AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ BJP ಸೇರಿದರೆ ತುಂಬು ಹೃದಯದಿಂದ ಸ್ವಾಗತಿಸ್ತೇವೆ -ಕೇಂದ್ರ ಸಚಿವ ಅಠಾವಳೆ

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ ಏನಾದರೂ BJP ಅಥವಾ ನನ್ನ ಪಕ್ಷವಾದ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಗೆ ಸೇರಲು ಬಯಸಿದರೆ ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇವೆ ಎಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಅಧ್ಯಕ್ಷ ರಾಮದಾಸ್​ ಅಠವಾಳೆ ಹೇಳಿದ್ದಾರೆ. ನಟಿಯ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಧ್ವಂಸ ಮಾಡಿದ ಬಳಿಕ ಆಕೆಯ ಮನೆಗೆ ಭೇಟಿ ಕೊಟ್ಟಿದ್ದ ಕೇಂದ್ರ ಸಚಿವ ಅಠವಾಳೆ, ಬಾಲಿವುಡ್​ ನಟ ಸುಶಾಂತ್​ ಸಿಂಗ್​ ನಿಗೂಢ ಸಾವಿನ ಬಗ್ಗೆ […]

ಕಂಗನಾ BJP ಸೇರಿದರೆ ತುಂಬು ಹೃದಯದಿಂದ ಸ್ವಾಗತಿಸ್ತೇವೆ -ಕೇಂದ್ರ ಸಚಿವ ಅಠಾವಳೆ
KUSHAL V
|

Updated on:Sep 11, 2020 | 2:50 PM

Share

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ ಏನಾದರೂ BJP ಅಥವಾ ನನ್ನ ಪಕ್ಷವಾದ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಗೆ ಸೇರಲು ಬಯಸಿದರೆ ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇವೆ ಎಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಅಧ್ಯಕ್ಷ ರಾಮದಾಸ್​ ಅಠವಾಳೆ ಹೇಳಿದ್ದಾರೆ.

ನಟಿಯ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಧ್ವಂಸ ಮಾಡಿದ ಬಳಿಕ ಆಕೆಯ ಮನೆಗೆ ಭೇಟಿ ಕೊಟ್ಟಿದ್ದ ಕೇಂದ್ರ ಸಚಿವ ಅಠವಾಳೆ, ಬಾಲಿವುಡ್​ ನಟ ಸುಶಾಂತ್​ ಸಿಂಗ್​ ನಿಗೂಢ ಸಾವಿನ ಬಗ್ಗೆ ಕಂಗನಾ ನೀಡಿದ ಹೇಳಿಕೆಗಳಿಂದ ಅವರ ಮೇಲೆ ಸೇಡು ತೀರಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಮುಂಬೈ -POK ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಕುರಿತು ಹೇಳಿಕೆಗಳನ್ನು ನೀಡಿದ್ದ ಕಂಗನಾ ರಣಾವತ್ ಬಹಳಷ್ಟು ಸುದ್ದಿ ಮಾಡಿದ್ದರು. ಜೊತೆಗೆ, ಕೆಲವು ದಿನಗಳ ಹಿಂದೆ ಇವರ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆಯ ಅಧಿಕಾರಿಗಳು, ಕಟ್ಟಡ ನಿಯಮ ಉಲ್ಲಂಘನೆ ಅಡಿಯಲ್ಲಿ ಧ್ವಂಸಗೊಳಿಸಿದ್ದರು.

ಇದಾದ ಬಳಿಕ ಸಚಿವ ಅಠವಾಳೆ ನಟಿಯ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸದ್ಯ ನನಗೆ ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ. ಚಿತ್ರರಂಗದಲ್ಲಿ ನಾನು ಕೆಲಸ ಮಾಡುವವರೆಗೂ ನಾನು ರಾಜಕೀಯ ಕಣಕ್ಕೆ ಇಳಿಯುವುದಿಲ್ಲ ಎಂದು ಕಂಗನಾ, ರಾಮದಾಸ್​ ಅಠವಾಳೆಗೆ ತಿಳಿಸಿದರಂತೆ.

Published On - 2:34 pm, Fri, 11 September 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?