AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS v/s IPS: ಸಿನಿಮಾ ಆಗುತ್ತಿದೆ ಐಎಎಸ್-ಐಪಿಎಸ್ ಕಿತ್ತಾಟ: ಎರಡು ಟೈಟಲ್ ರಿಜಿಸ್ಟರ್​ಗೆ ಅರ್ಜಿ

ರಾಜ್ಯದ ಗಮನ ಸೆಳೆದಿರುವ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಬ್ಬರ ಕಿತ್ತಾಟ ಸಿನಿಮಾ ಆಗಲಿದೆ. ಇಬ್ಬರು ನಿರ್ಮಾಪಕರು ಈ 'ಬ್ಯೂರೋಕ್ರಾಟ್ ಬಡಿದಾಟ'ವನ್ನು ಸಿನಿಮಾ ಮಾಡಲು ಮುಂದಾಗಿದ್ದು, ಟೈಟಲ್ ರಿಜಿಸ್ಟರ್​ಗಾಗಿ ಫಿಲಂ ಚೇಂಬರ್​ಗೆ ಅರ್ಜಿ ಹಾಕಿದ್ದಾರೆ.

IAS v/s IPS: ಸಿನಿಮಾ ಆಗುತ್ತಿದೆ ಐಎಎಸ್-ಐಪಿಎಸ್ ಕಿತ್ತಾಟ: ಎರಡು ಟೈಟಲ್ ರಿಜಿಸ್ಟರ್​ಗೆ ಅರ್ಜಿ
ಐಎಎಸ್-ಐಪಿಎಸ್
ಮಂಜುನಾಥ ಸಿ.
|

Updated on:Feb 25, 2023 | 4:20 PM

Share

ರಾಜ್ಯದ ಗಮನ ಸೆಳೆದಿರುವ ಐಎಎಸ್ (IAS) ಹಾಗೂ ಐಪಿಎಸ್ (IPS) ಅಧಿಕಾರಿಗಳಿಬ್ಬರ ಕಿತ್ತಾಟ ಸಿನಿಮಾ ಆಗಲಿದೆ. ಇಬ್ಬರು ನಿರ್ಮಾಪಕರು ಈ ‘ಬ್ಯೂರೋಕ್ರಾಟ್ ಬಡಿದಾಟ’ವನ್ನು ಸಿನಿಮಾ ಮಾಡಲು ಮುಂದಾಗಿದ್ದು, ಟೈಟಲ್ ರಿಜಿಸ್ಟರ್​ಗಾಗಿ ಫಿಲಂ ಚೇಂಬರ್​ಗೆ (Film Chamber) ಅರ್ಜಿ ಹಾಕಿದ್ದಾರೆ. ಈ ಹಿಂದೆ ‘ಐದು ಅಡಿ ಏಳು ಅಂಗುಲ’, ‘ಕೋಡಂಗಿ’ ಸಿನಿಮಾಗಳನ್ನು ನಿರ್ಮಿಸಿರುವ ಬಿಯಾಂಡ್ ಡ್ರೀಮ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಹಾಗೂ ಪ್ರವೀಣ್ ಶೆಟ್ಟಿ ಎಂಬ ನಿರ್ಮಾಪಕರು ಎರಡು ಪ್ರತ್ಯೇಕ ಟೈಟಲ್​ ನೀಡುವಂತೆ ಕೋರಿದ್ದಾರೆ.

ಐಎಎಸ್-ಐಪಿಎಸ್ ಜಗಳದ ಕೇಂದ್ರ ಬಿಂದುವಾಗಿರುವ ಅಧಿಕಾರಿಯ ಹೆಸರುಳ್ಳ ಟೈಟಲ್​ಗಾಗಿ ಒಂದು ಅರ್ಜಿ ಬಂದಿದ್ದು ಆ ಸಿನಿಮಾವನ್ನು ಪ್ರವೀಣ್ ಶೆಟ್ಟಿ ಎಂಬುವರು ನಿರ್ಮಾಣ ಮಾಡಲಿದ್ದಾರೆ. R v/s R ಎಂಬ ಮತ್ತೊಂದು ಟೈಟಲ್​ಗಾಗಿಯೂ ಅರ್ಜಿ ಬಂದಿದ್ದು ಈ ಸಿನಿಮಾವನ್ನು ನಿತ್ಯಾನಂದ ಪ್ರಭು ಎಸ್ ಎಂಬುವರು ನಿರ್ದೇಶನ ಮಾಡಲಿದ್ದಾರೆ, ಬಿಯಾಂಡ್ ಡ್ರೀಮ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಬಂಡವಾಳ ಹೂಡಲಿದೆ.

ಅಧಿಕಾರ, ರಾಜಕೀಯ, ಭ್ರಷ್ಟಾಚಾರ, ಹಣ, ಸೌಂದರ್ಯ, ಮಾದಕತೆ, ಪ್ರೀತಿ, ಮೋಸ, ನಿರಾಸೆ, ಆತ್ಮಹತ್ಯೆ, ಕುಟುಂಬ ಹಲವು ಅಂಶಗಳನ್ನು ಒಳಗೊಂಡ ಈ ಸತ್ಯಕತೆಯನ್ನು ಸಿನಿಮಾ ಮಾಡಲು ನಿರ್ಮಾಪಕರು ಕಾತರರಾಗಿದ್ದು, ತಾವು ಕೋರಿರುವ ಟೈಟಲ್ ಅನ್ನು ನೀಡುವಂತೆ ಫಿಲಂ ಚೇಂಬರ್​ಗೆ ಮನವಿ ಮಾಡಿದ್ದಾರೆ.

ಟೈಟಲ್ ರಿಜಿಸ್ಟರ್​ಗೆ ಅರ್ಜಿ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಫಿಲಂ ಚೇಂಬರ್ ಅಧ್ಯಕ್ಷ ಬಾಮಾ ಹರೀಶ್, ”ಇಂದಷ್ಟೆ ಸಿನಿಮಾ ಟೈಟಲ್​ಗಾಗಿ ಅರ್ಜಿಗಳು ಬಂದಿವೆ. ಬಂದಿರುವ ಎರಡೂ ಅರ್ಜಿಗಳನ್ನು ಸೋಮವಾರ ಟೈಟಲ್ ಕಮಿಟಿಯ ಮುಂದಿಡುತ್ತೇವೆ. ಸಮಿತಿ ಅನುಮತಿ ನೀಡಿದರೆ ಟೈಟಲ್ ನೀಡುತ್ತೇವೆ. ಯಾವುದೇ ವ್ಯಕ್ತಿಯ ಜೀವನ ಆಧರಿಸಿ ಸಿನಿಮಾ ಮಾಡುವುದಾದರೆ ಅವರಿಂದ ನಿರಪೇಕ್ಷಣಾ ಪತ್ರ (NOC) ಪಡೆಯಬೇಕಾಗುತ್ತದೆ” ಎಂದಿದ್ದಾರೆ.

ನಿರ್ದೇಶಕ ನಿತ್ಯಾನಂದ ಪ್ರಭು ಮಾತನಾಡಿ, ”ಆರ್ vs ಆರ್ ಟೈಟಲ್ ನೀಡುವಂತೆ ಅರ್ಜಿ ಹಾಕಲಾಗಿದ್ದು, ಇದು ನೈಜ ಘಟನೆ ಆಧರಿತ ಸಿನಿಮಾ ಆಗಿರಲಿದೆ. ಆದರೆ ಸಿನಿಮಾದಲ್ಲಿ ಒಂದೊಳ್ಳೆ ಸಂದೇಶ ಸಹ ಇರುತ್ತದೆ. ಫಿಲಂ ಚೇಂಬರ್ ಟೈಟಲ್ ಕೊಟ್ಟ ನಂತರ ಕಥೆ ಸಾರಾಂಶವನ್ನ ಫಿಲಂ ಚೇಂಬರ್​ಗೆ ನೀಡುತ್ತೇವೆ” ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Sat, 25 February 23

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್