AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್- ಉಮಾಪತಿ ಭಿನ್ನಾಭಿಪ್ರಾಯಕ್ಕೆ ಆಸ್ತಿ ವಿಚಾರ ಕಾರಣವೇ?; ಉಮಾಪತಿ ಹೇಳಿದ್ದೇನು?

Umapathy Srinnivas Gowda: ನಟ ದರ್ಶನ್ ಹಾಗೂ ತಮ್ಮ ನಡುವೆ ಆಸ್ತಿಯ ವಿಚಾರದ ಕುರಿತಂತೆ ಗೊಂದಲಗಳಿಲ್ಲ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ತಿಳಿಸಿದ್ದಾರೆ.

ದರ್ಶನ್- ಉಮಾಪತಿ ಭಿನ್ನಾಭಿಪ್ರಾಯಕ್ಕೆ ಆಸ್ತಿ ವಿಚಾರ ಕಾರಣವೇ?; ಉಮಾಪತಿ ಹೇಳಿದ್ದೇನು?
ನಿರ್ಮಾಪಕ ಉಮಾಪತಿ (ಫೈಲ್ ಚಿತ್ರ)
TV9 Web
| Edited By: |

Updated on:Jul 17, 2021 | 1:27 PM

Share

ದರ್ಶನ್ ಹಾಗೂ ಉಮಾಪತಿಯವರ ನಡುವೆ ಗೊಂದಲ ಮೂಡುವುದಕ್ಕೆ ಆಸ್ತಿ ವಿಚಾರ ಕಾರಣವೇ ಎಂಬ ಮಾಹಿತಿಯೊಂದು ಎಲ್ಲೆಡೆಯಿಂದ ಕೇಳಿಬಂದಿತ್ತು. ಈ ಕುರಿತು ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಸ್ಪಷ್ಟನೆ ನೀಡಿದ್ದಾರೆ. ನಟ ಪುನೀತ್ ರಾಜ್​ಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್​ ಅವರಿಗೆ ಸೇರಿದ್ದ ಆಸ್ತಿ ಖರೀದಿಸಿದ್ದೆ. ಆ ಆಸ್ತಿಯನ್ನು ದರ್ಶನ್ ಕೇಳಿದ್ದರು. ನಾನು ಕೊಡಲ್ಲ ಅಂದಿದ್ದೆ. ದರ್ಶನ್ ಸರ್​ ಸಹ ಅದಕ್ಕೆ ಒಪ್ಪಿಗೆ ನೀಡಿ ವಿಚಾರ ಕೈಬಿಟ್ಟಿದ್ದರು ಎಂದು ಉಮಾಪತಿ ಶ್ರೀನಿವಾಸ ಗೌಡ ಸ್ಪಷ್ಟಪಡಿಸಿದ್ದಾರೆ. ಪ್ರಾಪರ್ಟಿ ವಿಚಾರವನ್ನು ನಾನು ಮತ್ತು ದರ್ಶನ್ ಮಾತನಾಡಿಕೊಳ್ಳುತ್ತೇವೆ. ಪ್ರಾಪರ್ಟಿ ಬೇಕೇ ಬೇಕು ಎಂದು ದರ್ಶನ್ ಕೇಳುವುದಿಲ್ಲ. ದರ್ಶನ್​ ಅವರಿಗೆ ನಾನು ಬೇರೆ ವ್ಯವಸ್ಥೆ ಮಾಡುವುದಾಗಿ ಈಗಾಗಲೇ ಹೇಳಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನಾನು ಆ ಆಸ್ತಿಯನ್ನು ದುಡ್ಡು ಕೊಟ್ಟು ಖರೀದಿಸಿದ್ದೇನೆ. ಅದು ದೊಡ್ಮನೆಯವರದ್ದು. ಪ್ರಾಪರ್ಟಿ ಕೊಟ್ಟರೆ, ಬೇರೆಯದ್ದೇ ಆಯಾಮ ಪಡೆಯುತ್ತದೆ.ದೊಡ್ಮನೆಯವರ ಪ್ರಾಪರ್ಟಿ ಮತ್ತೊಬ್ಬರಿಗೆ ಮಾರಿದರೆ ಶೋಭೆ ತರುವುದಿಲ್ಲ. ಹಾಗಾಗಿ ನಾನು ದೊಡ್ಮನೆ ಪ್ರಾಪರ್ಟಿಯನ್ನ ಮಾರಾಟಮಾಡಿಲ್ಲ ಎಂದು ಉಮಾಪತಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಉಮಾಪತಿ ಶ್ರೀನಿವಾಸ ಗೌಡ ನೀಡಿರುವ ಹೇಳಿಕೆ ಇಲ್ಲಿದೆ:

ಈ ನಡುವೆ, ಅರುಣಾ ಕುಮಾರಿ ಲೋನ್ ವಂಚನೆಗೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ಒಂದು ಘಟನೆಯನ್ನು ಉದಾಹರಿಸಿದ್ದಾರೆ. ‘ಮದಗಜ’ ಸಿನಿಮಾ ತಂಡಕ್ಕೆ ನಟ ದರ್ಶನ್​ರಿಂದ​ ಪಾರ್ಟಿ ನೀಡಲಾಗಿತ್ತು. ಪಾರ್ಟಿಗೆ ನಿರ್ಮಾಪಕರು ಬರುತ್ತಾರೆ ಕಾರು ಬಿಡಿ ಎಂದಿದ್ದರು. ಆದರೆ, ನಾನು ಹೋದ ಸಂದರ್ಭದಲ್ಲಿ ನನ್ನ ಕಾರನ್ನು ತಡೆದಿದ್ದರು. ಅನಂತರ ನಟ ದರ್ಶನ್​ ಅವರಿ​​ಗೆ ನಾನು ಕರೆ ಮಾಡಿದ್ದೆ. ಆಗ ದರ್ಶನ್​ ಅವರು ಯಾರೋ ಒಬ್ಬರನ್ನು ಕಳಿಸಿದ್ದರು. ಆನಂತರವೇ ನನ್ನನ್ನು ಪಬ್​ ಒಳಗೆ ಬಿಟ್ಟಿದ್ದರು. ಆದರೆ ಲಾಕ್​ಡೌನ್ ವೇಳೆ ಅರುಣಾ ಕುಮಾರಿಗೆ ಪ್ರವೇಶ ಹೇಗೆ ನೀಡಲಾಗಿತ್ತು ಎಂಬುದನ್ನು ಅವರು ಪ್ರಶ್ನಿಸಿದ್ದಾರೆ. ಈ ಪ್ರಕರಣದಲ್ಲಿ ತನಿಖೆಯ ನಂತರವೇ ಸತ್ಯ ಹೊರಬರಲಿದೆ. ನಾನು ಅದರಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ದರ್ಶನ್- ಉಮಾಪತಿ ಭಿನ್ನಾಭಿಪ್ರಾಯಕ್ಕೆ ಆಸ್ತಿ ವಿಚಾರ ಕಾರಣವೇ?; ಉಮಾಪತಿ ಹೇಳಿದ್ದೇನು?

ಇದನ್ನೂ ಓದಿ: ಸಲ್ಲುಗೆ ಕತ್ರಿನಾ ಮೇಲೆ ಇನ್ನೂ ಲವ್​ ಇದೆ ಎಂಬುದಕ್ಕೆ ಈ ಪೋಸ್ಟ್​ ಸಾಕ್ಷಿ; ಫ್ಯಾನ್ಸ್​ ಹೇಳೋದೇನು?

(umapathy srinivasa gowda clarifies there is no confusion on property issue with darshan)

Published On - 1:05 pm, Sat, 17 July 21

Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ