AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡಿಎ ಸೈಟ್ ಒತ್ತುವರಿ ಆರೋಪ; ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡಗೆ ನೋಟಿಸ್​

ಬೆಂಗಳೂರಿನ ಎಚ್​​ಎಸ್​​ಆರ್ ಲೇ ಔಟ್​ನ 3ನೇ ಸೆಕ್ಟರ್​​ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಶ್ರೀನಿವಾಸ್​​ಗೌಡ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಬಿಡಿಎ ಸೈಟ್ ಒತ್ತುವರಿ ಆರೋಪ; ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡಗೆ ನೋಟಿಸ್​
ಉಮಾಪತಿ ಶ್ರೀನಿವಾಸ್​ಗೌಡ
ರಾಜೇಶ್ ದುಗ್ಗುಮನೆ
|

Updated on:Feb 09, 2023 | 10:09 AM

Share

ಕನ್ನಡದ ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ಗೌಡ (Umapathy SrinivasGowda) ಅವರು ಈಗ ಸುದ್ದಿಯಲ್ಲಿದ್ದಾರೆ. ಹಾಗಂತ ಇದು ಸಿನಿಮಾ ವಿಚಾರಕ್ಕಲ್ಲ. ಬದಲಿಗೆ ವೈಯಕ್ತಿಕ ವಿಚಾರಕ್ಕೆ. ಅವರ ವಿರುದ್ಧ ಬಿಡಿಎ ಸೈಟ್ ಒತ್ತುವರಿ ಆರೋಪ ಕೇಳಿ ಬಂದಿದೆ. ಹೀಗಾಗಿ, ಬಿಡಿಎ ಕಡೆಯಿಂದ ಉಮಾಪತಿ ಶ್ರೀನಿವಾಸ ಗೌಡಗೆ ನೋಟಿಸ್ ಜಾರಿ ಮಾಡಲಾಗಿದೆ. 8 ದಿನಗಳ ಒಳಗೆ ಈ ನೋಟಿಸ್​ಗೆ ಉತ್ತರಿಸುವಂತೆ ಸೂಚಿಸಲಾಗಿದೆ.

ಬೆಂಗಳೂರಿನ ಎಚ್​​ಎಸ್​​ಆರ್ ಲೇ ಔಟ್​ನ 3ನೇ ಸೆಕ್ಟರ್​​ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಶ್ರೀನಿವಾಸ್​​ಗೌಡ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಜಾಗ 1,545 ಚದರ ಮೀಟರ್ ವಿಸ್ತೀರ್ಣ ಇದೆ. ‘ಈ ಒತ್ತುವರಿಯನ್ನು ಏಕೆ ತೆರವು ಮಾಡಬಾರದು’ ಎಂದು ನೋಟೀಸ್ ನೀಡಲಾಗಿದೆ.

‘ಬಿಡಿಎ ನಿವೇಶನಗಳನ್ನು ಉಮಾಪತಿ ಒತ್ತುವರಿ ಮಾಡಿದ್ದು, ಇದನ್ನು ತೆರವು ಮಾಡಲು  ಅನುಮತಿ ಕೊಡಬೇಕು’ ಎಂದು ಬಿಡಿಎ ಆಯುಕ್ತರಿಗೆ ಇಂಜಿನಿಯರ್ ಕಡತ ರವಾನಿಸಿದ್ದರು. ಒತ್ತುವರಿ ತೆರವು ಮಾಡುವ ಮುನ್ನ ಉಮಾಪತಿಗೆ ನೋಟೀಸ್ ನೀಡಲಾಗಿದೆ. ‘ಬಿಡಿಎ ನಿವೇಶನಗಳು ನಿಮಗೆ ಸಂಬಂಧಿಸಿದ್ದು ಎಂಬುದಕ್ಕೆ ದಾಖಲೆ ನೀಡುವಂತೆ ಉಮಾಪತಿಗೆ ಸೂಚಿಸಲಾಗಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆ ಮಾಡದೆ ಹೋದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ.

ಇದನ್ನೂ ಓದಿ: ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹತ್ಯೆಗೆ ಸಂಚು ಪ್ರಕರಣ; ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಕನ್ನಡ ಚಿತ್ರರಂಗದಲ್ಲಿ ಸಿನಿಮಾಗಳನ್ನು ನಿರ್ಮಿಸಿ ಉಮಾಪತಿ ಶ್ರೀನಿವಾಸ್ ಫೇಮಸ್ ಆಗಿದ್ದಾರೆ. ಅವರು ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕಳೆದ ವರ್ಷ ರಿಲೀಸ್ ಆದ ‘ಮದಗಜ’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ‘ಅಯೋಗ್ಯ’ ಖ್ಯಾತಿಯ ಮಹೇಶ್ ಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾದಲ್ಲಿ ಶ್ರೀಮುರಳಿ ಹಾಗೂ ಆಶಿಕಾ ರಂಗನಾಥ್ ಒಟ್ಟಾಗಿ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:35 am, Thu, 9 February 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ