AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್- ಉಮಾಪತಿ ಭಿನ್ನಾಭಿಪ್ರಾಯಕ್ಕೆ ಆಸ್ತಿ ವಿಚಾರ ಕಾರಣವೇ?; ಉಮಾಪತಿ ಹೇಳಿದ್ದೇನು?

Umapathy Srinnivas Gowda: ನಟ ದರ್ಶನ್ ಹಾಗೂ ತಮ್ಮ ನಡುವೆ ಆಸ್ತಿಯ ವಿಚಾರದ ಕುರಿತಂತೆ ಗೊಂದಲಗಳಿಲ್ಲ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ತಿಳಿಸಿದ್ದಾರೆ.

ದರ್ಶನ್- ಉಮಾಪತಿ ಭಿನ್ನಾಭಿಪ್ರಾಯಕ್ಕೆ ಆಸ್ತಿ ವಿಚಾರ ಕಾರಣವೇ?; ಉಮಾಪತಿ ಹೇಳಿದ್ದೇನು?
ನಿರ್ಮಾಪಕ ಉಮಾಪತಿ (ಫೈಲ್ ಚಿತ್ರ)
TV9 Web
| Edited By: |

Updated on:Jul 17, 2021 | 1:27 PM

Share

ದರ್ಶನ್ ಹಾಗೂ ಉಮಾಪತಿಯವರ ನಡುವೆ ಗೊಂದಲ ಮೂಡುವುದಕ್ಕೆ ಆಸ್ತಿ ವಿಚಾರ ಕಾರಣವೇ ಎಂಬ ಮಾಹಿತಿಯೊಂದು ಎಲ್ಲೆಡೆಯಿಂದ ಕೇಳಿಬಂದಿತ್ತು. ಈ ಕುರಿತು ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಸ್ಪಷ್ಟನೆ ನೀಡಿದ್ದಾರೆ. ನಟ ಪುನೀತ್ ರಾಜ್​ಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್​ ಅವರಿಗೆ ಸೇರಿದ್ದ ಆಸ್ತಿ ಖರೀದಿಸಿದ್ದೆ. ಆ ಆಸ್ತಿಯನ್ನು ದರ್ಶನ್ ಕೇಳಿದ್ದರು. ನಾನು ಕೊಡಲ್ಲ ಅಂದಿದ್ದೆ. ದರ್ಶನ್ ಸರ್​ ಸಹ ಅದಕ್ಕೆ ಒಪ್ಪಿಗೆ ನೀಡಿ ವಿಚಾರ ಕೈಬಿಟ್ಟಿದ್ದರು ಎಂದು ಉಮಾಪತಿ ಶ್ರೀನಿವಾಸ ಗೌಡ ಸ್ಪಷ್ಟಪಡಿಸಿದ್ದಾರೆ. ಪ್ರಾಪರ್ಟಿ ವಿಚಾರವನ್ನು ನಾನು ಮತ್ತು ದರ್ಶನ್ ಮಾತನಾಡಿಕೊಳ್ಳುತ್ತೇವೆ. ಪ್ರಾಪರ್ಟಿ ಬೇಕೇ ಬೇಕು ಎಂದು ದರ್ಶನ್ ಕೇಳುವುದಿಲ್ಲ. ದರ್ಶನ್​ ಅವರಿಗೆ ನಾನು ಬೇರೆ ವ್ಯವಸ್ಥೆ ಮಾಡುವುದಾಗಿ ಈಗಾಗಲೇ ಹೇಳಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನಾನು ಆ ಆಸ್ತಿಯನ್ನು ದುಡ್ಡು ಕೊಟ್ಟು ಖರೀದಿಸಿದ್ದೇನೆ. ಅದು ದೊಡ್ಮನೆಯವರದ್ದು. ಪ್ರಾಪರ್ಟಿ ಕೊಟ್ಟರೆ, ಬೇರೆಯದ್ದೇ ಆಯಾಮ ಪಡೆಯುತ್ತದೆ.ದೊಡ್ಮನೆಯವರ ಪ್ರಾಪರ್ಟಿ ಮತ್ತೊಬ್ಬರಿಗೆ ಮಾರಿದರೆ ಶೋಭೆ ತರುವುದಿಲ್ಲ. ಹಾಗಾಗಿ ನಾನು ದೊಡ್ಮನೆ ಪ್ರಾಪರ್ಟಿಯನ್ನ ಮಾರಾಟಮಾಡಿಲ್ಲ ಎಂದು ಉಮಾಪತಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಉಮಾಪತಿ ಶ್ರೀನಿವಾಸ ಗೌಡ ನೀಡಿರುವ ಹೇಳಿಕೆ ಇಲ್ಲಿದೆ:

ಈ ನಡುವೆ, ಅರುಣಾ ಕುಮಾರಿ ಲೋನ್ ವಂಚನೆಗೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ಒಂದು ಘಟನೆಯನ್ನು ಉದಾಹರಿಸಿದ್ದಾರೆ. ‘ಮದಗಜ’ ಸಿನಿಮಾ ತಂಡಕ್ಕೆ ನಟ ದರ್ಶನ್​ರಿಂದ​ ಪಾರ್ಟಿ ನೀಡಲಾಗಿತ್ತು. ಪಾರ್ಟಿಗೆ ನಿರ್ಮಾಪಕರು ಬರುತ್ತಾರೆ ಕಾರು ಬಿಡಿ ಎಂದಿದ್ದರು. ಆದರೆ, ನಾನು ಹೋದ ಸಂದರ್ಭದಲ್ಲಿ ನನ್ನ ಕಾರನ್ನು ತಡೆದಿದ್ದರು. ಅನಂತರ ನಟ ದರ್ಶನ್​ ಅವರಿ​​ಗೆ ನಾನು ಕರೆ ಮಾಡಿದ್ದೆ. ಆಗ ದರ್ಶನ್​ ಅವರು ಯಾರೋ ಒಬ್ಬರನ್ನು ಕಳಿಸಿದ್ದರು. ಆನಂತರವೇ ನನ್ನನ್ನು ಪಬ್​ ಒಳಗೆ ಬಿಟ್ಟಿದ್ದರು. ಆದರೆ ಲಾಕ್​ಡೌನ್ ವೇಳೆ ಅರುಣಾ ಕುಮಾರಿಗೆ ಪ್ರವೇಶ ಹೇಗೆ ನೀಡಲಾಗಿತ್ತು ಎಂಬುದನ್ನು ಅವರು ಪ್ರಶ್ನಿಸಿದ್ದಾರೆ. ಈ ಪ್ರಕರಣದಲ್ಲಿ ತನಿಖೆಯ ನಂತರವೇ ಸತ್ಯ ಹೊರಬರಲಿದೆ. ನಾನು ಅದರಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ದರ್ಶನ್- ಉಮಾಪತಿ ಭಿನ್ನಾಭಿಪ್ರಾಯಕ್ಕೆ ಆಸ್ತಿ ವಿಚಾರ ಕಾರಣವೇ?; ಉಮಾಪತಿ ಹೇಳಿದ್ದೇನು?

ಇದನ್ನೂ ಓದಿ: ಸಲ್ಲುಗೆ ಕತ್ರಿನಾ ಮೇಲೆ ಇನ್ನೂ ಲವ್​ ಇದೆ ಎಂಬುದಕ್ಕೆ ಈ ಪೋಸ್ಟ್​ ಸಾಕ್ಷಿ; ಫ್ಯಾನ್ಸ್​ ಹೇಳೋದೇನು?

(umapathy srinivasa gowda clarifies there is no confusion on property issue with darshan)

Published On - 1:05 pm, Sat, 17 July 21

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು