ಇಬ್ಬರಿಗೆ ಪುನೀತ್ ರಾಜ್​ಕುಮಾರ್ ಕಣ್ಣುಗಳು ಅಳವಡಿಕೆ; ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಅಪ್ಪ ಡಾ.ರಾಜ್​ಕುಮಾರ್ ಹಾದಿಯಲ್ಲೇ ಸಾಗಿದ ಪುನೀತ್ ಕಣ್ಣುಗಳನ್ನು ದಾನ ಮಾಡಿದ್ದಾರೆ. ಈ ಮೂಲಕ ಇಬ್ಬರ ಬಾಳಿನಲ್ಲಿ ಬೆಳಕಾಗಿದ್ದಾರೆ.

ಇಬ್ಬರಿಗೆ ಪುನೀತ್ ರಾಜ್​ಕುಮಾರ್ ಕಣ್ಣುಗಳು ಅಳವಡಿಕೆ; ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಪುನೀತ್ ರಾಜ್​​ಕುಮಾರ್
Edited By: sandhya thejappa

Updated on: Oct 31, 2021 | 1:13 PM

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅಕಾಲಿಕ ಅಗಲಿಕೆಯಿಂದ ಇಡೀ ಕರುನಾಡು ಸೂತಕದ ವಾತಾವರಣದಿಂದ ಕೂಡಿದೆ. ಕೋಟ್ಯಾಂತರ ಅಭಿಮಾನಿಗಳು ಅಪ್ಪು ನಿಧನಕ್ಕೆ ಕಣ್ಣೀರು ಹಾಕಿದ್ದಾರೆ. ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಕೆಲ ಅಭಿಮಾನಿಗಳಿಗೆ ಹೃದಯಾಘಾತವಾಗಿದೆ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಹೊರ ರಾಜ್ಯ, ಹೊರ ದೇಶಗಳಲ್ಲೂ ಪುನೀತ್ ಅಭಿಮಾನಿಗಳನ್ನು ಹೊಂದಿದ್ದಾರೆ. ಅಜಾತಶತ್ರು ಪವರ್ ಸ್ಟಾರ್ ಪುನೀತ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಅಪ್ಪ ಡಾ.ರಾಜ್​ಕುಮಾರ್ ಹಾದಿಯಲ್ಲೇ ಸಾಗಿದ ಪುನೀತ್ ಕಣ್ಣುಗಳನ್ನು ದಾನ ಮಾಡಿದ್ದಾರೆ. ಈ ಮೂಲಕ ಇಬ್ಬರ ಬಾಳಿನಲ್ಲಿ ಬೆಳಕಾಗಿದ್ದಾರೆ. ಇಬ್ಬರಿಗೆ ಪುನೀತ್ ರಾಜ್​ಕುಮಾರ್​ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಅಳವಡಿಕೆ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾರಾಯಣ ನೇತ್ರಾಲಯದಲ್ಲಿ ವೈದ್ಯರು ನಿನ್ನೆ ಒಬ್ಬರಿಗೆ, ಇಂದು ಮತ್ತೊಬ್ಬರಿಗೆ ಪುನೀತ್ ಕಣ್ಣುಗಳನ್ನು ಅಳವಡಿಸಿದ್ದಾರೆ. ಈ ಬಗ್ಗೆ ವೈದ್ಯರು ನವೆಂಬರ್ 2ಕ್ಕೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.

ಅತ್ತಿಗುಂಡಿ ಗ್ರಾಮದಲ್ಲಿ ನೀರವ ಮೌನ
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಪ್ರದೇಶದ ಅತ್ತಿಗುಂಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಅತ್ತಿಗುಂಡಿ ಗ್ರಾಮದಲ್ಲಿ ಬೆಟ್ಟದ ಹೂವು ಸಿನಿಮಾ ಚಿತ್ರೀಕರಣವಾಗಿತ್ತು. ಬೆಟ್ಟದ ಹೂವು ಸಿನಿಮಾಕ್ಕೆ ಪುನೀತ್ ರಾಜ್​ಕುಮಾರ್​ಗೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ಅಪ್ಪು ಚಿಕ್ಕಮಗಳೂರಿನ ಜನರ ಜೊತೆಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಕಳೆದ ಎರಡು ವರ್ಷದ ಹಿಂದೆ ಅತ್ತಿಗುಂಡಿ ಗ್ರಾಮಕ್ಕೆ ಪುನೀತ್ ಭೇಟಿ ನೀಡಿದ್ದರು. ಜನರ ಜೊತೆ ಬೆರೆತು ಬೆಟ್ಟದ ಹೂವು ಸಿನಿಮಾ ಬಗ್ಗೆ ಚರ್ಚೆ ಮಾಡಿದ್ದರು. ಈ ಬಗ್ಗೆ ಪವರ್ ಸ್ಟಾರ್ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ

ಡಾ ರಾಜ್ ಕನಸಿನ ಕೂಸಾಗಿರುವ ಮೈಸೂರಿನ ಶಕ್ತಿಧಾಮ ಆಶ್ರಮಕ್ಕೆ ಪುನೀತ್ ರಾಜ್ ಕುಮಾರ್ ಎಲ್ಲವೂ ಆಗಿದ್ದರು

ಪುನೀತ್ ಹಠಾತ್ ನಿಧನದಿಂದ ರಾಜ್​ಕುಮಾರ್ ಹೆಸರಿನ ಹೋಟೆಲ್ ನಡೆಸುತ್ತಿದ್ದ ಅಭಿಮಾನಿ ಸಾವು!

Published On - 1:04 pm, Sun, 31 October 21

Web contact

TV9 Kannada

Read More
Follow Us