Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಟ್ವಿಟರ್ ಖಾತೆಯಿಂದ ಬ್ಲೂಟಿಕ್ ಮಾಯ; ಕಾರಣ ಏನು?

ಪುನೀತ್ ರಾಜ್​ಕುಮಾರ್ ಅವರ ಟ್ವಿಟರ್ ಖಾತೆಗೆ ಬ್ಲೂಟಿಕ್ ಸಿಕ್ಕಿತ್ತು. ಈಗ ಅವರು ನಿಧನ ಹೊಂದಿ ಅನೇಕ ತಿಂಗಳಾಗಿದೆ. ಅವರ ಟ್ವಿಟರ್ ಆ್ಯಕ್ಟೀವ್ ಇಲ್ಲದ ಕಾರಣ ಬ್ಲೂಟಿಕ್ ತೆಗೆಯಲಾಗಿದೆ.

ಪುನೀತ್ ರಾಜ್​ಕುಮಾರ್ ಟ್ವಿಟರ್ ಖಾತೆಯಿಂದ ಬ್ಲೂಟಿಕ್ ಮಾಯ; ಕಾರಣ ಏನು?
ಪುನೀತ್ ರಾಜ್​ಕುಮಾರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 13, 2022 | 10:06 PM

ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ನಿಧನಹೊಂದಿ ವರ್ಷ ಕಳೆಯುತ್ತಾ ಬಂದಿದೆ. ಮುಂಬರುವ ಅಕ್ಟೋಬರ್ 29ಕ್ಕೆ ಅವರು ನಿಧನ ಹೊಂದಿ ಒಂದು ವರ್ಷ ತುಂಬಲಿದೆ. ಅವರು ಇಲ್ಲ ಎಂಬ ನೋವು ಬಹುವಾಗಿ ಕಾಡುತ್ತಿದೆ. ರಾಜ್​ ಕುಟುಂಬಕ್ಕಂತೂ ಈ ಸತ್ಯವನ್ನು ಒಪ್ಪಿಕೊಳ್ಳಲು ಈವರೆಗೆ ಸಾಧ್ಯವಾಗಿಲ್ಲ. ಈ ಮಧ್ಯೆ ಪುನೀತ್ ರಾಜ್​ಕುಮಾರ್ ಅವರ ಟ್ವಿಟರ್ (Twitter) ಖಾತೆಯಿಂದ ಬ್ಲೂಟಿಕ್ (ವೆರಿಫೈಡ್ ಖಾತೆಗೆ ನೀಡುವ ಬ್ಯಾಡ್ಜ್​) ತೆಗೆದು ಹಾಕಲಾಗಿದೆ. ಈ ಬಗ್ಗೆ ಫ್ಯಾನ್ಸ್ ಅಸಮಾಧಾನ ಹೊರಹಾಕುತ್ತಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರು ಈ ಮೊದಲು ಟ್ವಿಟರ್ ಬಳಕೆ ಮಾಡುತ್ತಿರಲಿಲ್ಲ. ಸೋಶಿಯಲ್ ಮೀಡಿಯಾ ಜಗತ್ತು ವಿಸ್ತಾರಗೊಂಡ ಹಿನ್ನೆಲೆಯಲ್ಲಿ ಫ್ಯಾನ್ಸ್ ಜತೆ ಸಂಪರ್ಕದಲ್ಲಿರಲು ಅವರು ಟ್ವಿಟರ್ ಬಳಕೆ ಆರಂಭಿಸಿದ್ದರು. ಅವರಿಗೆ ಟ್ವಿಟರ್​ನಿಂದ ಬ್ಲೂಟಿಕ್ ಕೂಡ ಸಿಕ್ಕಿತ್ತು. ಈಗ ಅವರು ನಿಧನ ಹೊಂದಿ ಅನೇಕ ತಿಂಗಳಾಗಿದೆ. ಅವರ ಟ್ವಿಟರ್ ಆ್ಯಕ್ಟೀವ್ ಇಲ್ಲದ ಕಾರಣ ಬ್ಲೂಟಿಕ್ ತೆಗೆಯಲಾಗಿದೆ.

ಟ್ವಿಟರ್ ತನ್ನದೇ ಆದ ನಿಯಮಗಳನ್ನು ಹೊಂದಿದೆ. ಪರಿಶೀಲಿಸಿದ ಟ್ವಿಟರ್ ಖಾತೆ ನಿಷ್ಕ್ರಿಯವಾಗಿದ್ದರೆ ಬ್ಲೂಟಿಕ್ ಬ್ಯಾಡ್ಜ್ ಅನ್ನು ತೆಗೆದುಹಾಕುತ್ತದೆ. ಸಾಮಾನ್ಯವಾಗಿ ಆರು ತಿಂಗಳು ಅಥವಾ ಅದಕ್ಕಿಂತ ಹೆಚ್ಚಿನ ಕಾಲ ಟ್ವಿಟರ್​ನಲ್ಲಿ ಯಾವುದೇ ಚಟುವಟಿಕೆ ಇಲ್ಲದೆ ಇದ್ದರೆ ಟ್ವಿಟರ್ ಈ ರೀತಿ ಮಾಡುತ್ತದೆ.

ಇದನ್ನೂ ಓದಿ
Image
ಆಗಸ್ಟ್​​ನಲ್ಲಿ ‘ಲಕ್ಕಿ ಮ್ಯಾನ್​’ ಸಿನಿಮಾ ತೆರೆಗೆ; ಪುನೀತ್ ನೋಡಲು ಕಾದಿದ್ದಾರೆ ಫ್ಯಾನ್ಸ್​
Image
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
Image
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Image
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ

ಇದನ್ನೂ ಓದಿ: ಪುನೀತ್ ಕನಸಿನ ಪ್ರಾಜೆಕ್ಟ್ ‘ಗಂಧದಗುಡಿ’ ಸಾಕ್ಷ್ಯಚಿತ್ರದ ರಿಲೀಸ್ ಡೇಟ್ ಬಗ್ಗೆ ಹೊಸ ಅಪ್​ಡೇಟ್

ಈ ಮೊದಲು ಎಂ.ಎಸ್​. ಧೋನಿ ಅವರಿಗೂ ಟ್ವಿಟರ್ ಇದೇ ರೀತಿ ಮಾಡಿತ್ತು. ಅವರು ಟ್ವಿಟರ್​ನಲ್ಲಿ ಆ್ಯಕ್ಟೀವ್ ಇಲ್ಲ ಎಂಬ ಕಾರಣಕ್ಕೆ ಬ್ಲೂಟಿಕ್ ತೆಗೆದು ಹಾಕಿತ್ತು. ನಂತರ ಧೋನಿ ಟೀಂ ಮರಳಿ ಮನವಿ ಸಲ್ಲಿಕೆ ಮಾಡಿದ ಹಿನ್ನೆಲೆಯಲ್ಲಿ ಬ್ಲೂಟಿಕ್ ಮರಳಿ ನೀಡಿತ್ತು.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಪುನೀತ್ ರಾಜ್​ಕುಮಾರ್ ಅವರು ನಿಧನ ಹೊಂದುವುದಕ್ಕೂ ಮೊದಲು ಕೆಲ ಚಿತ್ರಗಳಲ್ಲಿ ನಟಿಸುತ್ತಿದ್ದರು. ಈ ಪೈಕಿ ಕೆಲ ಸಿನಿಮಾಗಳ ಕೆಲಸಗಳು ಅರ್ಧಕ್ಕೆ ನಿಂತಿವೆ. ಇನ್ನೂ ಕೆಲ ಚಿತ್ರಗಳ ಕೆಲಸಗಳು ಪೂರ್ಣಗೊಂಡಿವೆ. ಆ ಪೈಕಿ ‘ಜೇಮ್ಸ್​’ ಸಿನಿಮಾ ಈಗಾಗಲೇ ರಿಲೀಸ್ ಆಗಿದೆ. ಡಾರ್ಲಿಂಗ್ ಕೃಷ್ಣ ನಟನೆಯ ‘ಲಕ್ಕಿ ಮ್ಯಾನ್’ ಸಿನಿಮಾದಲ್ಲಿ ಪುನೀತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಆಗಸ್ಟ್​ನಲ್ಲಿ ತೆರೆಗೆ ಬರುತ್ತಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ಪುನೀತ್ ಅವರನ್ನು ಮತ್ತೆ ತೆರೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ.

Published On - 9:57 pm, Wed, 13 July 22

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ