AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಮತ್ತು ಗ್ಯಾಂಗ್​ನಿಂದ, ನಿರ್ಮಾಪಕ ಉಮಾಪತಿ ಮೇಲೆ ಹಲ್ಲೆಗೆ ನಡೆದಿತ್ತು ಯತ್ನ

ಒಂದು ಕಾಲದಲ್ಲಿ ಗೆಳೆಯರಾಗಿದ್ದ ದರ್ಶನ್ ಮತ್ತು ಉಮಾಪತಿ ಶ್ರೀನಿವಾಸ್ ಈಗ ಪರಸ್ಪರ ವಿರೋಧಿಗಳು, ಉಮಾಪತಿಯನ್ನು ‘ತಗಡು’ ಎಂದಿದ್ದ ದರ್ಶನ್ ಇಂದು ಸಲಾಕೆಗಳ ಹಿಂದಿದ್ದಾರೆ. ಇದೀಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಉಮಾಪತಿ ಶ್ರೀನಿವಾಸ್, ತಮ್ಮ ಮೇಲೂ ಹಲ್ಲೆಗೆ ಯತ್ನ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​ನ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ದರ್ಶನ್ ಮತ್ತು ಗ್ಯಾಂಗ್​ನಿಂದ, ನಿರ್ಮಾಪಕ ಉಮಾಪತಿ ಮೇಲೆ ಹಲ್ಲೆಗೆ ನಡೆದಿತ್ತು ಯತ್ನ
ದರ್ಶನ್ ತೂಗುದೀಪ
ಮಂಜುನಾಥ ಸಿ.
|

Updated on:Jun 18, 2024 | 12:03 PM

Share

ರೇಣುಕಾಸ್ವಾಮಿ (Renuka Swamy) ಪ್ರಕರಣದಲ್ಲಿ ನಟ ದರ್ಶನ್ (Darshan Thoogudeepa) ಆರೋಪಿಯಾಗಿದ್ದಾರೆ. ಕನಿಷ್ಟ ಮೂರು ತಿಂಗಳು ಅವರು ಹೊರಗೆ ಬರುವುದು ಅನುಮಾನ ಎನ್ನಲಾಗುತ್ತಿದೆ. ಈ ಪ್ರಕರಣಕ್ಕೆ ಮುಂಚೆಯೂ ಹಲವು ವಿವಾದಗಳಲ್ಲಿ ದರ್ಶನ್ ಹೆಸರು ಕೇಳಿ ಬಂದಿತ್ತು. ಈ ವಿವಾದ, ಜಗಳಗಳಿಂದಾಗಿ ಚಿತ್ರರಂಗದಲ್ಲಿಯೂ ಸಹ ದರ್ಶನ್​ಗೆ ಹಲವು ವಿರೋಧಿಗಳನ್ನು ಸೃಷ್ಟಿಸಿಕೊಂಡಿದ್ದಾರೆ. ಒಂದು ಸಮಯದ ಗೆಳೆಯರನ್ನೇ ವಿರೋಧಿಗಳನ್ನಾಗಿಯೂ ಮಾಡಿಕೊಂಡಿದ್ದಾರೆ ದರ್ಶನ್. ಅಂಥಹವರಲ್ಲಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸಹ ಒಬ್ಬರು.

ದರ್ಶನ್ ಜೈಲಿಗೆ ಹೋದಾಗಿನಿಂದ ಬಹುತೇಕ ಮೌನವಾಗಿಯೇ ಇದ್ದ ಉಮಾಪತಿ ಶ್ರೀನಿವಾಸ್, ಇಂದು (ಜೂನ್ 18) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಉಮಾಪತಿ ಶ್ರೀನಿವಾಸ್, ತಮ್ಮ ಮೇಲೆಯೂ ಒಮ್ಮೆ ಹಲ್ಲೆ ನಡೆಸುವ ಯತ್ನ ದರ್ಶನ್ ಹಾಗೂ ಗ್ಯಾಂಗ್​ನಿಂದ ಆಗಿತ್ತು ಎಂಬ ಆತಂಕಕಾರಿ ವಿಷಯವನ್ನ ಸಹ ಉಮಾಪತಿ ಬಿಚ್ಚಿಟ್ಟಿದ್ದಾರೆ.

ಉಮಾಪತಿ ಅವರು ದರ್ಶನ್ ಹೆಸರು ಬಳಸಿ 25 ಕೋಟಿ ರೂಪಾಯಿ ಬ್ಯಾಂಕ್ ಲೋನ್​ಗೆ ಅರ್ಜಿ ಹಾಕಿ ವಂಚನೆಗೆ ಯತ್ನಿಸಿದ್ದಾರೆ ಎಂದು ದರ್ಶನ್ ಹಾಗೂ ಗ್ಯಾಂಗ್ ಆರೋಪ ಮಾಡಿತ್ತು. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಆರೋಪ ಮಾಡಲಾಗಿತ್ತು. ವಿಶೇಷವೆಂದರೆ ಅಂದು ಉಮಾಪತಿ ಶ್ರೀನಿವಾಸ್ ಸಹ ಮೈಸೂರಿನಲ್ಲಿದ್ದರು. ಆ ದಿನ ದರ್ಶನ್ ಗೆಳೆಯರು ಕೆಲವರು ಉಮಾಪತಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದರು ಎಂಬ ಅಂಶ ಹೊರಬಂದಿತ್ತು. ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಉಮಾಪತಿ, ‘ಮೈಸೂರಿನ ಹೋಟೆಲ್​ ಒಂದರಲ್ಲಿ ತಮ್ಮ ಮೇಲೂ ಸಹ ಹಲ್ಲೆಗೆ ದರ್ಶನ್ ಮತ್ತು ಗ್ಯಾಂಗ್ ಸ್ಕೆಚ್ ಹಾಕಿತ್ತು’ ಎಂದಿದ್ದಾರೆ.

ಇದನ್ನೂ ಓದಿ:ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ

‘ಹೋಟೆಲ್ ಒಂದಕ್ಕೆ ಟೂಲ್ಸ್​ (ಆಯುಧ)ಗಳನ್ನು ತಂದು ಇರಿಸಿಕೊಳ್ಳಲಾಗಿತ್ತು. ನನ್ನನ್ನು ಹೊಡೆಯುವ ಯೋಜನೆ ಆ ದಿನ ಹಾಕಿದ್ದರು, ಅಂದು ನಾನು ಬದುಕಿ ಬಂದಿದ್ದೇ ಹೆಚ್ಚು’ ಎಂದಿರುವ ಉಮಾಪತಿ ಶ್ರೀನಿವಾಸ್, ಮೈಸೂರಿನ ಸೋಷಿಯಲ್ಸ್​ಗೆ ನನ್ನನ್ನು ಕರೆಸಿಕೊಂದು ಇವರು ಆಡದ ಮಾತುಗಳಿಲ್ಲ, ನನ್ನೆದುರಿಗೆ ಟೇಬಲ್​ ಮೇಲೆ ಆಯುಧಗಳನ್ನು ಇಟ್ಟಿದ್ದರು. ಅಂದು ನಾನು ಬದುಕಿ ಬಂದಿದ್ದೇ ಹೆಚ್ಚು’ ಎಂದು ಹಳೆಯದನ್ನು ನೆನಪು ಮಾಡಿಕೊಂಡಿದ್ದಾರೆ. ‘ರಾಬರ್ಟ್’ ಸಿನಿಮಾದ ಚಿತ್ರೀಕರಣದ ವೇಳೆಯೂ ಸಹ ಕೆಲವು ಬಾರಿ ಕೆಲವೊರೊಟ್ಟಿಗೆ ದರ್ಶನ್ ಒರಟಾಗಿ ನಡೆದುಕೊಂಡಿದ್ದುಂಟು ಎಂದು ಹೇಳಿದ್ದಾರೆ.

ಆ ಸಮಯದಲ್ಲಿ ಅವರು ತಪ್ಪು ಮಾಡಿದಾಗ ನಾನು ನೇರವಾಗಿ ಹೇಳುತ್ತಿದ್ದೆ, ಹೀಗೆಲ್ಲ ಮಾಡುವುದರಿಂದ ಯಾರಿಗೂ ಲಾಭವಿಲ್ಲ, ತಾಳ್ಮೆಯಿಂದಿರಿ ಎಂದು ಬುದ್ಧಿವಾದ ಹೇಳುತ್ತಿದ್ದೆ. ಒಮ್ಮೊಮ್ಮೆ ನಿರ್ಮಾಪಕನಾಗಿ ನಾನು ಯಾರ ಮೇಲಾದರೂ ಸಿಟ್ಟಿನಿಂದ ವರ್ತಿಸಿದಾಗ ದರ್ಶನ್ ಸಹ ನನಗೆ ಬುದ್ಧಿ ಹೇಳುತ್ತಿದ್ದರು. ಆದರೆ ಇಂದು ಅವರಿಂದ ಕ್ಷಮಿಸಲಾಗದ ತಪ್ಪಾಗಿದೆ. ವ್ಯಕ್ತಿ ತಾಳ್ಮೆಯಿಂದ ಇದ್ದರೆ ಏನೇನೋ ಸಾಧಿಸಬಹುದು ಅವರ ಸಿಟ್ಟು, ಅಹಂ, ಅಂಹಕಾರವೇ ಇಂದಿನ ಅವರ ಸ್ಥಿತಿಗೆ ಕಾರಣ ಎಂದಿದ್ದಾರೆ ಉಮಾಪತಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:55 am, Tue, 18 June 24

ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು