AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರಿಗೆ ಪುನೀತ್ ರಾಜ್​ಕುಮಾರ್ ಕಣ್ಣುಗಳು ಅಳವಡಿಕೆ; ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಅಪ್ಪ ಡಾ.ರಾಜ್​ಕುಮಾರ್ ಹಾದಿಯಲ್ಲೇ ಸಾಗಿದ ಪುನೀತ್ ಕಣ್ಣುಗಳನ್ನು ದಾನ ಮಾಡಿದ್ದಾರೆ. ಈ ಮೂಲಕ ಇಬ್ಬರ ಬಾಳಿನಲ್ಲಿ ಬೆಳಕಾಗಿದ್ದಾರೆ.

ಇಬ್ಬರಿಗೆ ಪುನೀತ್ ರಾಜ್​ಕುಮಾರ್ ಕಣ್ಣುಗಳು ಅಳವಡಿಕೆ; ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಪುನೀತ್ ರಾಜ್​​ಕುಮಾರ್
TV9 Web
| Edited By: sandhya thejappa|

Updated on:Oct 31, 2021 | 1:13 PM

Share

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅಕಾಲಿಕ ಅಗಲಿಕೆಯಿಂದ ಇಡೀ ಕರುನಾಡು ಸೂತಕದ ವಾತಾವರಣದಿಂದ ಕೂಡಿದೆ. ಕೋಟ್ಯಾಂತರ ಅಭಿಮಾನಿಗಳು ಅಪ್ಪು ನಿಧನಕ್ಕೆ ಕಣ್ಣೀರು ಹಾಕಿದ್ದಾರೆ. ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಕೆಲ ಅಭಿಮಾನಿಗಳಿಗೆ ಹೃದಯಾಘಾತವಾಗಿದೆ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಹೊರ ರಾಜ್ಯ, ಹೊರ ದೇಶಗಳಲ್ಲೂ ಪುನೀತ್ ಅಭಿಮಾನಿಗಳನ್ನು ಹೊಂದಿದ್ದಾರೆ. ಅಜಾತಶತ್ರು ಪವರ್ ಸ್ಟಾರ್ ಪುನೀತ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಅಪ್ಪ ಡಾ.ರಾಜ್​ಕುಮಾರ್ ಹಾದಿಯಲ್ಲೇ ಸಾಗಿದ ಪುನೀತ್ ಕಣ್ಣುಗಳನ್ನು ದಾನ ಮಾಡಿದ್ದಾರೆ. ಈ ಮೂಲಕ ಇಬ್ಬರ ಬಾಳಿನಲ್ಲಿ ಬೆಳಕಾಗಿದ್ದಾರೆ. ಇಬ್ಬರಿಗೆ ಪುನೀತ್ ರಾಜ್​ಕುಮಾರ್​ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಅಳವಡಿಕೆ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾರಾಯಣ ನೇತ್ರಾಲಯದಲ್ಲಿ ವೈದ್ಯರು ನಿನ್ನೆ ಒಬ್ಬರಿಗೆ, ಇಂದು ಮತ್ತೊಬ್ಬರಿಗೆ ಪುನೀತ್ ಕಣ್ಣುಗಳನ್ನು ಅಳವಡಿಸಿದ್ದಾರೆ. ಈ ಬಗ್ಗೆ ವೈದ್ಯರು ನವೆಂಬರ್ 2ಕ್ಕೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.

ಅತ್ತಿಗುಂಡಿ ಗ್ರಾಮದಲ್ಲಿ ನೀರವ ಮೌನ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಪ್ರದೇಶದ ಅತ್ತಿಗುಂಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಅತ್ತಿಗುಂಡಿ ಗ್ರಾಮದಲ್ಲಿ ಬೆಟ್ಟದ ಹೂವು ಸಿನಿಮಾ ಚಿತ್ರೀಕರಣವಾಗಿತ್ತು. ಬೆಟ್ಟದ ಹೂವು ಸಿನಿಮಾಕ್ಕೆ ಪುನೀತ್ ರಾಜ್​ಕುಮಾರ್​ಗೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ಅಪ್ಪು ಚಿಕ್ಕಮಗಳೂರಿನ ಜನರ ಜೊತೆಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಕಳೆದ ಎರಡು ವರ್ಷದ ಹಿಂದೆ ಅತ್ತಿಗುಂಡಿ ಗ್ರಾಮಕ್ಕೆ ಪುನೀತ್ ಭೇಟಿ ನೀಡಿದ್ದರು. ಜನರ ಜೊತೆ ಬೆರೆತು ಬೆಟ್ಟದ ಹೂವು ಸಿನಿಮಾ ಬಗ್ಗೆ ಚರ್ಚೆ ಮಾಡಿದ್ದರು. ಈ ಬಗ್ಗೆ ಪವರ್ ಸ್ಟಾರ್ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ

ಡಾ ರಾಜ್ ಕನಸಿನ ಕೂಸಾಗಿರುವ ಮೈಸೂರಿನ ಶಕ್ತಿಧಾಮ ಆಶ್ರಮಕ್ಕೆ ಪುನೀತ್ ರಾಜ್ ಕುಮಾರ್ ಎಲ್ಲವೂ ಆಗಿದ್ದರು

ಪುನೀತ್ ಹಠಾತ್ ನಿಧನದಿಂದ ರಾಜ್​ಕುಮಾರ್ ಹೆಸರಿನ ಹೋಟೆಲ್ ನಡೆಸುತ್ತಿದ್ದ ಅಭಿಮಾನಿ ಸಾವು!

Published On - 1:04 pm, Sun, 31 October 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು