AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್ ರೋಣ’ ಚಿತ್ರ ನೋಡುವಾಗ ಕಿರಿಕ್​; ಥಿಯೇಟರ್​ನಲ್ಲೇ ಝಳಪಿಸಿದ ಮಚ್ಚು, ಲಾಂಗ್

ಎಲ್ಲ ಕಡೆಗಳಲ್ಲಿ ಚಿತ್ರಕ್ಕೆ ಒಳ್ಳೆಯ ರೇಟಿಂಗ್ ಸಿಗುತ್ತಿದೆ. ಈ ಮಧ್ಯೆ ಚಿಕ್ಕಮಗಳೂರಿನಲ್ಲಿ ಸಿನಿಮಾ ಪ್ರದರ್ಶನದ ವೇಳೆಯೆ ಮಾರಾಮಾರಿ ಆಗಿದೆ.

‘ವಿಕ್ರಾಂತ್ ರೋಣ’ ಚಿತ್ರ ನೋಡುವಾಗ ಕಿರಿಕ್​; ಥಿಯೇಟರ್​ನಲ್ಲೇ ಝಳಪಿಸಿದ ಮಚ್ಚು, ಲಾಂಗ್
ಸುದೀಪ್
TV9 Web
| Edited By: |

Updated on:Jul 28, 2022 | 5:40 PM

Share

‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ಇಂದು (ಜುಲೈ 28) ವಿಶ್ವಾದ್ಯಂತ ತೆರೆಗೆ ಬಂದಿದೆ. ಈ ಸಿನಿಮಾವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಎಲ್ಲ ಕಡೆಗಳಲ್ಲಿ ಚಿತ್ರಕ್ಕೆ ಒಳ್ಳೆಯ ರೇಟಿಂಗ್ ಸಿಗುತ್ತಿದೆ. ಈ ಮಧ್ಯೆ ಚಿಕ್ಕಮಗಳೂರಿನಲ್ಲಿ (Chikkamagaluru) ಸಿನಿಮಾ ಪ್ರದರ್ಶನದ ವೇಳೆಯೆ ಮಾರಾಮಾರಿ ಆಗಿದೆ. ಎರಡು ಗುಂಪುಗಳು ಮಚ್ಚುಗಳಿಂದ ಹೊಡೆದಾಡಿಕೊಂಡಿವೆ. ಇದರಿಂದ ಉಳಿದ ಪ್ರೇಕ್ಷಕರಿಗೆ ತೊಂದರೆ ಆಗಿದೆ.

ಚಿಕ್ಕಮಗಳೂರು ನಗರದ ಮಿಲನ ಥಿಯೇಟರ್​ನಲ್ಲಿ ಈ ಘಟನೆ ನಡೆದಿದೆ. ‘ವಿಕ್ರಾಂತ್ ರೋಣ’ ಸಿನಿಮಾ ಪ್ರದರ್ಶನ ಕಾಣುತ್ತಿತ್ತು. ಈ ವೇಳೆ ವ್ಯಕ್ತಿಯೋರ್ವ ಪದೇಪದೇ ಹೊರಗೆ ಹೋಗುವುದು, ಒಳಗೆ ಬರುವುದು ಮಾಡುತ್ತಿದ್ದ. ಇದರಿಂದ ಚಿತ್ರಮಂದಿರದ ಪರದೆಗೆ ಪದೇಪದೇ ಬೆಳಕು ಬೀಳುತ್ತಿತ್ತು. ಇದು ಆ ವ್ಯಕ್ತಿಯ ಹಿಂದಿನ ಸಾಲಿನಲ್ಲಿ ಕುಳಿತವರ ಅಸಮಾಧಾನಕ್ಕೆ ಕಾರಣ ಆಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದಾಗ ಇಬ್ಬರ ನಡುವೆ ಕಿರಿಕ್ ಆಗಿದೆ.

ನಂತರ ಎರಡೂ ಗುಂಪಿನವರು ಸಿನಿಮಾ ಥಿಯೇಟರ್​​ನ ಆವರಣದಲ್ಲಿ ಮಚ್ಚು-ಲಾಂಗ್​ನಿಂದ ಹೊಡೆದಾಡಿಕೊಂಡಿದ್ದಾರೆ. ಭರತ್​ ಎಂಬುವವರಿಗೆ ಗಂಭೀರ ಗಾಯ ಆಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೆಲಕ್ಕೆ ಬಿದ್ದರೂ ಯುವಕರು ಭರತ್​ ಮೇಲೆ ನಿರಂತರವಾಗಿ ಹಲ್ಲೆ ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಭರತ್ ಅವರನ್ನು​​ ಹಾಸನಕ್ಕೆ ಕಳುಹಿಸಲಾಗಿದೆ. ಹಲ್ಲೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಗುಂಪನ್ನು ಚದುರಿಸಿದ್ದಾರೆ. ನಂತರ ಪರಿಸ್ಥಿತಿ ತಿಳಿಯಾಗಿದೆ.

ಇದನ್ನೂ ಓದಿ
Image
Prashanth Neel: ಕಿಚ್ಚ ಸುದೀಪ್​, ‘ವಿಕ್ರಾಂತ್ ರೋಣ’ ತಂಡಕ್ಕೆ ವಿಶ್ ಮಾಡಿದ ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​
Image
Vikrant Rona Review: ಸಸ್ಪೆನ್ಸ್ ಕಥೆಯ ‘ರಂಗು’ ಹೆಚ್ಚಿಸಿದ ಸುದೀಪ್-ಅನೂಪ್​; ಇಷ್ಟವಾಗುತ್ತೆ ಕಿಚ್ಚನ ಗೆಟಪ್
Image
Vikrant Rona Twitter Review: ‘ಇದು ಬೆಸ್ಟ್​​ 3ಡಿ ಅನುಭವ’: ವಿಕ್ರಾಂತ್​ ರೋಣ ನೋಡಿ ಮೆಚ್ಚಿದ ಫ್ಯಾನ್ಸ್​
Image
Vikrant Rona Review: ವಿದೇಶಿ ಸೆನ್ಸಾರ್​ ಸದಸ್ಯರಿಂದ ‘ವಿಕ್ರಾಂತ್​ ರೋಣ’ ವಿಮರ್ಶೆ; ಕ್ಲೈಮ್ಯಾಕ್ಸ್​ ಬಗ್ಗೆ ವಿಶೇಷ ಮೆಚ್ಚುಗೆ

ಇದನ್ನೂ ಓದಿ: ‘ವಿಕ್ರಾಂತ್ ರೋಣ’ ಚಿತ್ರ ಆನ್​​ಲೈನ್​ನಲ್ಲಿ ಸೋರಿಕೆ; ಸುದೀಪ್ ಹೇಳಿದ ಮಾತು ನೆನಪಿಸಿಕೊಂಡ ಫ್ಯಾನ್ಸ್

‘ವಿಕ್ರಾಂತ್ ರೋಣ’ ಚಿತ್ರಕ್ಕೆ ಅನೂಪ್ ಭಂಡಾರಿ ಅವರ ನಿರ್ದೇಶನ ಇದೆ. ಕಿಚ್ಚ ಸುದೀಪ್​, ನಿರೂಪ್ ಭಂಡಾರಿ, ನೀತಾ ಅಶೋಕ್, ಜಾಕ್ವೆಲಿನ್ ಫರ್ನಾಂಡಿಸ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಮೊದಲ ದಿನ ಒಳ್ಳೆಯ ರೆಸ್ಪಾನ್ಸ್ ಬಂದಿದೆ. ಅನೇಕ ಕಡೆಗಳಲ್ಲಿ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಹೀಗಾಗಿ, ಸಿನಿಮಾ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎನ್ನುವ ಕುತೂಹಲ ಇದೆ. ಇದಕ್ಕೆ, ಜುಲೈ 29ರಂದು ಉತ್ತರ ಸಿಗಲಿದೆ.

Published On - 4:52 pm, Thu, 28 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್