AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UI Box Office Collection: ‘ಯುಐ’ ಸಿನಿಮಾದ ಸೋಮವಾರದ ಗಳಿಕೆ ಎಷ್ಟು? ‘ಮ್ಯಾಕ್ಸ್​’ ಬಂದ ಬಳಿಕ ಮುಂದೇನು?

ಉಪೇಂದ್ರ ನಟನೆಯ ‘ಯುಐ’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಕ್ರಿಸ್‌ಮಸ್ ರಜೆ ಚಿತ್ರಕ್ಕೆ ಅನುಕೂಲಕರವಾಗಿದೆ. ಆದರೆ, ಬುಧವಾರ ಬಿಡುಗಡೆಯಾಗುವ ‘ಮ್ಯಾಕ್ಸ್’ ಚಿತ್ರದಿಂದ ಯುಐ ಚಿತ್ರದ ಗಳಿಕೆಯ ಮೇಲೆ ಪರಿಣಾಮ ಬೀರಬಹುದು. ಉಪೇಂದ್ರ ಅವರು ‘ಯುಐ’ ಮೂಲಕ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ.

UI Box Office Collection: ‘ಯುಐ’ ಸಿನಿಮಾದ ಸೋಮವಾರದ ಗಳಿಕೆ ಎಷ್ಟು? ‘ಮ್ಯಾಕ್ಸ್​’ ಬಂದ ಬಳಿಕ ಮುಂದೇನು?
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on:Dec 24, 2024 | 9:40 AM

Share

ಉಪೇಂದ್ರ ನಟನೆಯ ‘ಯುಐ’ ಚಿತ್ರ ಸಾಕಷ್ಟು ನಿರೀಕ್ಚೆ ಮೂಡಿಸಿತ್ತು. ಈ ಚಿತ್ರ ಜನರಿಗೆ ಹೆಚ್ಚು ಇಷ್ಟ ಆಗಿದೆ. ಸಿನಿಮಾನ ನಾನಾ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ವೀಕೆಂಡ್​ನಲ್ಲಿ ಸಿನಿಮಾ ಉತ್ತಮ ಗಳಿಕೆ ಮಾಡಿತ್ತು. ಅದೇ ರೀತಿ ವಾರದ ದಿನವೂ ಚಿತ್ರಕ್ಕೆ ಒಳ್ಳೆಯ ಕಲೆಕ್ಷನ್ ಆಗಿದೆ. ಸದ್ಯದ ವರದಿಯ ಪ್ರಕಾರ ಸಿನಿಮಾ 20 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಸೋಮವಾರದ (ಡಿಸೆಂಬರ್ 23) ಗಳಿಕೆ ಕೊಂಚ ಇಳಿಕೆ ಕಂಡಿದೆ.

‘ಯುಐ’ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಈ ನಿರೀಕ್ಷೆಯನ್ನು ಸಿನಿಮಾ ಹುಸಿ ಮಾಡಲಿಲ್ಲ. ಚಿತ್ರ ಭರ್ಜರಿ ಗಳಿಕೆ ಮಾಡಿತು. ಸಿನಿಮಾ ನೋಡಿದ ಅನೇಕರು ಮತ್ತೆ ಮತ್ತೆ ಚಿತ್ರಮಂದಿರಕ್ಕೆ ತೆರಳುತ್ತಿದ್ದಾರೆ. ಈ ಕಾರಣದಿಂದಲೇ ಸಿನಿಮಾದ ಗಳಿಕೆ ಹೆಚ್ಚುತ್ತಿದೆ. ಮೊದಲ ಮೂರು ದಿನ ಉತ್ತಮ ಗಳಿಕೆ ಮಾಡಿದ್ದ ಈ ಸಿನಿಮಾ ನಾಲ್ಕನೇ ದಿನ ಸ್ವಲ್ಪ ಡಲ್ ಹೊಡೆದಿದೆ.

ಮೊದಲ ವೀಕೆಂಡ್​ನಲ್ಲಿ ಹೈಪ್ ಇರುವ ಚಿತ್ರಗಳು ಒಳ್ಳೆಯ ಗಳಿಕೆ ಮಾಡುತ್ತವೆ. ವಾರದ ಮೊದಲ ದಿನ ಸಿನಿಮಾ ಯಾವ ರೀತಿಯಲ್ಲಿ ಗಳಿಕೆ ಮಾಡುತ್ತವೆ ಅನ್ನೋದು ಮುಖ್ಯವಾಗುತ್ತದೆ. ಅದೇ ರೀತಿ ‘ಯುಐ’ ಸಿನಿಮಾ ಸೋಮವಾರ 2.50 ಕೋಟಿ ರೂಪಾಯಿಯಷ್ಟು ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 20.85 ಕೋಟಿ ರೂಪಾಯಿ ಆಗಿದೆ. ಭಾನುವಾರ ಸುಮಾರು 6 ಕೋಟಿ ರೂಪಾಯಿ ಗಳಿಕೆ ಆಗಿತ್ತು.

ಇದನ್ನೂ ಓದಿ: ‘ಯುಐ’ ಚಿತ್ರಕ್ಕೆ ಜಾಕ್​ಪಾಟ್ ಗಳಿಕೆ​; ಮೂರು ದಿನಕ್ಕೆ ದಾಖಲೆಯ ಕಲೆಕ್ಷನ್ ಮಾಡಿದ ಉಪ್ಪಿ ಸಿನಿಮಾ

ಸದ್ಯ ಎಲ್ಲ ಕಡೆಗಳಲ್ಲಿ ಕ್ರಿಸ್​ಮಸ್ ರಜೆ ನಡೆಯುತ್ತಿದೆ. ಇದು ‘ಯುಐ’ ಚಿತ್ರಕ್ಕೆ ಸಹಕಾರಿ ಆಗಿದೆ. ಅದೇ ರೀತಿ, ಬುಧವಾರ (ಡಿಸೆಂಬರ್ 25) ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗುತ್ತಿದೆ.  ಈ ಚಿತ್ರದ ಬಗ್ಗೆ ಪ್ರೇಕ್ಷಕರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ರಿಲೀಸ್ ಆದ ಬಳಿಕ ‘ಯುಐ’ ಕಲೆಕ್ಷನ್​ಗೆ ಕೊಂಚ ಹೊಡೆತ ಬೀಳುವ ಸಾಧ್ಯತೆ ಇದೆ. ಏಕೆಂದರೆ ಕರ್ನಾಟಕದಲ್ಲಿ ಒಂದಷ್ಟು ಶೋಗಳು ‘ಮ್ಯಾಕ್ಸ್’ ಪಾಲಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:03 am, Tue, 24 December 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು