AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೊದಲ ಸಲ ಲವ್ ಮಾಡಿದ್ದೇನೆ’: ‘ಜಂಗಲ್ ಮಂಗಲ್’ ಬಗ್ಗೆ ಉಗ್ರಂ ಮಂಜು ಮಾತು

ರಕ್ಷಿತ್ ಕುಮಾರ್ ನಿರ್ದೇಶನ ಮಾಡಿರುವ ‘ಜಂಗಲ್ ಮಂಗಲ್’ ಸಿನಿಮಾದಲ್ಲಿ ಉಗ್ರಂ ಮಂಜು ಅವರು ನಟಿಸಿದ್ದಾರೆ. ಪಾತ್ರದ ಬಗ್ಗೆ ಅವರು ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಯಶ್ ಶೆಟ್ಟಿ ಅವರು ಹೀರೋ ಆಗಿದ್ದಾರೆ. ಜುಲೈ 4ಕ್ಕೆ ತೆರೆಕಾಣುತ್ತಿರುವ ಈ ಸಿನಿಮಾದ ಕಂಟೆಂಟ್ ಬಗ್ಗೆ ಉಗ್ರಂ ಮಂಜು ಅವರಿಗೆ ತುಂಬಾ ಭರವಸೆ ಇದೆ.

‘ಮೊದಲ ಸಲ ಲವ್ ಮಾಡಿದ್ದೇನೆ’: ‘ಜಂಗಲ್ ಮಂಗಲ್’ ಬಗ್ಗೆ ಉಗ್ರಂ ಮಂಜು ಮಾತು
Ugramm Manju, Harshitha Ramachandra, Yash Shetty
ಮದನ್​ ಕುಮಾರ್​
|

Updated on: Jul 03, 2025 | 6:02 PM

Share

ನಟ ಉಗ್ರಂ ಮಂಜು ಅವರು ‘ಬಿಗ್ ಬಾಸ್’ ಶೋ ಮುಗಿಸಿ ಬಂದ ಬಳಿಕ ಮತ್ತೆ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಜಂಗಲ್ ಮಂಗಲ್’ ಸಿನಿಮಾ (Jungle Mangal Kannada Movie) ಜುಲೈ 4ರಂದು ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಯಶ್ ಶೆಟ್ಟಿ (Yash Shetty) ನಾಯಕ. ಉಗ್ರಂ ಮಂಜು ಅವರಿಗೆ ಒಂದು ಪ್ರಮುಖ ಪಾತ್ರವಿದೆ. ಆ ಕುರಿತು ಅವರು ಮಾತಾಡಿದ್ದಾರೆ. ‘ಕೆಲವೊಮ್ಮೆ ನಿರ್ದೇಶಕರು ಒಂದಷ್ಟು ಕಲಾವಿದರನ್ನು ಆಯ್ಕೆಯಾಗಿ ಇಟ್ಟುಕೊಳ್ಳುತ್ತಾರೆ. ಇವರು ಇಲ್ಲ ಎಂದರೆ ಅವರು ಅಂತ 3-4 ಆಯ್ಕೆ ಇಟ್ಟುಕೊಳ್ಳುತ್ತಾರೆ. ಆದರೆ ಜಂಗಲ್ ಮಂಗಲ್ ನಿರ್ದೇಶಕ ರಕ್ಷಿತ್ ಕುಮಾರ್ ಅವರು ಈ ಪಾತ್ರವನ್ನು ನೀವೇ ಮಾಡಬೇಕು ಅಂತ ನನಗೆ ಹೇಳಿದರು. ಅದಕ್ಕಾಗಿ ಅವರಿಗೆ ಧನ್ಯವಾದಗಳು. ಟ್ರೇಲರ್​ನಲ್ಲಿ ನನ್ನ ಲುಕ್ ಇದೆ. ಸಿನಿಮಾದಲ್ಲಿ ನನ್ನ ಪಾತ್ರ ಇನ್ನೂ ಮಜವಾಗಿದೆ’ ಎಂದು ಉಗ್ರಂ ಮಂಜು (Ugramm Manju) ಅವರು ಹೇಳಿದ್ದಾರೆ. ಅಲ್ಲದೇ ಪಾತ್ರದ ಬಗ್ಗೆ ಅವರು ಇನ್ನಷ್ಟು ವಿವರ ನೀಡಿದ್ದಾರೆ.

‘ಮೊದಲ ಬಾರಿ ನಾಯಕಿಯನ್ನು ಲವ್ ಮಾಡಲು ನಿರ್ದೇಶಕರು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ನಾನು ಮಾತ್ರ ಲವ್ ಮಾಡುತ್ತಿರುತ್ತೇನೆ. ಅವಳು ಮಾಡಲ್ಲ. ಹಾಗಾಗಿ ಈ ಪಾತ್ರ ಮಜವಾಗಿದೆ. ಒಂದಷ್ಟು ಆ್ಯಕ್ಷನ್ ಸೀಕ್ವೆನ್ಸ್ ಕೂಡ ಇದೆ. ಲೊಕೇಷನ್​ಗಳು ವಿಶೇಷವಾಗಿದೆ. ರಿಸ್ಕ್ ತೆಗೆದುಕೊಂಡು ಚಿತ್ರೀಕರಣ ಮಾಡಿದ್ದಾರೆ. ನಿರ್ದೇಶನ ತಂಡವನ್ನು ಮೆಚ್ಚಿಕೊಳ್ಳಬೇಕು’ ಎಂದು ಉಗ್ರಂ ಮಂಜು ಹೇಳಿದ್ದಾರೆ.

‘ಜಂಗಲ್ ಮಂಗಲ್ ಸಿನಿಮಾದಲ್ಲಿ ನನಗೆ ಒಂದು ಪಾತ್ರ ಕೊಟ್ಟಿದ್ದಕ್ಕೆ ಇಡೀ ತಂಡಕ್ಕೆ ಧನ್ಯವಾದಗಳು. ಹಲವು ಭಾಷೆಗಳಲ್ಲಿ ಸಣ್ಣ ಬಜೆಟ್ ಸಿನಿಮಾಗಳು ಹಿಟ್ ಆಗುತ್ತವೆ. ಕಥೆಗೆ ಪ್ರಾಮುಖ್ಯತೆ ಕೊಟ್ಟಿರುತ್ತಾರೆ. ಆ ರೀತಿಯ ಸಿನಿಮಾಗಳಿಗೆ ಜಾಲೆಂಜ್ ಮಾಡುವಂತಹ ಕನ್ನಡದ ಸಿನಿಮಾ ಜಂಗಲ್ ಮಂಗಲ್. ಕನ್ನಡಿಗರು ಮಾತ್ರವಲ್ಲದೇ ಬೇರೆ ಯಾವುದೇ ಭಾಷೆಯವರು ಈ ಸಿನಿಮಾವನ್ನು ನೋಡಿದರೆ ಖಂಡಿತಾ ಮೆಚ್ಚಿಕೊಳ್ತಾರೆ’ ಎಂದು ಉಗ್ರಂ ಮಂಜು ಭರವಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

‘ಈ ಸಿನಿಮಾದ ನಿರ್ಮಾಣ ಪ್ರಕ್ರಿಯೆಯನ್ನು ನಾನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಈ ಪ್ರಾಜೆಕ್ಟ್ ಆದ ಬಳಿಕ ಸಾಕಷ್ಟು ಜನರು ತಾವು ಕೂಡ ಕನ್ನಡ ಸಿನಿಮಾ ಮಾಡಬಹುದು ಎಂಬ ನಂಬಿಕೆ ಪಡೆಯುತ್ತಾರೆ. ಯಾರೋ ಒಬ್ಬ ನಿರ್ಮಾಪಕರು ಮಾಡಿದ ಸಿನಿಮಾ ಅಲ್ಲ. 10-15 ಜನರು ಸೇರಿಕೊಂಡು, ತಾವೇ ಕೂಡಿಟ್ಟ ಹಣವನ್ನು ಹಾಕಿ ಈ ಸಿನಿಮಾ ಮಾಡಿದ್ದಾರೆ. ಈ ರೀತಿಯೂ ಸಿನಿಮಾ ಮಾಡಬಹುದು ಎಂಬುದನ್ನು ಈ ತಂಡ ಸಾಬೀತು ಮಾಡಿದೆ’ ಎಂದಿದ್ದಾರೆ ಮಂಜು.

ಇದನ್ನೂ ಓದಿ: ಕಾಡಿನಲ್ಲಿ ಸಿಕ್ಕಿಹಾಕಿಕೊಂಡ ಹುಡುಗ-ಹುಡುಗಿ ಕಥೆ; ‘ಜಂಗಲ್‌ ಮಂಗಲ್‌’ ಈ ವಾರ ರಿಲೀಸ್

‘ನನ್ನದು ಕಾಮಿಕ್ ವಿಲನ್ ಪಾತ್ರ. ಒಂದಷ್ಟು ಚೇಲಾಗಳನ್ನು ಹಾಕಿಕೊಂಡು ಊರಿನಲ್ಲಿ ಓಡಾಡುವ ವ್ಯಕ್ತಿಯ ಪಾತ್ರ. ಪ್ರತಿ ಕೆಲಸಗಳು ತನ್ನ ಮೂಲಕವೇ ಆಗಬೇಕು, ತಾನು ಹೇಳಿದ್ದೇ ನಡೆಯಬೇಕು ಎಂಬಂತಹ ವ್ಯಕ್ತಿ. ಇಡೀ ಸಿನಿಮಾದಲ್ಲಿ ನನ್ನ ಪಾತ್ರ ಬರುತ್ತದೆ’ ಎಂದು ಉಗ್ರಂ ಮಂಜು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್