AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬದಂದು ಪುನೀತ್​ ವಿಡಿಯೋ ವೈರಲ್​; ಆ ಧ್ವನಿ ಕೇಳಿ ಮರುಗಿದ ಅಪ್ಪು ಅಭಿಮಾನಿಗಳು

‘ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಯುಗಾದಿ ನಿಮ್ಮೆಲ್ಲರಿಗೂ ಸುಖ ಸಂತೋಷ ನೀಡಲಿ’ ಎಂದು ಪುನೀತ್​ ರಾಜ್​ಕುಮಾರ್​ ಹೇಳಿದ್ದರು. ಆ ವಿಡಿಯೋ ಈಗ ವೈರಲ್​ ಆಗಿದೆ.

ಯುಗಾದಿ ಹಬ್ಬದಂದು ಪುನೀತ್​ ವಿಡಿಯೋ ವೈರಲ್​; ಆ ಧ್ವನಿ ಕೇಳಿ ಮರುಗಿದ ಅಪ್ಪು ಅಭಿಮಾನಿಗಳು
ಪುನೀತ್​ ರಾಜ್​ಕುಮಾರ್​
TV9 Web
| Updated By: ಮದನ್​ ಕುಮಾರ್​|

Updated on: Apr 02, 2022 | 12:51 PM

Share

ಅಭಿಮಾನಿಗಳಿಗೆ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರ ನೆನಪು ಪ್ರತಿ ದಿನವೂ ಕಾಡುತ್ತದೆ. ಎಲ್ಲಿ ನೋಡಿದರೂ ಅವರೇ ಕಾಣಿಸುತ್ತಾರೆ ಎಂಬಷ್ಟು ನೆನಪುಗಳನ್ನು ಕೊಟ್ಟು ಹೋಗಿದ್ದಾರೆ ಅಪ್ಪು. ಅದರಲ್ಲೂ ಯಾವುದೇ ವಿಶೇಷ ದಿನಗಳ ಬಂದರೂ ಕೂಡ ಪುನೀತ್​ ರಾಜ್​ಕುಮಾರ್​ ಅವರನ್ನು ಫ್ಯಾನ್ಸ್​ ಸ್ಮರಿಸಿಕೊಳ್ಳುತ್ತಾರೆ. ‘ಒಂದು ವೇಳೆ ನಮ್ಮ ಅಪ್ಪು ಇದ್ದಿದ್ದರೆ ಎಷ್ಟು ಚೆನ್ನಾಗಿ ಇರುತ್ತಿತ್ತು’ ಎಂದು ನೊಂದುಕೊಳ್ಳುತ್ತಾರೆ. ಎಲ್ಲ ಹಬ್ಬ, ಉತ್ಸವಗಳಲ್ಲೂ ‘ಪವರ್​ ಸ್ಟಾರ್​’ ನೆನಪಾಗುತ್ತಾರೆ. ಇಂದು (ಏ.2) ಯುಗಾದಿ ಹಬ್ಬ. ಎಲ್ಲರ ಮನೆಯಲ್ಲೂ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಆದರೆ ಈ ಖುಷಿಯ ನಡುವೆ ಅಪ್ಪು ಇಲ್ಲ ಎಂಬ ನೋವು ಇದ್ದೇ ಇರುತ್ತದೆ. ಈ ಸಂದರ್ಭದಲ್ಲಿ ದೊಡ್ಮನೆ ಹುಡುಗನ ಒಂದು ವಿಡಿಯೋ ವೈರಲ್​ ಆಗಿದೆ. ಯುಗಾದಿ ((Ugadi 2022) ಹಬ್ಬದ ಸಲುವಾಗಿ ಪುನೀತ್​ ರಾಜ್​ಕುಮಾರ್​​ ಅವರು ತಮ್ಮ ಅಭಿಮಾನಿಗಳಿಗೆ ಶುಭಾಶಯ ಕೋರಿದ್ದ ವಿಡಿಯೋ ಇದು. ಅದನ್ನು ಕಂಡು ಫ್ಯಾನ್ಸ್​ ಇನ್ನಷ್ಟು ಭಾವುಕರಾಗುತ್ತಿದ್ದಾರೆ. ಅಭಿಮಾನಿಗಳ (Puneeth Rajkumar Fans) ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಈ ವಿಡಿಯೋ ರಾರಾಜಿಸುತ್ತಿದೆ. ‘ವಿ ಮಿಸ್​ ಯೂ’ ಎಂಬ ಕಮೆಂಟ್​ನೊಂದಿಗೆ ಎಲ್ಲರೂ ಅಪ್ಪು ಸ್ಮರಣೆ ಮಾಡುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಎಷ್ಟೇ ದೊಡ್ಡ ಸ್ಟಾರ್​ ನಟನಾಗಿದ್ದರೂ ಕೂಡ ಜನರ ಜೊತೆ ಸಂಪರ್ಕದಲ್ಲಿ ಇರುತ್ತಿದ್ದರು. ಎಲ್ಲರ ಜೊತೆ ಬೆರೆತು ಸಿಂಪಲ್​ ಆಗಿ ಬಾಳುತ್ತಿದ್ದರು. ಪ್ರತಿ ಹಬ್ಬ-ಹರಿದಿನಗಳಲ್ಲಿ ಅವರು ಅಭಿಮಾನಿಗಳಿಗೆ ಶುಭಾಶಯ ಕೋರುತ್ತಿದ್ದರು. ಅದೇ ರೀತಿ ಈ ಹಿಂದೆ ಅವರು ಯುಗಾದಿ ಹಬ್ಬಕ್ಕೆ ವಿಶ್​ ಮಾಡಿದ್ದರು. ‘ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಯುಗಾದಿ ನಿಮ್ಮೆಲ್ಲರಿಗೂ ಸುಖ-ಸಂತೋಷ ನೀಡಲಿ. ಹ್ಯಾಪಿ ಯುಗಾದಿ’ ಎಂದು ಅಪ್ಪು ಹೇಳಿದ್ದರು. ಆ ನಗುಮೊಗವನ್ನು ಕಂಡ ಎಲ್ಲರಿಗೂ ಈಗ ಪುನೀತ್​ ನೆನಪು ಕಾಡುತ್ತಿದೆ.

ಇದೇ ವಿಡಿಯೋವನ್ನು ರಾಘವೇಂದ್ರ ರಾಜ್​ಕುಮಾರ್​ ಅವರು ಕೂಡ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಆ ಮೂಲಕ ಅವರು ಎಲ್ಲ ಅಭಿಮಾನಿಗಳಿಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಅದಕ್ಕೆ ಜನರು ಭಾವುಕವಾಗಿ ಕಮೆಂಟ್​ ಮಾಡಿದ್ದಾರೆ. ಪುನೀತ್​ ರಾಜ್​ಕುಮಾರ್​​ ಇಲ್ಲದೇ ಹಬ್ಬಕ್ಕೆ ಕಳೆ ಇಲ್ಲ ಎಂದು ಜನರು ಕಮೆಂಟ್​ ಮೂಲಕ ತಿಳಿಸಿದ್ದಾರೆ. ಅಭಿಮಾನಿಗಳ ಮನದಲ್ಲಿ ಅಪ್ಪು ಅವರಿಗೆ ಶಾಶ್ವತ ಸ್ಥಾನ ಇದೆ. ಕಳೆದ ತಿಂಗಳು ಮಾ.17ರಂದು ಪುನೀತ್​ ರಾಜ್​ಕುಮಾರ್​ ಅವರ ಜನ್ಮದಿನ ಆಚರಿಸಲಾಯಿತು. ಅಂದು ಕೂಡ ಅವರ ಹಳೇ ವಿಡಿಯೋ ವೈರಲ್​ ಆಗಿತ್ತು. ‘ರಾತ್ರಿ ನಾನು ಮನೆಯಲ್ಲಿ ಇರಲ್ಲ. ದಯವಿಟ್ಟು ಯಾರೂ ಮನೆ ಹತ್ತಿರ ಬರಬೇಡಿ’ ಅಂತ ಪುನೀತ್​ ಹೇಳಿದ್ದ ವಿಡಿಯೋ ನೋಡಿ ಅಭಿಮಾನಿಗಳು ಕಣ್ಣೀರು ಹಾಕಿದ್ದರು.

ಪುನೀತ್​ ರಾಜ್​ಕುಮಾರ್​ ಅವರು ಹೀರೋ ಆಗಿ ನಟಿಸಿದ ಕೊನೇ ಸಿನಿಮಾ ‘ಜೇಮ್ಸ್​’ ಮಾ.17ರಂದು ತೆರೆಕಂಡಿತು. ನಾಲ್ಕು ದಿನಕ್ಕೆ 100 ಕೋಟಿ ರೂಪಾಯಿ ಗಳಿಸುವ ಮೂಲಕ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆಯಿತು. ಆ ಗೆಲುವನ್ನು ನೋಡಲು ಅಪ್ಪು ನಮ್ಮ ಜೊತೆ ಇರಬೇಕಿತ್ತು ಎಂದು ಫ್ಯಾನ್ಸ್​ ಮರುಗಿದರು. ಪುನೀತ್​ ಗೆಸ್ಟ್​ ರೋಲ್​ ಮಾಡಿರುವ ‘ಲಕ್ಕಿ ಮ್ಯಾನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಆ ಮೂಲಕ ಮತ್ತೆ ಅವರನ್ನು ದೊಡ್ಡ ಪರದೆ ಮೇಲೆ ನೀಡುವ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು. ಪುನೀತ್​ ರಾಜ್​ಕುಮಾರ್​ ಅವರು ಬಹಳ ಪ್ರೀತಿಯಿಂದ ಮಾಡಿದ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಕೂಡ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಅದರ ಬಗ್ಗೆಯೂ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ:

ಮೈಸೂರು ಜಾತ್ರೆಯಲ್ಲಿ ಎತ್ತಿನ ಕೊಂಬುಗಳಲ್ಲಿ ಮಿಂಚಿದ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್; ವಿಡಿಯೋ ಇಲ್ಲಿದೆ

ಶಾಲೆಯ ಪರೀಕ್ಷೆಯಲ್ಲಿ ಪುನೀತ್​ ಬಗ್ಗೆ ಪ್ರಶ್ನೆ; ಸಖತ್​ ವೈರಲ್​ ಆಗಿದೆ ಪ್ರಶ್ನೆಪತ್ರಿಕೆಯ ಫೋಟೋ

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ