Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೆ ಬದುಕಬೇಕು ಎಂಬ ಮಾದರಿಯನ್ನು ಹಾಕಿಕೊಟ್ಟಿದ್ದಾರೆ ಲೀಲಾವತಿ: ಉಮಾಶ್ರೀ

Leelavathi: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ ಹೊಂದಿದ್ದಾರೆ. ನಟಿ ಉಮಾಶ್ರೀ ಅವರು ಲೀಲಾವತಿಯವರ ಜೀವನ, ಸಾಧನೆ ಬಗ್ಗೆ ಮಾತನಾಡಿದ್ದು ಹೀಗೆ...

ಹೀಗೆ ಬದುಕಬೇಕು ಎಂಬ ಮಾದರಿಯನ್ನು ಹಾಕಿಕೊಟ್ಟಿದ್ದಾರೆ ಲೀಲಾವತಿ: ಉಮಾಶ್ರೀ
ಉಮಾಶ್ರೀ
Follow us
ಮಂಜುನಾಥ ಸಿ.
|

Updated on: Dec 08, 2023 | 6:52 PM

ಕನ್ನಡ ಚಿತ್ರರಂಗದ (Sandalwood) ಹಿರಿಯ ನಟಿ ಲೀಲಾವತಿ (Leelavathi) ನಿಧನ ಹೊಂದಿದ್ದಾರೆ. ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಪುತ್ರ ವಿನೋದ್ ರಾಜ್​ ಜೊತೆ ನೆಲೆಸಿದ್ದ ಲೀಲಾವತಿ ಅವರು ಇಂದು ಸಂಜೆ ಕೊನೆ ಉಸಿರೆಳೆದರು. ಲೀಲಾವತಿ ಅವರ ಆರೋಗ್ಯದಲ್ಲಿ ವ್ಯತ್ಯಯ ಆಗುತ್ತಿದ್ದಂತೆ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಕರೆತರಲಾಯ್ತಾದರೂ ಆಸ್ಪತ್ರೆಯಲ್ಲಿ ಅವರು ಕೊನೆ ಉಸಿರೆಳೆದರು. ಲೀಲಾವತಿ ಅವರ ನಿಧನಕ್ಕೆ ಚಿತ್ರರಂಗದವರು, ರಾಜಕೀಯ ರಂಗದವರು ಕಂಬನಿ ಮಿಡಿಯುತ್ತಿದ್ದಾರೆ.

ಟಿವಿ9 ಜೊತೆ ಮಾತನಾಡಿದ ನಟಿ ಉಮಾಶ್ರೀ, ‘‘ಲೀಲಾವತಿ ಅವರು ಕೇವಲ ನಟಿಯಲ್ಲ, ಅವರು ದಂತಕತೆ. ನಟಿಯಾಗಿ ಮಾತ್ರವೇ ಅಲ್ಲದೆ, ತಮ್ಮ ಮಾನವೀಯ ಗುಣಗಳಿಂದ, ಸಾಮಾಜಿಕ ದೃಷ್ಟಿಕೋನದಿಂದಲೂ ಗುರುತಿಸಿಕೊಂಡವರು. ಒಬ್ಬ ನಟಿ ಹೇಗೆ ಬದುಕಬೇಕು ಎಂದು ತೋರಿಸಿಕೊಟ್ಟವರು. ಹಲವಾರು ಮಂದಿಗೆ ಮಾದರಿಯಾಗಿ ಬದುಕಿದವರು ಲೀಲಾವತಿ’’ ಎಂದಿದ್ದಾರೆ.

‘‘ನಟಿಯಾಗಿ ತಾನು ದುಡಿದಿದ್ದನ್ನು ಸಮಾಜಕ್ಕೆ ಅರ್ಪಿಸಿದವರು ಲೀಲಾವತಿ. ದುಡಿದಿದ್ದೆಲ್ಲವನ್ನೂ ಮಗನಿಗಾಗಿ ನೀಡದೆ ಸಮಾಜಕ್ಕೆ ಪಾಲು ನೀಡಿದ ಮಹಾನ್ ಮಹಿಳೆ ಲೀಲಾವತಿ. ನಟಿಯಾಗಿ ಮೆರೆದರೂ ರೈತ ಮಹಿಳೆಯಾಗಿ ಜೀವನ ನಡೆಸಿದರು. ತಮ್ಮ ತೋಟದಲ್ಲಿ ತಾನೇ ಗುದ್ದಲಿ, ಸಲಿಕೆ ಹಿಡಿದು ಕೆಲಸ ಮಾಡುತ್ತಿದ್ದರು. ಅವರನ್ನು ಹತ್ತಿರದಿಂದ ನೋಡಿದವರು ಮಾತ್ರವೇ ಇದನ್ನೆಲ್ಲ ಬಲ್ಲರು. ಅವರ ಪರಿಸರ ಪ್ರೀತಿ ಅಪಾರ. ಮದ್ರಾಸ್​ನಲ್ಲಿದ್ದಾಗಲೂ ಅವರು ಫಾರಂ ಹೌಸ್ ಹೊಂದಿದ್ದರು. ಘಟ್ಟ ಪ್ರದೇಶದವರಾಗಿದ್ದ ಲೀಲಾವತಿಯವರಿಗೆ ಸಹಜವಾಗಿಯೇ ಕಾಡು, ಗಿಡ-ಮರಗಳ ಬಗ್ಗೆ ಪ್ರೀತಿಯಿತ್ತು, ಹಾಗಾಗಿ ಅವರು ರೈತ ಜೀವನ ಆರಿಸಿಕೊಂಡರು’’ ಎಂದಿದ್ದಾರೆ ಉಮಾಶ್ರೀ.

ಇದನ್ನೂ ಓದಿ:Leelavathi: ರಾಜ್​ಕುಮಾರ್​ ಜತೆ 36 ಚಿತ್ರಗಳಲ್ಲಿ ನಟಿಸಿದ್ದ ಲೀಲಾವತಿ: ಕಷ್ಟದಲ್ಲೇ ಬೆಳೆದ ನಟಿಯ ಬದುಕಿನ ಕಥೆ ಇಲ್ಲಿದೆ..

‘‘ಕನ್ನಡ ಚಿತ್ರರಂಗಕ್ಕೆ ಲೀಲಾವತಿ ಅವರು ಕೊಟ್ಟಿರುವ ಕೊಡುಗೆ ಅಪಾರವಾದುದು. ಮಾತ್ರವಲ್ಲದೆ ಬದುಕಿನ ಮಾದರಿಯನ್ನು ನೀಡಿದ್ದಾರೆ. ರಂಗಭೂಮಿ ಮೂಲಕ ನಟನೆಗೆ ಆಗಮಿಸಿ, ನಾಯಕಿ, ಪೋಷಕ ಕಲಾವಿದೆ ಎಲ್ಲ ಬಗೆಯ ಪಾತ್ರಗಳನ್ನೂ ನಿರ್ವಹಿಸಿದರು. ಡಾ ರಾಜ್​ಕುಮಾರ್ ಅವರೊಟ್ಟಿಗೆ ಲೀಲಾವತಿ ಅವರು ಮಾಡಿದ ಚಿತ್ರಗಳು ಒಂದೊಂದು ಒಂದೊಂದು ಮುತ್ತುಗಳು. ಅವರೀಗ ಅಗಲಿದ್ದಾರೆ, ಅಪಾರವಾಗಿ ಹಚ್ಚಿಕೊಂಡಿದ್ದ ಮುದ್ದಿನ ಮಗನನ್ನು ಬಿಟ್ಟು ಹೋಗಿದ್ದಾರೆ. ವಿನೋದ್ ರಾಜ್ ಸ್ಥಿತಿಯನ್ನು ನೆನಪಿಸಿಕೊಂಡರೆ ಮನಸ್ಸು ಭಾರವಾಗುತ್ತದೆ. ದೇವರು ದುಃಖವನ್ನು ಭರಿಸುವ ಶಕ್ತಿ ವಿನೋದ್​ಗೆ ನೀಡಲಿ’’ ಎಂದರು ಉಮಾಶ್ರೀ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್