AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್- ಉಮಾಪತಿ ಭಿನ್ನಾಭಿಪ್ರಾಯಕ್ಕೆ ಆಸ್ತಿ ವಿಚಾರ ಕಾರಣವೇ?; ಉಮಾಪತಿ ಹೇಳಿದ್ದೇನು?

Umapathy Srinnivas Gowda: ನಟ ದರ್ಶನ್ ಹಾಗೂ ತಮ್ಮ ನಡುವೆ ಆಸ್ತಿಯ ವಿಚಾರದ ಕುರಿತಂತೆ ಗೊಂದಲಗಳಿಲ್ಲ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ತಿಳಿಸಿದ್ದಾರೆ.

ದರ್ಶನ್- ಉಮಾಪತಿ ಭಿನ್ನಾಭಿಪ್ರಾಯಕ್ಕೆ ಆಸ್ತಿ ವಿಚಾರ ಕಾರಣವೇ?; ಉಮಾಪತಿ ಹೇಳಿದ್ದೇನು?
ನಿರ್ಮಾಪಕ ಉಮಾಪತಿ (ಫೈಲ್ ಚಿತ್ರ)
TV9 Web
| Edited By: |

Updated on:Jul 17, 2021 | 1:27 PM

Share

ದರ್ಶನ್ ಹಾಗೂ ಉಮಾಪತಿಯವರ ನಡುವೆ ಗೊಂದಲ ಮೂಡುವುದಕ್ಕೆ ಆಸ್ತಿ ವಿಚಾರ ಕಾರಣವೇ ಎಂಬ ಮಾಹಿತಿಯೊಂದು ಎಲ್ಲೆಡೆಯಿಂದ ಕೇಳಿಬಂದಿತ್ತು. ಈ ಕುರಿತು ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಸ್ಪಷ್ಟನೆ ನೀಡಿದ್ದಾರೆ. ನಟ ಪುನೀತ್ ರಾಜ್​ಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್​ ಅವರಿಗೆ ಸೇರಿದ್ದ ಆಸ್ತಿ ಖರೀದಿಸಿದ್ದೆ. ಆ ಆಸ್ತಿಯನ್ನು ದರ್ಶನ್ ಕೇಳಿದ್ದರು. ನಾನು ಕೊಡಲ್ಲ ಅಂದಿದ್ದೆ. ದರ್ಶನ್ ಸರ್​ ಸಹ ಅದಕ್ಕೆ ಒಪ್ಪಿಗೆ ನೀಡಿ ವಿಚಾರ ಕೈಬಿಟ್ಟಿದ್ದರು ಎಂದು ಉಮಾಪತಿ ಶ್ರೀನಿವಾಸ ಗೌಡ ಸ್ಪಷ್ಟಪಡಿಸಿದ್ದಾರೆ. ಪ್ರಾಪರ್ಟಿ ವಿಚಾರವನ್ನು ನಾನು ಮತ್ತು ದರ್ಶನ್ ಮಾತನಾಡಿಕೊಳ್ಳುತ್ತೇವೆ. ಪ್ರಾಪರ್ಟಿ ಬೇಕೇ ಬೇಕು ಎಂದು ದರ್ಶನ್ ಕೇಳುವುದಿಲ್ಲ. ದರ್ಶನ್​ ಅವರಿಗೆ ನಾನು ಬೇರೆ ವ್ಯವಸ್ಥೆ ಮಾಡುವುದಾಗಿ ಈಗಾಗಲೇ ಹೇಳಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನಾನು ಆ ಆಸ್ತಿಯನ್ನು ದುಡ್ಡು ಕೊಟ್ಟು ಖರೀದಿಸಿದ್ದೇನೆ. ಅದು ದೊಡ್ಮನೆಯವರದ್ದು. ಪ್ರಾಪರ್ಟಿ ಕೊಟ್ಟರೆ, ಬೇರೆಯದ್ದೇ ಆಯಾಮ ಪಡೆಯುತ್ತದೆ.ದೊಡ್ಮನೆಯವರ ಪ್ರಾಪರ್ಟಿ ಮತ್ತೊಬ್ಬರಿಗೆ ಮಾರಿದರೆ ಶೋಭೆ ತರುವುದಿಲ್ಲ. ಹಾಗಾಗಿ ನಾನು ದೊಡ್ಮನೆ ಪ್ರಾಪರ್ಟಿಯನ್ನ ಮಾರಾಟಮಾಡಿಲ್ಲ ಎಂದು ಉಮಾಪತಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಉಮಾಪತಿ ಶ್ರೀನಿವಾಸ ಗೌಡ ನೀಡಿರುವ ಹೇಳಿಕೆ ಇಲ್ಲಿದೆ:

ಈ ನಡುವೆ, ಅರುಣಾ ಕುಮಾರಿ ಲೋನ್ ವಂಚನೆಗೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ಒಂದು ಘಟನೆಯನ್ನು ಉದಾಹರಿಸಿದ್ದಾರೆ. ‘ಮದಗಜ’ ಸಿನಿಮಾ ತಂಡಕ್ಕೆ ನಟ ದರ್ಶನ್​ರಿಂದ​ ಪಾರ್ಟಿ ನೀಡಲಾಗಿತ್ತು. ಪಾರ್ಟಿಗೆ ನಿರ್ಮಾಪಕರು ಬರುತ್ತಾರೆ ಕಾರು ಬಿಡಿ ಎಂದಿದ್ದರು. ಆದರೆ, ನಾನು ಹೋದ ಸಂದರ್ಭದಲ್ಲಿ ನನ್ನ ಕಾರನ್ನು ತಡೆದಿದ್ದರು. ಅನಂತರ ನಟ ದರ್ಶನ್​ ಅವರಿ​​ಗೆ ನಾನು ಕರೆ ಮಾಡಿದ್ದೆ. ಆಗ ದರ್ಶನ್​ ಅವರು ಯಾರೋ ಒಬ್ಬರನ್ನು ಕಳಿಸಿದ್ದರು. ಆನಂತರವೇ ನನ್ನನ್ನು ಪಬ್​ ಒಳಗೆ ಬಿಟ್ಟಿದ್ದರು. ಆದರೆ ಲಾಕ್​ಡೌನ್ ವೇಳೆ ಅರುಣಾ ಕುಮಾರಿಗೆ ಪ್ರವೇಶ ಹೇಗೆ ನೀಡಲಾಗಿತ್ತು ಎಂಬುದನ್ನು ಅವರು ಪ್ರಶ್ನಿಸಿದ್ದಾರೆ. ಈ ಪ್ರಕರಣದಲ್ಲಿ ತನಿಖೆಯ ನಂತರವೇ ಸತ್ಯ ಹೊರಬರಲಿದೆ. ನಾನು ಅದರಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ದರ್ಶನ್- ಉಮಾಪತಿ ಭಿನ್ನಾಭಿಪ್ರಾಯಕ್ಕೆ ಆಸ್ತಿ ವಿಚಾರ ಕಾರಣವೇ?; ಉಮಾಪತಿ ಹೇಳಿದ್ದೇನು?

ಇದನ್ನೂ ಓದಿ: ಸಲ್ಲುಗೆ ಕತ್ರಿನಾ ಮೇಲೆ ಇನ್ನೂ ಲವ್​ ಇದೆ ಎಂಬುದಕ್ಕೆ ಈ ಪೋಸ್ಟ್​ ಸಾಕ್ಷಿ; ಫ್ಯಾನ್ಸ್​ ಹೇಳೋದೇನು?

(umapathy srinivasa gowda clarifies there is no confusion on property issue with darshan)

Published On - 1:05 pm, Sat, 17 July 21

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ