AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UI Twitter Review: ಜನರಿಗೆ ಯುಐ ಸಿನಿಮಾ ಇಷ್ಟ ಆಯ್ತಾ? ಅದಕ್ಕೂ ಮೊದಲು ಅರ್ಥ ಆಯ್ತಾ?

ಉಪೇಂದ್ರ ನಿರ್ದೇಶನ ಮಾಡುವ ಸಿನಿಮಾಗಳು ಅಷ್ಟು ಸುಲಭಕ್ಕೆ ಅರ್ಥ ಆಗುವುದಿಲ್ಲ. ‘ಯುಐ’ ಸಿನಿಮಾ ನೋಡಿದ ಪ್ರೇಕ್ಷಕರು ಕೂಡ ಅದನ್ನೇ ಹೇಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿರುವ ಈ ಸಿನಿಮಾ ನೋಡಿದ ಜನರು ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರದ ಟ್ವಿಟರ್ ವಿಮರ್ಶೆ ಹೀಗಿದೆ..

UI Twitter Review: ಜನರಿಗೆ ಯುಐ ಸಿನಿಮಾ ಇಷ್ಟ ಆಯ್ತಾ? ಅದಕ್ಕೂ ಮೊದಲು ಅರ್ಥ ಆಯ್ತಾ?
Upendra
ಮದನ್​ ಕುಮಾರ್​
|

Updated on: Dec 20, 2024 | 1:11 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಯುಐ’ ಇಂದು (ಡಿಸೆಂಬರ್​ 20) ರಿಲೀಸ್ ಆಗಿದೆ. ಉಪೇಂದ್ರ ಅವರ ನಿರ್ದೇಶನ ಎಂಬ ಒಂದೇ ಕಾರಣದಿಂದ ಚಿತ್ರಕ್ಕೆ ಹೆಚ್ಚು ಹೈಪ್ ಸಿಕ್ಕಿದೆ. ಮುಂಜಾನೆಯೇ ಅನೇಕ ಶೋಗಳು ಹೌಸ್​ಫುಲ್ ಆಗಿವೆ. ಆ ಮೂಲಕ ‘ಯುಐ’ ಸಿನಿಮಾಗೆ ಒಳ್ಳೆಯ ಓಪನಿಂಗ್ ಸಿಕ್ಕಿದೆ. ಎಂದಿನಂತೆ ತಮ್ಮ ಬುದ್ಧಿವಂತಿಕೆ ಮೂಲಕ ಉಪೇಂದ್ರ ಅವರು ಪ್ರೇಕ್ಷಕರ ಮೆದುಳಿಗೆ ಕೈ ಹಾಕಿದ್ದಾರೆ. ಸಿನಿಮಾ ನೋಡಿ ಚಿತ್ರಮಂದಿರದಿಂದ ಹೊರಗೆ ಬಂದಿರುವ ಪ್ರೇಕ್ಷಕರು ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ಕೆಲವರಿಗೆ ಸಿನಿಮಾ ಇಷ್ಟ ಆಗಿದೆ. ಇನ್ನೂ ಕೆಲವರಿಗೆ ಪೂರ್ತಿಯಾಗಿ ಅರ್ಥ ಆಗಿಲ್ಲ. ಇನ್ನೊಮ್ಮೆ ನೋಡಬೇಕು ಎನ್ನುವ ಪ್ರೇಕ್ಷಕರು ಕೂಡ ಇದ್ದಾರೆ.

ಆರಂಭದಲ್ಲೇ ಉಪೇಂದ್ರ ಶಾಕ್ ನೀಡಿದ್ದಾರೆ. ‘ನೀವು ಬುದ್ಧಿವಂತರಾಗಿದ್ರೆ ಈಗಲೇ ಚಿತ್ರಮಂದಿರದಿಂದ ಎದ್ದೋಗಿ’ ಎಂದು ಹೇಳುವ ಮೂಲಕ ಜನರನ್ನು ಕನ್​ಫ್ಯೂಸ್ ಮಾಡಿಸುತ್ತಾರೆ. ಟಿಕೆಟ್​ಗೆ ದುಡ್ಡು ಕೊಟ್ಟು ಬಂದ ಪ್ರೇಕ್ಷಕರನ್ನು ಎದ್ದು ಹೋಗಿ ಅಂತ ಹೇಳಿದ್ದಕ್ಕೆ ಪ್ರೇಕ್ಷಕರಿಗೆ ಶಾಕ್ ಆಗಿದೆ. ಈ ವಿಷಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಉಪೇಂದ್ರ ಅವರ ಅಪ್ಪಟ ಅಭಿಮಾನಿಗಳು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಮೊದಲ ಬಾರಿಗೆ ಅರ್ಥ ಆಗದೇ ಇದ್ದರೂ ಪರವಾಗಿಲ್ಲ. ಎರಡನೇ ಸಲ ಸಿನಿಮಾ ನೋಡುವುದಾಗಿ ಅನೇಕರು ಹೇಳಿದ್ದಾರೆ.

‘ವಿಮರ್ಶೆ ಹೇಳೋಕೆ ಆಗ್ದೇ ಇರುವಂತಹ ಮೂವೀ ಅಂದ್ರೆ ವಿಮರ್ಶೆಗಿಂತ ರಿಯಾಲಿಟಿ ಮುಖ್ಯ. ಅದನ್ನು ಅರ್ಥ ಮಾಡಿಕೊಳ್ಳಬೇಕು. ಒಂದು ಸಲಿ ಮೂವೀ ನೋಡಿ ನಿಮಗೆ ಗೊತ್ತಾಗುತ್ತೆ. ಈ ಮೂವೀ ಸೋಲೋಕೆ ಸಾಧ್ಯನೇ ಇಲ್ಲ. ಸೋಲ್ತು ಅಂದ್ರೆ ಸೋತಿದ್ದು ಮೂವೀ ಅಲ್ಲ, ನಾವು’ ಎಂದು ಅಭಿಮಾನಿಯೊಬ್ಬರು ಪೋಸ್ಟ್ ಮಾಡಿದ್ದಾರೆ.

ಈ ಸಿನಿಮಾದಲ್ಲಿ ರೀಷ್ಮಾ ನಾಣಯ್ಯ, ರವಿಶಂಕರ್​, ಅಚ್ಯುತ್ ಕುಮಾರ್​, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ. ಅಜನೀಶ್ ಬಿ. ಲೋಕನಾಥ್ ಸಂಗೀತ ನೀಡಿದ್ದಾರೆ. ಕನ್ನಡದ ಜತೆಗೆ ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಯಲ್ಲೂ ಸಿನಿಮಾ ಬಿಡುಗಡೆ ಆಗಿದೆ.

ಯುಐ ಸಿನಿಮಾ ಪೂರ್ತಿಯಾಗಿ ಅರ್ಥ ಆಗದೇ ಇದ್ದರೂ ಪರವಾಗಿಲ್ಲ, ಕೊನೇ ಪಕ್ಷ ಡಿಫರೆಂಟ್ ಆಗಿದೆ ಎಂದು ಕೂಡ ಕೆಲವು ಪ್ರೇಕ್ಷಕರು ಖುಷಿಪಟ್ಟಿದ್ದಾರೆ. ಇಡೀ ಸಿನಿಮಾ ಉಪೇಂದ್ರ ಅವರ ಒನ್​ ಮ್ಯಾನ್ ಶೋ ರೀತಿ ಇದೆ. ದ್ವಿಪಾತ್ರದಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ತೋರಿಸಿರುವ ಎಷ್ಟೋ ವಿಚಾರಗಳು ಜನರಿಗೆ ಅನೇಕ ವರ್ಷಗಳ ಬಳಿಕ ಅರ್ಥ ಆಗಬಹುದು ಎಂದು ಕೂಡ ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ