AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡಿಎ ಸೈಟ್ ಒತ್ತುವರಿ ಆರೋಪ; ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡಗೆ ನೋಟಿಸ್​

ಬೆಂಗಳೂರಿನ ಎಚ್​​ಎಸ್​​ಆರ್ ಲೇ ಔಟ್​ನ 3ನೇ ಸೆಕ್ಟರ್​​ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಶ್ರೀನಿವಾಸ್​​ಗೌಡ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಬಿಡಿಎ ಸೈಟ್ ಒತ್ತುವರಿ ಆರೋಪ; ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡಗೆ ನೋಟಿಸ್​
ಉಮಾಪತಿ ಶ್ರೀನಿವಾಸ್​ಗೌಡ
ರಾಜೇಶ್ ದುಗ್ಗುಮನೆ
|

Updated on:Feb 09, 2023 | 10:09 AM

Share

ಕನ್ನಡದ ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ಗೌಡ (Umapathy SrinivasGowda) ಅವರು ಈಗ ಸುದ್ದಿಯಲ್ಲಿದ್ದಾರೆ. ಹಾಗಂತ ಇದು ಸಿನಿಮಾ ವಿಚಾರಕ್ಕಲ್ಲ. ಬದಲಿಗೆ ವೈಯಕ್ತಿಕ ವಿಚಾರಕ್ಕೆ. ಅವರ ವಿರುದ್ಧ ಬಿಡಿಎ ಸೈಟ್ ಒತ್ತುವರಿ ಆರೋಪ ಕೇಳಿ ಬಂದಿದೆ. ಹೀಗಾಗಿ, ಬಿಡಿಎ ಕಡೆಯಿಂದ ಉಮಾಪತಿ ಶ್ರೀನಿವಾಸ ಗೌಡಗೆ ನೋಟಿಸ್ ಜಾರಿ ಮಾಡಲಾಗಿದೆ. 8 ದಿನಗಳ ಒಳಗೆ ಈ ನೋಟಿಸ್​ಗೆ ಉತ್ತರಿಸುವಂತೆ ಸೂಚಿಸಲಾಗಿದೆ.

ಬೆಂಗಳೂರಿನ ಎಚ್​​ಎಸ್​​ಆರ್ ಲೇ ಔಟ್​ನ 3ನೇ ಸೆಕ್ಟರ್​​ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಶ್ರೀನಿವಾಸ್​​ಗೌಡ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಜಾಗ 1,545 ಚದರ ಮೀಟರ್ ವಿಸ್ತೀರ್ಣ ಇದೆ. ‘ಈ ಒತ್ತುವರಿಯನ್ನು ಏಕೆ ತೆರವು ಮಾಡಬಾರದು’ ಎಂದು ನೋಟೀಸ್ ನೀಡಲಾಗಿದೆ.

‘ಬಿಡಿಎ ನಿವೇಶನಗಳನ್ನು ಉಮಾಪತಿ ಒತ್ತುವರಿ ಮಾಡಿದ್ದು, ಇದನ್ನು ತೆರವು ಮಾಡಲು  ಅನುಮತಿ ಕೊಡಬೇಕು’ ಎಂದು ಬಿಡಿಎ ಆಯುಕ್ತರಿಗೆ ಇಂಜಿನಿಯರ್ ಕಡತ ರವಾನಿಸಿದ್ದರು. ಒತ್ತುವರಿ ತೆರವು ಮಾಡುವ ಮುನ್ನ ಉಮಾಪತಿಗೆ ನೋಟೀಸ್ ನೀಡಲಾಗಿದೆ. ‘ಬಿಡಿಎ ನಿವೇಶನಗಳು ನಿಮಗೆ ಸಂಬಂಧಿಸಿದ್ದು ಎಂಬುದಕ್ಕೆ ದಾಖಲೆ ನೀಡುವಂತೆ ಉಮಾಪತಿಗೆ ಸೂಚಿಸಲಾಗಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆ ಮಾಡದೆ ಹೋದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ.

ಇದನ್ನೂ ಓದಿ: ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹತ್ಯೆಗೆ ಸಂಚು ಪ್ರಕರಣ; ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಕನ್ನಡ ಚಿತ್ರರಂಗದಲ್ಲಿ ಸಿನಿಮಾಗಳನ್ನು ನಿರ್ಮಿಸಿ ಉಮಾಪತಿ ಶ್ರೀನಿವಾಸ್ ಫೇಮಸ್ ಆಗಿದ್ದಾರೆ. ಅವರು ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕಳೆದ ವರ್ಷ ರಿಲೀಸ್ ಆದ ‘ಮದಗಜ’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ‘ಅಯೋಗ್ಯ’ ಖ್ಯಾತಿಯ ಮಹೇಶ್ ಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾದಲ್ಲಿ ಶ್ರೀಮುರಳಿ ಹಾಗೂ ಆಶಿಕಾ ರಂಗನಾಥ್ ಒಟ್ಟಾಗಿ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:35 am, Thu, 9 February 23

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?