AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೆ ಬದುಕಬೇಕು ಎಂಬ ಮಾದರಿಯನ್ನು ಹಾಕಿಕೊಟ್ಟಿದ್ದಾರೆ ಲೀಲಾವತಿ: ಉಮಾಶ್ರೀ

Leelavathi: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ ಹೊಂದಿದ್ದಾರೆ. ನಟಿ ಉಮಾಶ್ರೀ ಅವರು ಲೀಲಾವತಿಯವರ ಜೀವನ, ಸಾಧನೆ ಬಗ್ಗೆ ಮಾತನಾಡಿದ್ದು ಹೀಗೆ...

ಹೀಗೆ ಬದುಕಬೇಕು ಎಂಬ ಮಾದರಿಯನ್ನು ಹಾಕಿಕೊಟ್ಟಿದ್ದಾರೆ ಲೀಲಾವತಿ: ಉಮಾಶ್ರೀ
ಉಮಾಶ್ರೀ
ಮಂಜುನಾಥ ಸಿ.
|

Updated on: Dec 08, 2023 | 6:52 PM

Share

ಕನ್ನಡ ಚಿತ್ರರಂಗದ (Sandalwood) ಹಿರಿಯ ನಟಿ ಲೀಲಾವತಿ (Leelavathi) ನಿಧನ ಹೊಂದಿದ್ದಾರೆ. ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಪುತ್ರ ವಿನೋದ್ ರಾಜ್​ ಜೊತೆ ನೆಲೆಸಿದ್ದ ಲೀಲಾವತಿ ಅವರು ಇಂದು ಸಂಜೆ ಕೊನೆ ಉಸಿರೆಳೆದರು. ಲೀಲಾವತಿ ಅವರ ಆರೋಗ್ಯದಲ್ಲಿ ವ್ಯತ್ಯಯ ಆಗುತ್ತಿದ್ದಂತೆ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಕರೆತರಲಾಯ್ತಾದರೂ ಆಸ್ಪತ್ರೆಯಲ್ಲಿ ಅವರು ಕೊನೆ ಉಸಿರೆಳೆದರು. ಲೀಲಾವತಿ ಅವರ ನಿಧನಕ್ಕೆ ಚಿತ್ರರಂಗದವರು, ರಾಜಕೀಯ ರಂಗದವರು ಕಂಬನಿ ಮಿಡಿಯುತ್ತಿದ್ದಾರೆ.

ಟಿವಿ9 ಜೊತೆ ಮಾತನಾಡಿದ ನಟಿ ಉಮಾಶ್ರೀ, ‘‘ಲೀಲಾವತಿ ಅವರು ಕೇವಲ ನಟಿಯಲ್ಲ, ಅವರು ದಂತಕತೆ. ನಟಿಯಾಗಿ ಮಾತ್ರವೇ ಅಲ್ಲದೆ, ತಮ್ಮ ಮಾನವೀಯ ಗುಣಗಳಿಂದ, ಸಾಮಾಜಿಕ ದೃಷ್ಟಿಕೋನದಿಂದಲೂ ಗುರುತಿಸಿಕೊಂಡವರು. ಒಬ್ಬ ನಟಿ ಹೇಗೆ ಬದುಕಬೇಕು ಎಂದು ತೋರಿಸಿಕೊಟ್ಟವರು. ಹಲವಾರು ಮಂದಿಗೆ ಮಾದರಿಯಾಗಿ ಬದುಕಿದವರು ಲೀಲಾವತಿ’’ ಎಂದಿದ್ದಾರೆ.

‘‘ನಟಿಯಾಗಿ ತಾನು ದುಡಿದಿದ್ದನ್ನು ಸಮಾಜಕ್ಕೆ ಅರ್ಪಿಸಿದವರು ಲೀಲಾವತಿ. ದುಡಿದಿದ್ದೆಲ್ಲವನ್ನೂ ಮಗನಿಗಾಗಿ ನೀಡದೆ ಸಮಾಜಕ್ಕೆ ಪಾಲು ನೀಡಿದ ಮಹಾನ್ ಮಹಿಳೆ ಲೀಲಾವತಿ. ನಟಿಯಾಗಿ ಮೆರೆದರೂ ರೈತ ಮಹಿಳೆಯಾಗಿ ಜೀವನ ನಡೆಸಿದರು. ತಮ್ಮ ತೋಟದಲ್ಲಿ ತಾನೇ ಗುದ್ದಲಿ, ಸಲಿಕೆ ಹಿಡಿದು ಕೆಲಸ ಮಾಡುತ್ತಿದ್ದರು. ಅವರನ್ನು ಹತ್ತಿರದಿಂದ ನೋಡಿದವರು ಮಾತ್ರವೇ ಇದನ್ನೆಲ್ಲ ಬಲ್ಲರು. ಅವರ ಪರಿಸರ ಪ್ರೀತಿ ಅಪಾರ. ಮದ್ರಾಸ್​ನಲ್ಲಿದ್ದಾಗಲೂ ಅವರು ಫಾರಂ ಹೌಸ್ ಹೊಂದಿದ್ದರು. ಘಟ್ಟ ಪ್ರದೇಶದವರಾಗಿದ್ದ ಲೀಲಾವತಿಯವರಿಗೆ ಸಹಜವಾಗಿಯೇ ಕಾಡು, ಗಿಡ-ಮರಗಳ ಬಗ್ಗೆ ಪ್ರೀತಿಯಿತ್ತು, ಹಾಗಾಗಿ ಅವರು ರೈತ ಜೀವನ ಆರಿಸಿಕೊಂಡರು’’ ಎಂದಿದ್ದಾರೆ ಉಮಾಶ್ರೀ.

ಇದನ್ನೂ ಓದಿ:Leelavathi: ರಾಜ್​ಕುಮಾರ್​ ಜತೆ 36 ಚಿತ್ರಗಳಲ್ಲಿ ನಟಿಸಿದ್ದ ಲೀಲಾವತಿ: ಕಷ್ಟದಲ್ಲೇ ಬೆಳೆದ ನಟಿಯ ಬದುಕಿನ ಕಥೆ ಇಲ್ಲಿದೆ..

‘‘ಕನ್ನಡ ಚಿತ್ರರಂಗಕ್ಕೆ ಲೀಲಾವತಿ ಅವರು ಕೊಟ್ಟಿರುವ ಕೊಡುಗೆ ಅಪಾರವಾದುದು. ಮಾತ್ರವಲ್ಲದೆ ಬದುಕಿನ ಮಾದರಿಯನ್ನು ನೀಡಿದ್ದಾರೆ. ರಂಗಭೂಮಿ ಮೂಲಕ ನಟನೆಗೆ ಆಗಮಿಸಿ, ನಾಯಕಿ, ಪೋಷಕ ಕಲಾವಿದೆ ಎಲ್ಲ ಬಗೆಯ ಪಾತ್ರಗಳನ್ನೂ ನಿರ್ವಹಿಸಿದರು. ಡಾ ರಾಜ್​ಕುಮಾರ್ ಅವರೊಟ್ಟಿಗೆ ಲೀಲಾವತಿ ಅವರು ಮಾಡಿದ ಚಿತ್ರಗಳು ಒಂದೊಂದು ಒಂದೊಂದು ಮುತ್ತುಗಳು. ಅವರೀಗ ಅಗಲಿದ್ದಾರೆ, ಅಪಾರವಾಗಿ ಹಚ್ಚಿಕೊಂಡಿದ್ದ ಮುದ್ದಿನ ಮಗನನ್ನು ಬಿಟ್ಟು ಹೋಗಿದ್ದಾರೆ. ವಿನೋದ್ ರಾಜ್ ಸ್ಥಿತಿಯನ್ನು ನೆನಪಿಸಿಕೊಂಡರೆ ಮನಸ್ಸು ಭಾರವಾಗುತ್ತದೆ. ದೇವರು ದುಃಖವನ್ನು ಭರಿಸುವ ಶಕ್ತಿ ವಿನೋದ್​ಗೆ ನೀಡಲಿ’’ ಎಂದರು ಉಮಾಶ್ರೀ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?