಐತಿಹಾಸಿಕ ದೇವಸ್ಥಾನದಲ್ಲಿ ನಡೆಯುತ್ತಿದೆ. ಹೀಗಾಗಿ, ಇಡೀ ಚಿತ್ರತಂಡ ಕಳೆದ ಕೆಲ ದಿನಗಳಿಂದ ಅಲ್ಲಿ ಬೀಡುಬಿಟ್ಟಿದೆ. ಈ ಮಧ್ಯೆ, ಚಿತ್ರದ ಸೆಟ್​ ದೃಶ್ಯಗಳು ಲೀಕ್​ ಆಗಿವೆ. ಶೂಟಿಂಗ್​ ಗ್ಯಾಪ್​ನಲ್ಲಿ ತ್ರಿಶಾ ಅವರು ಚಪ್ಪಲಿ ಹಾಕಿಕೊಂಡು ದೇವಸ್ಥಾನದಲ್ಲಿ ಸುತ್ತಾಟ ನಡೆಸಿದ್ದಾರೆ. ಶಿವಲಿಂಗ ಮತ್ತು ನಂದಿ ಮಧ್ಯದಲ್ಲಿ ತ್ರಿಶಾ ನಿಂತಿದ್ದು, ಅವರು ಚಪ್ಪಲ್ಲಿ​ ಧರಿಸಿರುವುದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗುತ್ತಿದೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದೇವಸ್ಥಾನದಲ್ಲಿ ತ್ರಿಶಾ ಚಪ್ಪಲಿ ಧರಿಸಿದ್ದಾರೆ ಎನ್ನುವ ವಿಚಾರ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಅಲ್ಲದೆ, ಈ ಬಗ್ಗೆ ಅವರು ಆಕ್ರೋಶ ಹೊರ ಹಾಕುತ್ತಿದ್ದಾರೆ. ತ್ರಿಶಾ ಮತ್ತು ಸಿನಿಮಾದ ನಿರ್ದೇಶಕ ಮಣಿರತ್ನಂ​ ಹಿಂದೂ ದೇವರಿಗೆ ಅವಮಾನ ಮಾಡಿದ್ದಾರೆ. ಅವರ ಬಂಧನ ಆಗಬೇಕು ಎಂದು ಆಗ್ರಹಿಸುತ್ತಿದ್ದಾರೆ.

‘ಪೊನ್ನಿಯನ್​ ಸೆಲ್ವಮ್’​ ಎರಡು ಪಾರ್ಟ್​ಗಳಲ್ಲಿ ಮೂಡಿ ಬರುತ್ತಿದೆ. ಈ ಸಿನಿಮಾದಲ್ಲಿ ಐಶ್ವರ್ಯಾ ರೈ ಬಚ್ಚನ್​, ಚಿಯಾನ್​ ವಿಕ್ರಮ್​, ಕಾರ್ತಿ, ಪ್ರಕಾಶ್​ ರಾಜ್​ ಸೇರಿ ಸಾಕಷ್ಟು ನಟರು ಇದ್ದಾರೆ. 2022ರಲ್ಲಿ ಇದರ ಮೊದಲ ಪಾರ್ಟ್​ ರಿಲೀಸ್​ ಆಗುವ ಸಾಧ್ಯತೆ ಇದೆ.

ಪುನೀತ್​ ರಾಜ್​ಕುಮಾರ್​ ನಟನೆಯ ‘ದ್ವಿತ್ವ’ ಸಿನಿಮಾದಲ್ಲಿ ತ್ರಿಶಾ ನಟಿಸುತ್ತಿದ್ದಾರೆ. 2014ರಲ್ಲಿ ತೆರೆಗೆ ಬಂದ ಪುನೀತ್​ ನಟನೆಯ ‘ಪವರ್ ***’ ಚಿತ್ರದಲ್ಲಿ ತ್ರಿಶಾ  ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದು ಅವರ ಮೊದಲ ಹಾಗೂ ಕೊನೆಯ ಕನ್ನಡ ಚಿತ್ರ. ಈ ಸಿನಿಮಾ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡಿತ್ತು. ಇದಾದ ನಂತರದಲ್ಲಿ ಅವರು ಯಾವುದೇ ಕನ್ನಡ ಚಿತ್ರಗಳಲ್ಲಿ ನಟಿಸಿಲ್ಲ. ‘ಪವರ್​’ ತೆರೆಕಂಡ ನಂತರದಲ್ಲಿ ತ್ರಿಶಾಗೆ ಬೇರೆ ಭಾಷೆಗಳಲ್ಲಿ ಒಳ್ಳೆಯ ಆಫರ್ ಬರೋಕೆ ಶುರುವಾದವು. ಹೀಗಾಗಿ, ಅವರು ಪರ ಭಾಷೆಯಲ್ಲಿ ಬ್ಯುಸಿಯಾದರು. ಈಗ ಅವರು  ಮತ್ತೆ ಕನ್ನಡಕ್ಕೆ ಮರಳುತ್ತಿದ್ದಾರೆ.

ಇದನ್ನೂ ಓದಿ: 

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್
ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ