AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ತೆರೆಗೆ ಉಪ್ಪಿ ನಿರ್ದೇಶನದ ‘ಯುಐ’; ಸ್ಪರ್ಧೆಗೆ ಇಳಿದ ಇತರ ಸಿನಿಮಾಗಳ್ಯಾವವು?

ಕ್ರಿಸ್​ಮಸ್ ಹಾಗೂ ಹೊಸ ವರ್ಷದ ಸಂದರ್ಭದಲ್ಲಿ ಬಿಡುಗಡೆಯಾಗುತ್ತಿರುವ ಕನ್ನಡ ಸಿನಿಮಾಗಳ ಪೈಕಿ ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರ ಪ್ರಮುಖವಾಗಿದೆ. 2040ರಲ್ಲಿ ನಡೆಯುವ ಈ ಚಿತ್ರ, ನಿರುದ್ಯೋಗ ಮತ್ತು ಜಾಗತಿಕ ತಾಪಮಾನ ಏರಿಕೆಯಂತಹ ವಿಷಯಗಳನ್ನು ಪ್ರಸ್ತಾಪಿಸುತ್ತದೆ. "ವಿಡುದಲೈ 2" ಮತ್ತು "ಮುಫಾಸಾ: ದಿ ಲಯನ್ ಕಿಂಗ್" ಚಿತ್ರಗಳೂ ಕೂಡ ಈ ಹಬ್ಬದ ಸಮಯದಲ್ಲಿ ಬಿಡುಗಡೆಯಾಗುತ್ತಿವೆ.

ಈ ವಾರ ತೆರೆಗೆ ಉಪ್ಪಿ ನಿರ್ದೇಶನದ ‘ಯುಐ’; ಸ್ಪರ್ಧೆಗೆ ಇಳಿದ ಇತರ ಸಿನಿಮಾಗಳ್ಯಾವವು?
ಈ ವಾರ ರಿಲೀಸ್ ಆಗಲಿರುವ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Dec 19, 2024 | 2:09 PM

Share

ಕ್ರಿಸ್​​ಮಸ್ ಹಾಗೂ ಹೊಸ ವರ್ಷಗಳ ಆಚರಣೆಗೆ ದಿನಗಣನೆ ಶುರುವಾಗಿದೆ. ಈ ಸಂದರ್ಭದಲ್ಲಿ ಅನೇಕ ಕಂಪನಿಗಳಿಗೆ ಸಾಲು ಸಾಲು ರಜೆ ಇರುತ್ತದೆ. ಎಲ್ಲರೂ ಜಾಲಿ ಮೂಡ್​ನಲ್ಲಿ ಇರುತ್ತಾರೆ. ಹೀಗಾಗಿ ಈ ಸಂದರ್ಭಗಳಲ್ಲಿ ಸಿನಿಮಾಗಳನ್ನು ರಿಲೀಸ್ ಮಾಡಲು ನಿರ್ಮಾಪಕರು ಪ್ಲ್ಯಾನ್ ಮಾಡಿಕೊಳ್ಳುತ್ತಾರೆ. ಈ ಬಾರಿ ಕ್ರಿಸ್​ಮಸ್​ ಸಂದರ್ಭದಲ್ಲಿ ಕನ್ನಡದಲ್ಲಿ ಹಲವು ಸೂಪರ್ ಹಿಟ್​ ಚಿತ್ರಗಳು ಬಿಡುಗಡೆ ಆಗುತ್ತಿವೆ. ಈ ಸಾಲಿನಲ್ಲಿ ‘ಯುಐ’ ಚಿತ್ರ ಕೂಡ ಇದೆ.

ಯುಐ

ಉಪೇಂದ್ರ ನಿರ್ದೇಶನದ ಸಿನಿಮಾಗಳು ಸಖತ್ ಭಿನ್ನವಾಗಿರುತ್ತವೆ. ಈ ಸಾಲಿಗೆ ‘ಯುಐ’ ಕೂಡ ಸೇರ್ಪಡೆ ಆಗುವ ಸೂಚನೆ ಸಿಕ್ಕಿದೆ. ಟ್ರೇಲರ್ ಮೂಲಕ ಈ ಚಿತ್ರ ಗಮನ ಸೆಳೆದಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಉಪೇಂದ್ರ ಅವರು ನಟಿಸುವುದರ ಜೊತೆಗೆ ಪ್ರಮುಖ ಪಾತ್ರವನ್ನೂ ಮಾಡಿದ್ದಾರೆ. ರೀಷ್ಮಾ ನಾಣಯ್ಯ, ಮುರುಳಿ ಶರ್ಮಾ, ಅಚ್ಯುತ್ ಕುಮಾರ್, ರವಿ ಶಂಕರ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಕೆಪಿ ಶ್ರೀಕಾಂತ್ ಹಾಗೂ ಜಿ. ಮನೋಹರನ್ ಬಂಡವಾಳ ಹೂಡಿದ್ದಾರೆ. ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾ ಕನ್ನಡದ ಜೊತೆಗೆ ಹಿಂದಿ, ತೆಲುಗು ಮೊದಲಾದ ಭಾಷೆಗಳಲ್ಲೂ ಬಿಡುಗಡೆ ಕಾಣುತ್ತಿದೆ.

‘ಯುಐ’ ಚಿತ್ರದ ಕಥೆ 2040ರಲ್ಲಿ ಸಾಗಲಿದೆ. ನಿರುದ್ಯೋಗ, ಗ್ಲೋಬಲ್ ವಾರ್ಮಿಂಗ್ ಮೊದಲಾದ ವಿಚಾರಗಳನ್ನು ಸಿನಿಮಾದಲ್ಲಿ ಹೇಳುವ ಪ್ರಯತ್ನವನ್ನು ಉಪೇಂದ್ರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಮೂಲಕ ತಲೆಗೆ ಹುಳಬಿಡುವ ಕೆಲಸ ಆಗುವ ನಿರೀಕ್ಷೆ ಇದೆ. ಈ ಚಿತ್ರ ಸೈನ್ಸ್ ಫಿಕ್ಷನ್ ಕಥೆ ಹೊಂದಿದೆ. ಈ ವಾರ ರಿಲೀಸ್ ಆಗುತ್ತಿರುವ ಪ್ರಮುಖ ಚಿತ್ರಗಳಲ್ಲಿ ‘ಯುಐ’ ಮುಂಚೂಣಿಯಲ್ಲಿ ಇದೆ.

‘ವಿಡುದಲೈ 2’

‘ವಿಡುದಲೈ’ ಯಶಸ್ಸು ಕಂಡ ಬಳಿಕ ‘ವಿಡುದಲೈ 2’ ಸಿನಿಮಾನ ತೆರೆಗೆ ತರುವ ಕೆಲಸ ಆಗಿದೆ. ವೆಟ್ರಿಮಾರನ್ ನಿರ್ದೇಶನದ  ಈ ಚಿತ್ರದಲ್ಲಿ ಸೂರಿ, ವಿಜಯ್ ಸೇತುಪತಿ, ಇಳವರಸು ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: ಚಿರಂಜೀವಿಗೆ ನಿರ್ದೇಶನ ಮಾಡಬೇಕಿತ್ತು ಉಪೇಂದ್ರ; ಆ ಸಿನಿಮಾ ಸೆಟ್ಟೇರಲಿಲ್ಲ ಏಕೆ?

ಮುಫಾಸ: ದಿ ಲಯನ್ ಕಿಂಗ್

ಹಾಲಿವುಡ್​ನ ‘ಮುಫಾಸ: ದಿ ಲೈನ್ ಕಿಂಗ್’ ಚಿತ್ರ ಕೂಡ ತೆರೆಗೆ ಬರುತ್ತಿದೆ. ಇದು ಅನಿಮೇಷನ್ ಸಿನಿಮಾ. ಆದಾಗ್ಯೂ ಭಾರತದಲ್ಲಿ ಈ ಚಿತ್ರ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು