AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸತ್ಯ ಎಲ್ಲಕ್ಕಿಂತ ದೊಡ್ಡದು, ನ್ಯಾಯ ಸಿಗುತ್ತದೆ’; ಕೋರ್ಟ್ ಆದೇಶಕ್ಕೂ ಮೊದಲು ಹೀಗಂದ್ರು ಪವಿತ್ರಾ ಗೌಡ

ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಅವರು ತಮ್ಮ ನಿರಪರಾಧಿತ್ವವನ್ನು ಸಾಬೀತುಪಡಿಸಲು ಹೋರಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದೆ.ಇಂದು ತೀರ್ಪು ಸಿಗಲಿದೆ. ಇತ್ತೀಚೆಗೆ, ಪವಿತ್ರಾ ಸತ್ಯವೇ ಜಯಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

‘ಸತ್ಯ ಎಲ್ಲಕ್ಕಿಂತ ದೊಡ್ಡದು, ನ್ಯಾಯ ಸಿಗುತ್ತದೆ’; ಕೋರ್ಟ್ ಆದೇಶಕ್ಕೂ ಮೊದಲು ಹೀಗಂದ್ರು ಪವಿತ್ರಾ ಗೌಡ
ಪವಿತ್ರಾ ಗೌಡ
ರಾಜೇಶ್ ದುಗ್ಗುಮನೆ
|

Updated on: Aug 14, 2025 | 7:00 AM

Share

ನಟಿ ಹಾಗೂ ದರ್ಶನ್ (Darshan) ಆಪ್ತೆ ಎನಿಸಿಕೊಂಡಿದ್ದ ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಎ1 ಆರೋಪಿ ಆಗಿದ್ದಾರೆ. ಆದರೆ, ತಮಗೂ ಕೊಲೆಗೂ ಯಾವುದೇ ಸಂಬಂಧ ಇಲ್ಲ ಎಂದು ಪವಿತ್ರಾ ಗೌಡ ಹೇಳುತ್ತಲೇ ಬರುತ್ತಿದ್ದಾರೆ. ರೇಣುಕಾಸ್ವಾಮಿ ಸಾವಿಗೆ ತಾವು ಕಾರಣರಲ್ಲ ಎಂಬುದು ಪವಿತ್ರಾ ಗೌಡ ಅವರ ವಾದ. ಇಂದು (ಆಗಸ್ಟ್ 14) ಸುಪ್ರೀಂಕೋರ್ಟ್​ನಲ್ಲಿ ದರ್ಶನ್, ಪವಿತ್ರಾ ಸೇರಿದಂತೆ ಏಳು ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ. ಅದಕ್ಕೂ ಮೊದಲು ಪವಿತ್ರಾ ಗೌಡ ಮಾಡಿರೋ ಪೋಸ್ಟ್ ಗಮನ ಸೆಳೆದಿದೆ. ನ್ಯಾಯ ಸಿಗೋ ಭರವಸೆಯಲ್ಲಿ ಅವರಿದ್ದಾರೆ.

ಪವಿತ್ರಾ ಗೌಡ ಅವರು ಹಲವು ತಿಂಗಳುಗಳ ಕಾಲ ಜೈಲಿನಲ್ಲಿ ಇದ್ದು ಹೊರ ಬಂದಿದ್ದಾರೆ. ಅವರಿಗೆ ಕಳೆದ ವರ್ಷ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನನ್ನು ಕರ್ನಾಟಕ ಸರ್ಕಾರ ಸುಪ್ರೀಂಕೊರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. 17 ಆರೋಪಿಗಳ ಪೈಕಿ ಏಳು ಮಂದಿಯ ಜಾಮೀನು ರದ್ದು ಮಾಡುವಂತೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಹಲವು ದಿನಗಳ ಕಾಲ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ತನ್ನ ಅಂತಿಮ ನಿರ್ಧಾರ ಪ್ರಕಟ ಮಾಡಲಿದೆ.

ಅದಕ್ಕೂ ಮೊದಲು ಇನ್​ಸ್ಟಾಗ್ರಾಮ್ ಸ್ಟೇಟಸ್ ಹಾಕಿಕೊಂಡಿರೋ ಪವಿತ್ರಾ ಗೌಡ, ‘ಸತ್ಯ ಎಲ್ಲಕ್ಕಿಂತ ಶಕ್ತಿಯುತವಾದುದ್ದು. ನ್ಯಾಯ ಸಿಕ್ಕೇ ಸಿಗುತ್ತದೆ’ ಎಂದು ಬರೆದುಕೊಂಡಿದ್ದಾರೆ. ಅವರು ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ರೀತಿ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Image
ಶ್ವಾನಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ ಹೇಳೋದೇನು?
Image
ಸಹೋದರನ ರೀತಿ ಕಾಣುತ್ತಿದ್ದ ಬೋನಿಯನ್ನೇ ವಿವಾಹ ಆಗಿದ್ದ ಶ್ರೀದೇವಿ
Image
‘ಕೂಲಿ’ ಹೆಸರಲ್ಲಿ ವಸೂಲಿ; ಹೇಳೋರೂ ಇಲ್ಲ, ಕೇಳೋರೂ ಇಲ್ಲ
Image
‘ಸು ಫ್ರಮ್ ಸೋ’ ಕಲೆಕ್ಷನ್​ನಲ್ಲಿ ವಿದೇಶಿಗರ ಪಾಲೆಷ್ಟು? ಪರಭಾಷೆಯವರದ್ದೆಷ್ಟು

ಪವಿತ್ರಾ ಗೌಡ ಅವರು ಜಡ್ಜ್​ಗಳ ಮುಂದೆ ತಮ್ಮ ಜಾಮೀನು ರದ್ದು ಮಾಡದಂತೆ ಕೋರಿದ್ದಾರೆ. ತಮಗೆ ಒಂದು ಮಗು ಇದೆ. ಅವರನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿ ನನ್ನದೇ. ಹೀಗಾಗಿ, ಜಾಮೀನು ರದ್ದುಗೊಳಿಸಬಾರದು ಎಂದು ಕೋರ್ಟ್​ನಲ್ಲಿ ವಾದ ಮುಂದಿಡಲಾಗಿದೆ.

ಇದನ್ನೂ ಓದಿ: ಆಗಸ್ಟ್ 14ಕ್ಕೆ ದರ್ಶನ್ ಭವಿಷ್ಯ ನಿರ್ಧಾರ; ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ರದ್ದಾಗುವ ಭಯ

ದರ್ಶನ್​ಗೂ ಕೂಡ ಇಂದು ಪ್ರಮುಖ ದಿನವಾಗಿದೆ. ದರ್ಶನ್​​ಗೆ ಜಾಮೀನು ಮುಂದುವರಿಯುತ್ತದೆಯೋ ಅಥವಾ ರದ್ದಾಗುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ. ಒಂದೊಮ್ಮೆ ಜಾಮೀನು ರದ್ದಾದರೆ ಅವರು ಮತ್ತೆ ಜೈಲು ಹಕ್ಕಿ ಆಗಬೇಕಾಗುತ್ತದೆ. ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ಈಗ ಮತ್ತೆ ಜೈಲು ಸೇರಿದರೆ ಇದೇ ನೆಪ ಒಡ್ಡುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು