AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್​ಗೆ ಮುಳುವಾಗುತ್ತಾ ಈ ಇಬ್ಬರ ವಿಚಾರಣೆ?

ದರ್ಶನ್ ಆಪ್ತರು, ಪ್ರಕರಣಕ್ಕೆ ಸಂಬಂಧಿಸಿದವರು ವಿಚಾರಣೆ ವೇಳೆ ಯಾವ ರೀತಿಯ ಮಾಹಿತಿ ಹಂಚಿಕೊಳ್ಳುತ್ತಾರೆ ಅನ್ನೋದು ತುಂಬಾನೇ ಮುಖ್ಯ ಆಗುತ್ತದೆ. ಈ ಮಾಹಿತಿಯನ್ನು ಆಧಿರಿಸಿ ಪೊಲೀಸರು ಮುಂದಿನ ತನಿಖೆ ನಡೆಸುತ್ತಾರೆ. ಕೆಲವು ಮಾಹಿತಿಗಳು ದರ್ಶನ್​ಗೆ ಮುಳುವಾದರೂ ಆಗಬಹುದು.

ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್​ಗೆ ಮುಳುವಾಗುತ್ತಾ ಈ ಇಬ್ಬರ ವಿಚಾರಣೆ?
ದರ್ಶನ್
Malatesh Jaggin
| Updated By: ರಾಜೇಶ್ ದುಗ್ಗುಮನೆ|

Updated on: Jul 06, 2024 | 11:26 AM

Share

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಈಗಾಗಲೇ ದರ್ಶನ್​, ಪವಿತ್ರಾ ಗೌಡ ಸೇರಿ ಅನೇಕರ ಬಂಧನ ನಡೆದಿದೆ. ಪ್ರಕರಣದ ಜೊತೆ, ದರ್ಶನ್ ಜೊತೆ ಲಿಂಕ್ ಹೊಂದಿರೋ ಎಲ್ಲರನ್ನೂ ವಿಚಾರಣೆ ಮಾಡಲಾಗುತ್ತಿದೆ. ಈ ವೇಳೆ ಯಾವೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ದರ್ಶನ್ ಕೊಲೆ ಕೇಸ್​ನಲ್ಲಿ ಇಂದು (ಜುಲೈ 6) ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಇದರಿಂದ ದರ್ಶನ್​ಗೆ ಸಂಕಷ್ಟ ಎದುರಾಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಕಾರು ಚಾಲಕ ಕಾರ್ತಿಕ್ ಪುರೋಹಿತ್, ನಿರ್ದೇಶಕ ಮಿಲನ ಪ್ರಕಾಶ್​ ಅವರನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಬರುವಂತೆ ಹೇಳಲಾಗಿದೆ. ಜುಲೈ 5ರಂದು ಒಂದುವರೇ ಗಂಟೆ ಮಿಲನ ಪ್ರಕಾಶ್ ಅವರ ವಿಚಾರಣೆ ಮಾಡಲಾಗಿತ್ತು. ದರ್ಶನ್ ಜೊತೆಗಿನ ಹಣಕಾಸಿನ ವ್ಯವಹಾರ ಸಂಬಂಧ ವಿಚಾರಣೆ ನಡೆಸಲಾಗಿತ್ತು. ಇಂದು ದಾಖಲೆಗಳ ಸಮೇತ ಮತ್ತೆ ‌ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಕಾರು ಚಾಲಕ ಕಾರ್ತಿಕ್ ಪುರೋಹಿತ್​ಗೆ ಎರಡನೇ ಬಾರಿಗೆ ನೋಟಿಸ್ ನೀಡಲಾಗಿದೆ. ಕಾರ್ತಿಕ್ ಪುರೋಹಿತ್ ಅವರು ಆರೋಪಿ ಪ್ರದೋಷ್​ಗೆ ಆಪ್ತ ಎನಿಸಿಕೊಂಡಿದ್ದಾರೆ. ಜೊತೆಗೆ ಕೊಲೆ ಪ್ರಕರಣದ ವೇಳೆ ಆರೋಪಿಗಳ ಜೊತೆಗಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಇಬ್ಬರನ್ನು ಎಸಿಪಿ ಚಂದನ್ ವಿಚಾರಣೆ ನಡೆಸಲಿದ್ದಾರೆ.

ಇದನ್ನೂ ಓದಿ: ‘ಅಕ್ಟೋಬರ್​ ನಂತರವೇ ದರ್ಶನ್​ಗೆ ಏಳ್ಗೆ, ಅಲ್ಲಿಯವರೆಗೆ ಜೈಲೇ ಗತಿ’; ವಿದ್ಯಾ ಶಂಕರಾನಂದ ಸರಸ್ವತಿ

ದರ್ಶನ್ ಆಪ್ತರು ವಿಚಾರಣೆ ವೇಳೆ ಯಾವ ರೀತಿಯ ಮಾಹಿತಿ ಹಂಚಿಕೊಳ್ಳುತ್ತಾರೆ ಅನ್ನೋದು ತುಂಬಾನೇ ಮುಖ್ಯ ಆಗುತ್ತದೆ. ಈ ಮಾಹಿತಿಯನ್ನು ಆಧಿರಿಸಿ ಪೊಲೀಸರು ಮುಂದಿನ ತನಿಖೆ ನಡೆಸುತ್ತಾರೆ. ಕೆಲವು ಮಾಹಿತಿಗಳು ದರ್ಶನ್​ಗೆ ಮುಳುವಾದರೂ ಆಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ