AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ತುಳುವಿನ ಜನಪ್ರಿಯ ನಿರ್ದೇಶಕ ದೇವದಾಸ್ ಕಾಪಿಕಾಡ್

Sandalwood news: ತುಳು ಚಿತ್ರರಂಗದಲ್ಲಿ ನಿರ್ದೇಶಕ ಹಾಗೂ ನಟನಾಗಿ ಹೆಸರು ಗಳಿಸಿರುವ ದೇವದಾಸ್ ಕಾಪಿಕಾಡ್ ‘ಪುರುಷೋತ್ತಮ ಪ್ರಸಂಗ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ತುಳುವಿನ ಜನಪ್ರಿಯ ನಿರ್ದೇಶಕ ದೇವದಾಸ್ ಕಾಪಿಕಾಡ್
Follow us
ಮಂಜುನಾಥ ಸಿ.
|

Updated on: Jan 14, 2024 | 10:28 PM

ತುಳು ಚಿತ್ರರಂಗದಲ್ಲಿ (Coastalwood) ನಟನಾಗಿ, ನಿರ್ದೇಶಕನಾಗಿ ಹೆಸರು ಮಾಡಿರುವ ದೇವದಾಸ್ ಕಾಪಿಕಾಡ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣ ಮಾಡಿರುವ “ಪುರುಷೋತ್ತಮನ‌ ಪ್ರಸಂಗ” ಸಿನಿಮಾವನ್ನು ನಿರ್ದೇಶಕ ದೇವದಾಸ್ ಕಾಪಿಕಾಡ್ ನಿರ್ದೇಶಿಸಿದ್ದಾರೆ. ಭಿನ್ನ ಕತೆ ಹೊಂದಿರುವ ಈ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಫೆಬ್ರವರಿಯಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.

ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ‘ತುಳು ಭಾಷೆಯಲ್ಲಿ ಒಂಭತ್ತು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಕನ್ನಡದಲ್ಲಿ ನನಗೆ ಮೊದಲ ಸಿನಿಮಾ. ಈ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. “ಪುರುಷೋತ್ತಮನ ಪ್ರಸಂಗ” ಕೌಟುಂಬಿಕ ಕಥಾಹಂದರ ಹೊಂದಿರುವ ನೈಜಘಟನೆ ಆಧಾರಿತ ಸಿನಿಮಾ. ಪುರುಷೋತ್ತಮ ನ ಪಾತ್ರದಲ್ಲಿ ನಿರ್ಮಾಪಕ ರವಿಕುಮಾರ್ ಅವರ ಪುತ್ರ ಅಜಯ್ ಅಭಿನಯಿಸಿದ್ದಾರೆ. ಈ ಪಾತ್ರಕ್ಕೆ ಹೇಳಿಮಾಡಿಸಿದ ನಟ ಅಜಯ್. ಹೊರದೇಶದಲ್ಲಿ ಸಿನಿಮಾ ಕುರಿತು ಅಧ್ಯಯನ ಮಾಡಿ ಬಂದಿದ್ದಾರೆ. ರಿಷಿಕಾ ನಾಯ್ಕ್ ಈ ಚಿತ್ರದ ನಾಯಕಿ’ ಎಂದರು.

ಇದನ್ನೂ ಓದಿ:ಸ್ಯಾಂಡಲ್​ವುಡ್ ಜೊತೆ ನಂಟಿರುವ ಬಾಲಿವುಡ್​ನ ಖ್ಯಾತ ನಟಿಯ ಪುತ್ರಿ ಈಕೆ: ಯಾರು ಗುರುತಿಸಬಲ್ಲಿರಾ?

ತುಳು ಸಿನಿಮಾ ರಂಗದ ಜನಪ್ರಿಯ ನಟರಾದ ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು ಮುಂತಾದ ಕಲಾವಿದರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರು ಸಹ ಪ್ರಮುಖ ಪಾತ್ರವೊಂದನ್ನು ನಟಿಸಿದ್ದಾರೆ. ದೇವದಾಸ್ ಕಾಪಿಕಾಡ್ ಪುತ್ರ ಅರ್ಜುನ್ ಈ ಸಿನಿಮಾಕ್ಕೆ ಸಹ ನಿರ್ದೇಶಕನಾಗಿ ದುಡಿಯಲಿದ್ದಾರೆ. ನಕುಲ್ ಅಭಯಂಕರ್ ಅವರ ಸಂಗೀತ ನಿರ್ದೇಶನ ಮಾಡಿದ್ದು ಸಿನಿಮಾದಲ್ಲಿ ನಾಲ್ಕು ಹಾಡುಗಳಿವೆ. ಜಯಂತ ಕಾಯ್ಕಿಣಿ, ದೊಡ್ಡರಂಗೇ ಗೌಡ, ವಿ.ನಾಗೇಂದ್ರ ಪ್ರಸಾದ್ ಹಾಗೂ ನಿರ್ದೇಶಕರು ತಲಾ ಒಂದೊಂದು ಹಾಡುಗಳನ್ನು ಬರೆದಿದ್ದಾರೆ. ಛಾಯಾಗ್ರಾಹಕರಾಗಿ ವಿಷ್ಣು ದುಡಿದಿದ್ದಾರೆ. ಸಿನಿಮಾವನ್ನು ಮಂಗಳೂರು ಹಾಗೂ ದುಬೈನಲ್ಲಿ ಚಿತ್ರೀಕರಣ ಮಾಡಲಾಗಿದೆ. ಫೆಬ್ರವರಿ ಮಧ್ಯ ಭಾಗದಲ್ಲಿ ಸಿನಿಮಾ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದ್ದಾರೆ.

‘ನಾನು ಈ ಹಿಂದೆ “ಕಿಸ್”, ” ಮೆಹಬೂಬ “, “ನಾಟ್ ಔಟ್” ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ನಾಯಕನಾಗಿ ನಟಿಸಿರುವ ಮೊದಲ ಸಿನಿಮಾ ಇದು. ತುಳು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರ ನಿರ್ದೇಶನದಲ್ಲಿ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನನ್ನ ಪಾತ್ರವೂ ಚೆನ್ನಾಗಿದೆ’ ಎಂದರು ನಾಯಕ ಅಜಯ್.

ನಾಯಕಿ ರಿಷಿಕಾ ನಾಯ್ಕ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಿರ್ಮಾಪಕರಾದ ವಿ.ರವಿಕುಮಾರ್, ಶಂಶುದ್ದೀನ್ ಚಿತ್ರದ ಕುರಿತು ಮಾತನಾಡಿದರು. ಶರ್ಮಿಳಾ ಕಾಪಿಕಾಡ್ ಚಿತ್ರಕ್ಕೆ ಶುಭ ಹಾರೈಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಲೆಗಳ ಅಬ್ಬರ ಕಂಡು ಮೀನುಗಾರರರೂ ಸಮುದ್ರಕ್ಕಿಳಿಯುತ್ತಿಲ್ಲ
ಅಲೆಗಳ ಅಬ್ಬರ ಕಂಡು ಮೀನುಗಾರರರೂ ಸಮುದ್ರಕ್ಕಿಳಿಯುತ್ತಿಲ್ಲ
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ