AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘22 ಸಿನಿಮಾಗಳಲ್ಲಿ ನಟಿಸಿದ ಬಳಿಕ ನನಗೂ ಕಟೌಟ್ ನಿಲ್ಲಿಸಿದರು’; ಖುಷಿಯಿಂದ ಹೇಳಿದ ತುಕಾಲಿ ಸಂತೋಷ್

‘ಮೂರನೇ ಕೃಷ್ಣಪ್ಪ’ ಸಿನಿಮಾದಲ್ಲಿ ರಂಗಾಯಣ ರಘು, ಸಂಪತ್ ಮೈತ್ರೇಯ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಪತ್ ಅವರ ಗೆಳೆಯನ ಪಾತ್ರದಲ್ಲಿ ತುಕಾಲಿ ಸಂತೋಷ್ ಅವರು ನಟಿಸಿದ್ದಾರೆ. ಅವರ ಪಾತ್ರ ಗಮನ ಸೆಳೆದಿದೆ

‘22 ಸಿನಿಮಾಗಳಲ್ಲಿ ನಟಿಸಿದ ಬಳಿಕ ನನಗೂ ಕಟೌಟ್ ನಿಲ್ಲಿಸಿದರು’; ಖುಷಿಯಿಂದ ಹೇಳಿದ ತುಕಾಲಿ ಸಂತೋಷ್
ತುಕಾಲಿ ಸಂತೋಷ್
ರಾಜೇಶ್ ದುಗ್ಗುಮನೆ
|

Updated on: May 25, 2024 | 1:09 PM

Share

ತುಕಾಲಿ ಸಂತೋಷ್ (Tukali Santosh) ಅವರು ರಿಯಾಲಿಟಿ ಶೋಗಳಲ್ಲಿ, ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದವರು. ‘ಬಿಗ್ ಬಾಸ್ ಕನ್ನಡ ಸೀಸನ್ 10’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಅವರಿಗೆ ಈಗ ಹಲವು ಸಿನಿಮಾ ಆಫರ್​ಗಳು ಬರುತ್ತಿವೆ. ಆದರೆ, ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಅವರು ನಟಿಸಿರೋ ‘ಮೂರನೇ ಕೃಷ್ಣಪ್ಪ’ ಸಿನಿಮಾ ಮೇ 24ರಂದು ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಅವರು ಒಂದು ಪಾತ್ರ ಮಾಡಿದ್ದಾರೆ.

‘ಮೂರನೇ ಕೃಷ್ಣಪ್ಪ’ ಸಿನಿಮಾದಲ್ಲಿ ರಂಗಾಯಣ ರಘು, ಸಂಪತ್ ಮೈತ್ರೇಯ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಪತ್ ಅವರ ಗೆಳೆಯನ ಪಾತ್ರದಲ್ಲಿ ತುಕಾಲಿ ಸಂತೋಷ್ ಅವರು ನಟಿಸಿದ್ದಾರೆ. ಅವರ ಪಾತ್ರ ಗಮನ ಸೆಳೆದಿದೆ. ಈ ಸಿನಿಮಾ ಬಗ್ಗೆ ತುಕಾಲಿ ಸಂತೋಷ್ ಅವರು ಮಾತನಾಡಿದ್ದಾರೆ.

‘ಬಿಗ್ ಬಾಸ್​ನಿಂದ ಬಂದ ಬಳಿಕ ರಿಲೀಸ್ ಆಗುತ್ತಿರುವ ಎರಡನೇ ಸಿನಿಮಾ ಇದು. ಈ ಚಿತ್ರದಲ್ಲಿ ಆನೇಕಲ್ ಹಾಗೂ ಕೋಲಾರ ಭಾಷೆ ಇದೆ. ಇದಕ್ಕಾಗಿ ನಾನು ತಯಾರಿ ಮಾಡಿಕೊಳ್ಳಬೇಕಾಯಿತು. ಅಲ್ಲಿನ ಭಾಷೆ ಕಲಿತತೆ. ನಾನು 22 ಸಿನಿಮಾಗಳಲ್ಲಿ ನಟಿಸಿದ್ದೇನೆ. ಇದೇ ಮೊದಲ ಬಾರಿಗೆ ಗಾಂಧಿ ನಗರದಲ್ಲಿ ನನ್ನ ಕಟೌಟ್ ನಿಲ್ಲಿಸಿದ್ದಾರೆ. ತುಂಬಾನೇ ಖುಷಿ ಇದೆ’ ಎಂದಿದ್ದಾರೆ ತುಕಾಲಿ ಸಂತೋಷ್. ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇದರ ಜೊತೆಗೆ ರಿಯಾಲಿಟಿ ಶೋಗಳಲ್ಲೂ ಬ್ಯುಸಿ ಇದ್ದಾರೆ.

ಸದ್ಯ ತುಕಾಲಿ ಸಂತೋಷ್ ಅವರು ‘ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ನಟಿಸುತ್ತಿದ್ದಾರೆ. ಈ ಶೋನಲ್ಲಿ ಅವರ ಪತ್ನಿ ಮಾನಸಾ ಕೂಡ ಇದ್ದಾರೆ. ಅವರು ಕೂಡ ತುಕಾಲಿ ಸಂತೋಷ್​ಗೆ ಬೆಂಬಲವಾಗಿ ನಿಂತಿದ್ದಾರೆ. ಈ ಬಗ್ಗೆ ಸಂತಸ ಹೊರಹಾಕುತ್ತಾರೆ ತುಕಾಲಿ ಸಂತೋಷ್.

ಇದನ್ನೂ ಓದಿ: ‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್

ಈಗಾಗಲೇ ಕಲರ್ಸ್ ಕನ್ನಡದ ಕಡೆಯಿಂದ ಹೊಸ ಧಾರಾವಾಹಿ ಆಫರ್ ಒಂದು ತುಕಾಲಿ ಸಂತೋಷ್​ಗೆ ಬಂದಿದೆ. ಆದರೆ, ‘ಗಿಚ್ಚಿ ಗಿಲಿಗಿಲಿ 3’ ರಿಯಾಲಿಟಿ ಶೋನಲ್ಲಿ ಅವರು ಬ್ಯುಸಿ ಇರುವ ಕಾರಣ ಈ ಧಾರಾವಾಹಿಯನ್ನು ಸದ್ಯಕ್ಕೆ ಆರಂಭಿಸುತ್ತಿಲ್ಲ. ಈ ರಿಯಾಲಿಟಿ ಶೋ ಮುಗಿದ ಬಳಿಕ ಅವರು ಈ ಧಾರಾವಾಹಿ ಪ್ರಾರಂಭ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ