AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘22 ಸಿನಿಮಾಗಳಲ್ಲಿ ನಟಿಸಿದ ಬಳಿಕ ನನಗೂ ಕಟೌಟ್ ನಿಲ್ಲಿಸಿದರು’; ಖುಷಿಯಿಂದ ಹೇಳಿದ ತುಕಾಲಿ ಸಂತೋಷ್

‘ಮೂರನೇ ಕೃಷ್ಣಪ್ಪ’ ಸಿನಿಮಾದಲ್ಲಿ ರಂಗಾಯಣ ರಘು, ಸಂಪತ್ ಮೈತ್ರೇಯ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಪತ್ ಅವರ ಗೆಳೆಯನ ಪಾತ್ರದಲ್ಲಿ ತುಕಾಲಿ ಸಂತೋಷ್ ಅವರು ನಟಿಸಿದ್ದಾರೆ. ಅವರ ಪಾತ್ರ ಗಮನ ಸೆಳೆದಿದೆ

‘22 ಸಿನಿಮಾಗಳಲ್ಲಿ ನಟಿಸಿದ ಬಳಿಕ ನನಗೂ ಕಟೌಟ್ ನಿಲ್ಲಿಸಿದರು’; ಖುಷಿಯಿಂದ ಹೇಳಿದ ತುಕಾಲಿ ಸಂತೋಷ್
ತುಕಾಲಿ ಸಂತೋಷ್
ರಾಜೇಶ್ ದುಗ್ಗುಮನೆ
|

Updated on: May 25, 2024 | 1:09 PM

Share

ತುಕಾಲಿ ಸಂತೋಷ್ (Tukali Santosh) ಅವರು ರಿಯಾಲಿಟಿ ಶೋಗಳಲ್ಲಿ, ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದವರು. ‘ಬಿಗ್ ಬಾಸ್ ಕನ್ನಡ ಸೀಸನ್ 10’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಅವರಿಗೆ ಈಗ ಹಲವು ಸಿನಿಮಾ ಆಫರ್​ಗಳು ಬರುತ್ತಿವೆ. ಆದರೆ, ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಅವರು ನಟಿಸಿರೋ ‘ಮೂರನೇ ಕೃಷ್ಣಪ್ಪ’ ಸಿನಿಮಾ ಮೇ 24ರಂದು ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಅವರು ಒಂದು ಪಾತ್ರ ಮಾಡಿದ್ದಾರೆ.

‘ಮೂರನೇ ಕೃಷ್ಣಪ್ಪ’ ಸಿನಿಮಾದಲ್ಲಿ ರಂಗಾಯಣ ರಘು, ಸಂಪತ್ ಮೈತ್ರೇಯ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಪತ್ ಅವರ ಗೆಳೆಯನ ಪಾತ್ರದಲ್ಲಿ ತುಕಾಲಿ ಸಂತೋಷ್ ಅವರು ನಟಿಸಿದ್ದಾರೆ. ಅವರ ಪಾತ್ರ ಗಮನ ಸೆಳೆದಿದೆ. ಈ ಸಿನಿಮಾ ಬಗ್ಗೆ ತುಕಾಲಿ ಸಂತೋಷ್ ಅವರು ಮಾತನಾಡಿದ್ದಾರೆ.

‘ಬಿಗ್ ಬಾಸ್​ನಿಂದ ಬಂದ ಬಳಿಕ ರಿಲೀಸ್ ಆಗುತ್ತಿರುವ ಎರಡನೇ ಸಿನಿಮಾ ಇದು. ಈ ಚಿತ್ರದಲ್ಲಿ ಆನೇಕಲ್ ಹಾಗೂ ಕೋಲಾರ ಭಾಷೆ ಇದೆ. ಇದಕ್ಕಾಗಿ ನಾನು ತಯಾರಿ ಮಾಡಿಕೊಳ್ಳಬೇಕಾಯಿತು. ಅಲ್ಲಿನ ಭಾಷೆ ಕಲಿತತೆ. ನಾನು 22 ಸಿನಿಮಾಗಳಲ್ಲಿ ನಟಿಸಿದ್ದೇನೆ. ಇದೇ ಮೊದಲ ಬಾರಿಗೆ ಗಾಂಧಿ ನಗರದಲ್ಲಿ ನನ್ನ ಕಟೌಟ್ ನಿಲ್ಲಿಸಿದ್ದಾರೆ. ತುಂಬಾನೇ ಖುಷಿ ಇದೆ’ ಎಂದಿದ್ದಾರೆ ತುಕಾಲಿ ಸಂತೋಷ್. ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇದರ ಜೊತೆಗೆ ರಿಯಾಲಿಟಿ ಶೋಗಳಲ್ಲೂ ಬ್ಯುಸಿ ಇದ್ದಾರೆ.

ಸದ್ಯ ತುಕಾಲಿ ಸಂತೋಷ್ ಅವರು ‘ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ನಟಿಸುತ್ತಿದ್ದಾರೆ. ಈ ಶೋನಲ್ಲಿ ಅವರ ಪತ್ನಿ ಮಾನಸಾ ಕೂಡ ಇದ್ದಾರೆ. ಅವರು ಕೂಡ ತುಕಾಲಿ ಸಂತೋಷ್​ಗೆ ಬೆಂಬಲವಾಗಿ ನಿಂತಿದ್ದಾರೆ. ಈ ಬಗ್ಗೆ ಸಂತಸ ಹೊರಹಾಕುತ್ತಾರೆ ತುಕಾಲಿ ಸಂತೋಷ್.

ಇದನ್ನೂ ಓದಿ: ‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್

ಈಗಾಗಲೇ ಕಲರ್ಸ್ ಕನ್ನಡದ ಕಡೆಯಿಂದ ಹೊಸ ಧಾರಾವಾಹಿ ಆಫರ್ ಒಂದು ತುಕಾಲಿ ಸಂತೋಷ್​ಗೆ ಬಂದಿದೆ. ಆದರೆ, ‘ಗಿಚ್ಚಿ ಗಿಲಿಗಿಲಿ 3’ ರಿಯಾಲಿಟಿ ಶೋನಲ್ಲಿ ಅವರು ಬ್ಯುಸಿ ಇರುವ ಕಾರಣ ಈ ಧಾರಾವಾಹಿಯನ್ನು ಸದ್ಯಕ್ಕೆ ಆರಂಭಿಸುತ್ತಿಲ್ಲ. ಈ ರಿಯಾಲಿಟಿ ಶೋ ಮುಗಿದ ಬಳಿಕ ಅವರು ಈ ಧಾರಾವಾಹಿ ಪ್ರಾರಂಭ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ