AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಲ್ಟಾ ಪಲ್ಟಾ’ ಖ್ಯಾತಿಯ ನಿರ್ದೇಶಕ ಎನ್​ಎಸ್​ ಶಂಕರ್ ನಿಧನ: ಚಿತ್ರರಂಗದ ಕಂಬನಿ

ಚಿತ್ರರಂಗ, ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಎನ್​.ಎಸ್. ಶಂಕರ್ ಅವರು ಬೆಂಗಳೂರಿನಲ್ಲಿ ಮೃತರಾಗಿದ್ದಾರೆ. 1997ರ ‘ಉಲ್ಟಾ ಪಲ್ಟಾ’ ಸಿನಿಮಾ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ನಿರ್ದೇಶಕ ಎನ್​.ಎಸ್. ಶಂಕರ್ ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಹಲವರು ಸಂತಾಪ ಸೂಚಿಸಿದ್ದಾರೆ.

‘ಉಲ್ಟಾ ಪಲ್ಟಾ’ ಖ್ಯಾತಿಯ ನಿರ್ದೇಶಕ ಎನ್​ಎಸ್​ ಶಂಕರ್ ನಿಧನ: ಚಿತ್ರರಂಗದ ಕಂಬನಿ
Ns Shankar
ಮದನ್​ ಕುಮಾರ್​
|

Updated on:Jun 28, 2026 | 10:52 AM

Share

ಮುಖ್ಯಾಂಶಗಳು

  • ಹೃದಯಾಘಾತದಿಂದ ಹಿರಿಯ ನಿರ್ದೇಶಕ ಎನ್​ಎಸ್ ಶಂಕರ್ ವಿಧಿವಶ.
  • ಮಲಗಿದ್ದಾಗಲೇ ಕೊನೆಯುಸಿರು ಎಳೆದ ‘ಉಲ್ಟಾ ಪಲ್ಟಾ’ ಡೈರೆಕ್ಟರ್.
  • ಲೇಖಕನಾಗಿ, ಪತ್ರಕರ್ತನಾಗಿಯೂ ಗುರುತಿಸಿಕೊಂಡಿದ್ದ ಎನ್​ಎಸ್ ಶಂಕರ್.

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎನ್​ಎಸ್ ಶಂಕರ್ (NS Shankar) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ (Heart Attack) ಅವರು ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಪತ್ರಕರ್ತರೂ ಆಗಿದ್ದ ಶಂಕರ್ ಅವರು ಕನ್ನಡದ ಹೆಸರಾಂತ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು. ‘ಉಲ್ಟಾ ಪಲ್ಟಾ’ (Ulta Palta) ರೀತಿಯ ಸೂಪರ್ ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಖ್ಯಾತಿ ಅವರಿಗಿತ್ತು. ಎನ್​ಎಸ್ ಶಂಕರ್ ಅವರ ನಿಧನದ ಸುದ್ದಿ ತಿಳಿದು ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.

ಕಳೆದ ಕೆಲವು ದಿನಗಳಿಂದ ಎನ್​ಎಸ್ ಶಂಕರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಈಗ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮಲಗಿದ್ದಾಗಲೇ ಅವರು ಕೊನೆಯುಸಿರು ಎಳೆದರು ಎನ್ನಲಾಗಿದೆ. ಉತ್ತಮ ಬರಹಗಾರರಾಗಿದ್ದ ಅವರು ಅನೇಕ ಪುಸ್ತಕಗಳನ್ನು ಬರೆದಿದ್ದರು. ಆ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೂ ಕೊಡುಗೆ ನೀಡಿದ್ದರು.

‘ಪ್ರಜಾವಾಣಿ’, ‘ಮುಂಗಾರು’, ‘ಲಂಕೇಶ್ ಪತ್ರಿಕೆ’ ಸೇರಿದಂತೆ ಹಲವು ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದ ಎನ್.ಎಸ್. ಶಂಕರ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ‘ಶಂಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ’ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಕೆ. ಭಾಗ್ಯರಾಜ್ ನಿಧನ; ಡಾ. ರಾಜ್ ರೀತಿ ನೇತ್ರದಾನ

ಎನ್​ಎಸ್ ಶಂಕರ್ ಅವರು ಜನಿಸಿದ್ದು ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ. ಆದರೆ ಅವರು ಬಾಲ್ಯವನ್ನು ಕಳೆದಿದ್ದು ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ. ಹೈಸ್ಕೂಲ್ ಓದಿದ್ದು ಮೈಸೂರಿನಲ್ಲಿ. ಕಾಲೇಜು ಶಿಕ್ಷಣವನ್ನು ಅವರು ಬೆಂಗಳೂರಿನಲ್ಲಿ ಪಡೆದರು. ಮೊದಲು ಪತ್ರಕರ್ತನಾಗಿದ್ದ ಅವರು ನಂತರ ಚಿತ್ರರಂಗಕ್ಕೆ ಬಂದು ಅಲ್ಲಿಯೂ ಯಶಸ್ಸು ಕಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:35 am, Sun, 28 June 26

Follow Us
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌