AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UI Twitter Review: ಜನರಿಗೆ ಯುಐ ಸಿನಿಮಾ ಇಷ್ಟ ಆಯ್ತಾ? ಅದಕ್ಕೂ ಮೊದಲು ಅರ್ಥ ಆಯ್ತಾ?

ಉಪೇಂದ್ರ ನಿರ್ದೇಶನ ಮಾಡುವ ಸಿನಿಮಾಗಳು ಅಷ್ಟು ಸುಲಭಕ್ಕೆ ಅರ್ಥ ಆಗುವುದಿಲ್ಲ. ‘ಯುಐ’ ಸಿನಿಮಾ ನೋಡಿದ ಪ್ರೇಕ್ಷಕರು ಕೂಡ ಅದನ್ನೇ ಹೇಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿರುವ ಈ ಸಿನಿಮಾ ನೋಡಿದ ಜನರು ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರದ ಟ್ವಿಟರ್ ವಿಮರ್ಶೆ ಹೀಗಿದೆ..

UI Twitter Review: ಜನರಿಗೆ ಯುಐ ಸಿನಿಮಾ ಇಷ್ಟ ಆಯ್ತಾ? ಅದಕ್ಕೂ ಮೊದಲು ಅರ್ಥ ಆಯ್ತಾ?
Upendra
Follow us
ಮದನ್​ ಕುಮಾರ್​
|

Updated on: Dec 20, 2024 | 1:11 PM

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಯುಐ’ ಇಂದು (ಡಿಸೆಂಬರ್​ 20) ರಿಲೀಸ್ ಆಗಿದೆ. ಉಪೇಂದ್ರ ಅವರ ನಿರ್ದೇಶನ ಎಂಬ ಒಂದೇ ಕಾರಣದಿಂದ ಚಿತ್ರಕ್ಕೆ ಹೆಚ್ಚು ಹೈಪ್ ಸಿಕ್ಕಿದೆ. ಮುಂಜಾನೆಯೇ ಅನೇಕ ಶೋಗಳು ಹೌಸ್​ಫುಲ್ ಆಗಿವೆ. ಆ ಮೂಲಕ ‘ಯುಐ’ ಸಿನಿಮಾಗೆ ಒಳ್ಳೆಯ ಓಪನಿಂಗ್ ಸಿಕ್ಕಿದೆ. ಎಂದಿನಂತೆ ತಮ್ಮ ಬುದ್ಧಿವಂತಿಕೆ ಮೂಲಕ ಉಪೇಂದ್ರ ಅವರು ಪ್ರೇಕ್ಷಕರ ಮೆದುಳಿಗೆ ಕೈ ಹಾಕಿದ್ದಾರೆ. ಸಿನಿಮಾ ನೋಡಿ ಚಿತ್ರಮಂದಿರದಿಂದ ಹೊರಗೆ ಬಂದಿರುವ ಪ್ರೇಕ್ಷಕರು ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ಕೆಲವರಿಗೆ ಸಿನಿಮಾ ಇಷ್ಟ ಆಗಿದೆ. ಇನ್ನೂ ಕೆಲವರಿಗೆ ಪೂರ್ತಿಯಾಗಿ ಅರ್ಥ ಆಗಿಲ್ಲ. ಇನ್ನೊಮ್ಮೆ ನೋಡಬೇಕು ಎನ್ನುವ ಪ್ರೇಕ್ಷಕರು ಕೂಡ ಇದ್ದಾರೆ.

ಆರಂಭದಲ್ಲೇ ಉಪೇಂದ್ರ ಶಾಕ್ ನೀಡಿದ್ದಾರೆ. ‘ನೀವು ಬುದ್ಧಿವಂತರಾಗಿದ್ರೆ ಈಗಲೇ ಚಿತ್ರಮಂದಿರದಿಂದ ಎದ್ದೋಗಿ’ ಎಂದು ಹೇಳುವ ಮೂಲಕ ಜನರನ್ನು ಕನ್​ಫ್ಯೂಸ್ ಮಾಡಿಸುತ್ತಾರೆ. ಟಿಕೆಟ್​ಗೆ ದುಡ್ಡು ಕೊಟ್ಟು ಬಂದ ಪ್ರೇಕ್ಷಕರನ್ನು ಎದ್ದು ಹೋಗಿ ಅಂತ ಹೇಳಿದ್ದಕ್ಕೆ ಪ್ರೇಕ್ಷಕರಿಗೆ ಶಾಕ್ ಆಗಿದೆ. ಈ ವಿಷಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಉಪೇಂದ್ರ ಅವರ ಅಪ್ಪಟ ಅಭಿಮಾನಿಗಳು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಮೊದಲ ಬಾರಿಗೆ ಅರ್ಥ ಆಗದೇ ಇದ್ದರೂ ಪರವಾಗಿಲ್ಲ. ಎರಡನೇ ಸಲ ಸಿನಿಮಾ ನೋಡುವುದಾಗಿ ಅನೇಕರು ಹೇಳಿದ್ದಾರೆ.

‘ವಿಮರ್ಶೆ ಹೇಳೋಕೆ ಆಗ್ದೇ ಇರುವಂತಹ ಮೂವೀ ಅಂದ್ರೆ ವಿಮರ್ಶೆಗಿಂತ ರಿಯಾಲಿಟಿ ಮುಖ್ಯ. ಅದನ್ನು ಅರ್ಥ ಮಾಡಿಕೊಳ್ಳಬೇಕು. ಒಂದು ಸಲಿ ಮೂವೀ ನೋಡಿ ನಿಮಗೆ ಗೊತ್ತಾಗುತ್ತೆ. ಈ ಮೂವೀ ಸೋಲೋಕೆ ಸಾಧ್ಯನೇ ಇಲ್ಲ. ಸೋಲ್ತು ಅಂದ್ರೆ ಸೋತಿದ್ದು ಮೂವೀ ಅಲ್ಲ, ನಾವು’ ಎಂದು ಅಭಿಮಾನಿಯೊಬ್ಬರು ಪೋಸ್ಟ್ ಮಾಡಿದ್ದಾರೆ.

ಈ ಸಿನಿಮಾದಲ್ಲಿ ರೀಷ್ಮಾ ನಾಣಯ್ಯ, ರವಿಶಂಕರ್​, ಅಚ್ಯುತ್ ಕುಮಾರ್​, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ. ಅಜನೀಶ್ ಬಿ. ಲೋಕನಾಥ್ ಸಂಗೀತ ನೀಡಿದ್ದಾರೆ. ಕನ್ನಡದ ಜತೆಗೆ ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಯಲ್ಲೂ ಸಿನಿಮಾ ಬಿಡುಗಡೆ ಆಗಿದೆ.

ಯುಐ ಸಿನಿಮಾ ಪೂರ್ತಿಯಾಗಿ ಅರ್ಥ ಆಗದೇ ಇದ್ದರೂ ಪರವಾಗಿಲ್ಲ, ಕೊನೇ ಪಕ್ಷ ಡಿಫರೆಂಟ್ ಆಗಿದೆ ಎಂದು ಕೂಡ ಕೆಲವು ಪ್ರೇಕ್ಷಕರು ಖುಷಿಪಟ್ಟಿದ್ದಾರೆ. ಇಡೀ ಸಿನಿಮಾ ಉಪೇಂದ್ರ ಅವರ ಒನ್​ ಮ್ಯಾನ್ ಶೋ ರೀತಿ ಇದೆ. ದ್ವಿಪಾತ್ರದಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ತೋರಿಸಿರುವ ಎಷ್ಟೋ ವಿಚಾರಗಳು ಜನರಿಗೆ ಅನೇಕ ವರ್ಷಗಳ ಬಳಿಕ ಅರ್ಥ ಆಗಬಹುದು ಎಂದು ಕೂಡ ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ