AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಿಂದ ಹೊರ ಬಂದು ದೊಡ್ಡ ಸಿನಿಮಾ ಆಫರ್ ಪಡೆದ ಉಗ್ರಂ ಮಂಜು

ಬಿಗ್ ಬಾಸ್ ಕನ್ನಡದಿಂದ ಹೊರಬಂದ ಬಳಿಕ ಉಗ್ರಂ ಮಂಜು ಅವರಿಗೆ ಹಲವಾರು ಸಿನಿಮಾ ಆಫರ್‌ಗಳು ಬಂದಿವೆ. ಅವರು ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ಅವರ ಮೊದಲ ಸಿನಿಮಾ 'ಮ್ಯಾಂಗೋ ಪಚ್ಚ'ದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಪ್ರಾರಂಭವಾಗಿದೆ ಮತ್ತು ಉಗ್ರಂ ಮಂಜು ಅವರ ಪಾತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ.

ಬಿಗ್ ಬಾಸ್​ನಿಂದ ಹೊರ ಬಂದು ದೊಡ್ಡ ಸಿನಿಮಾ ಆಫರ್ ಪಡೆದ ಉಗ್ರಂ ಮಂಜು
ಉಗ್ರಂ ಮಂಜು
ರಾಜೇಶ್ ದುಗ್ಗುಮನೆ
|

Updated on: Feb 13, 2025 | 7:26 AM

Share

‘ಬಿಗ್ ಬಾಸ್’ ಶೋನಿಂದ ಹೊರ ಬಂದ ಬಳಿಕ ಒಂದಷ್ಟು ಜನರಿಗೆ ಸಿನಿಮಾ ಆಫರ್ ಸಿಗುತ್ತದೆ. ಅದರಲ್ಲೂ ಈಗಾಗಲೇ ಕಲಾವಿದರಾಗಿ ಗುರುತಿಸಿಕೊಂಡವರಿಗಂತೂ ಸಾಲು ಸಾಲು ಆಫರ್​ಗಳು ಹುಡುಕಿಕೊಂಡು ಬಂದ ಉದಾಹರಣೆ ಸಾಕಷ್ಟಿದೆ. ಈಗ ಈ ಸಾಲಿಗೆ ಉಗ್ರಂ ಮಂಜು ಸೇರ್ಪಡೆ ಆಗುತ್ತಿದ್ದಾರೆ. ಅವರಿಗೆ ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದಂತೆ ಆಫರ್​ಗಳು ಸಿಗೋಕೆ ಆರಂಭ ಆಗಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಉಗ್ರಂ ಮಂಜು ಈವರೆಗೆ 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಬಾರಿಯ ಬಿಗ್ ಬಾಸ್​ನಲ್ಲಿ ಅವರು ಟಾಪ್ ಐದರಲ್ಲಿ ಇದ್ದರು. ಬಿಗ್ ಬಾಸ್​ನಿಂದ ಅವರ ನಿಜವಾದ ವ್ಯಕ್ತಿತ್ವ ಏನು ಎಂಬುದು ಎಲ್ಲರಿಗೂ ತಿಳಿದಿದೆ. ಈ ಕಾರಣದಿಂದ ಅವರಿಗೆ ಆಫರ್​ಗಳು ಹುಡುಕಿ ಬರುತ್ತಿವೆ. ಅವರು ಸುದೀಪ್ ಅಳಿಯನ ‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಸುದೀಪ್ ಅಳಿಯ ಸಂಚಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರ ಮೊದಲ ಸಿನಿಮಾ ‘ಜಿಮ್ಮಿ’ ಕೆಲಸಗಳು ವಿಳಂಬ ಆಗಿದೆ. ಹೀಗಾಗಿ, ‘ಮ್ಯಾಂಗೋ ಪಚ್ಚ’ ಅವರ ಮೊದಲ ಸಿನಿಮಾ ಆಗಲಿದೆ. ಈ ಚಿತ್ರದ ಶೂಟಿಂಗ್ ಇತ್ತೀಚೆಗೆ ಆರಂಭ ಆಗಿದೆ. ಉಗ್ರಂ ಮಂಜು ಅವರು ಈ ಸಿನಿಮಾ ಸೆಟ್​ನಲ್ಲಿ ಸೇರಿಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಉಗ್ರಂ ಮಂಜು ಅವರು ವಿಲನ್ ಪಾತ್ರಗಳ ಮೂಲಕ ಗಮನ ಸೆಳೆದವರು. ‘ಮ್ಯಾಕ್ಸ್’ ಸಿನಿಮಾದಲ್ಲಿ ಅವರಿಗೆ ಪಾಸಿಟಿವ್ ರೋಲ್ ಸಿಕ್ಕಿತ್ತು. ಈ ಮೂಲಕ ಅವರು ಭೇಷ್ ಎನಿಸಿಕೊಂಡಿದ್ದರು. ಈಗ ಈ ಚಿತ್ರದಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎನ್ನುವ ಕುತೂಹಲ ಮೂಡಿದೆ.

ಉಗ್ರಂ ಮಂಜು ಅವರು ಬಿಗ್ ಬಾಸ್​ನಲ್ಲಿ ವಿನ್ ಆಗೋ ಸ್ಪರ್ಧಿ ಎನಿಸಿಕೊಂಡಿದ್ದರು. ಆದರೆ, ಅವರು ತಮ್ಮ ಆಟವನ್ನು ತಮ್ಮ ಕೈಯಾರೆ ಹಾಳು ಮಾಡಿಕೊಂಡರು. ಇದು ಅವರ ಆಟಕ್ಕೆ ಹಿನ್ನಡೆ ಉಂಟು ಮಾಡಿತು. ಹೀಗಾಗಿ, ಗೆಲ್ಲಲು ಅವರಿಗೆ ಸಾಧ್ಯವಾಗಿಲ್ಲ.

ಇದನ್ನೂ ಓದಿ: ಸುದೀಪ್ ಅಳಿಯನ ಚಿತ್ರಕ್ಕೆ ‘ಮ್ಯಾಂಗೋ ಪಚ್ಚ’ ಟೈಟಲ್; ರೆಟ್ರೋ ಲುಕ್​ನಲ್ಲಿ ಸಂಚಿತ್ ಎಂಟ್ರಿ

ಕನ್ನಡದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಿರುವ ‘ಕೆಆರ್​ಜಿ ಸ್ಟುಡಿಯೋಸ್’ ಹಾಗೂ ‘ಸುಪ್ರಿಯಾ ಪಿಕ್ಚರ್ಸ್ ಸ್ಟುಡಿಯೋ’ ಒಟ್ಟಾಗಿ ಸಂಚಿತ್ ಅವರ ಮೊದಲ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಸಿನಿಮಾದ ಕಥೆ ಮೈಸೂರಿನಲ್ಲಿ ಸಾಗಲಿದ್ದು, 90ರ ದಶಕದಲ್ಲಿ ಕಥೆ ಮೂಡಿ ಬಂದಿದೆ. ವಿವೇಕ್ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು