AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ BJP ಸೇರಿದರೆ ತುಂಬು ಹೃದಯದಿಂದ ಸ್ವಾಗತಿಸ್ತೇವೆ -ಕೇಂದ್ರ ಸಚಿವ ಅಠಾವಳೆ

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ ಏನಾದರೂ BJP ಅಥವಾ ನನ್ನ ಪಕ್ಷವಾದ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಗೆ ಸೇರಲು ಬಯಸಿದರೆ ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇವೆ ಎಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಅಧ್ಯಕ್ಷ ರಾಮದಾಸ್​ ಅಠವಾಳೆ ಹೇಳಿದ್ದಾರೆ. ನಟಿಯ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಧ್ವಂಸ ಮಾಡಿದ ಬಳಿಕ ಆಕೆಯ ಮನೆಗೆ ಭೇಟಿ ಕೊಟ್ಟಿದ್ದ ಕೇಂದ್ರ ಸಚಿವ ಅಠವಾಳೆ, ಬಾಲಿವುಡ್​ ನಟ ಸುಶಾಂತ್​ ಸಿಂಗ್​ ನಿಗೂಢ ಸಾವಿನ ಬಗ್ಗೆ […]

ಕಂಗನಾ BJP ಸೇರಿದರೆ ತುಂಬು ಹೃದಯದಿಂದ ಸ್ವಾಗತಿಸ್ತೇವೆ -ಕೇಂದ್ರ ಸಚಿವ ಅಠಾವಳೆ
KUSHAL V
|

Updated on:Sep 11, 2020 | 2:50 PM

Share

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ ಏನಾದರೂ BJP ಅಥವಾ ನನ್ನ ಪಕ್ಷವಾದ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಗೆ ಸೇರಲು ಬಯಸಿದರೆ ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇವೆ ಎಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಅಧ್ಯಕ್ಷ ರಾಮದಾಸ್​ ಅಠವಾಳೆ ಹೇಳಿದ್ದಾರೆ.

ನಟಿಯ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಧ್ವಂಸ ಮಾಡಿದ ಬಳಿಕ ಆಕೆಯ ಮನೆಗೆ ಭೇಟಿ ಕೊಟ್ಟಿದ್ದ ಕೇಂದ್ರ ಸಚಿವ ಅಠವಾಳೆ, ಬಾಲಿವುಡ್​ ನಟ ಸುಶಾಂತ್​ ಸಿಂಗ್​ ನಿಗೂಢ ಸಾವಿನ ಬಗ್ಗೆ ಕಂಗನಾ ನೀಡಿದ ಹೇಳಿಕೆಗಳಿಂದ ಅವರ ಮೇಲೆ ಸೇಡು ತೀರಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಮುಂಬೈ -POK ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಕುರಿತು ಹೇಳಿಕೆಗಳನ್ನು ನೀಡಿದ್ದ ಕಂಗನಾ ರಣಾವತ್ ಬಹಳಷ್ಟು ಸುದ್ದಿ ಮಾಡಿದ್ದರು. ಜೊತೆಗೆ, ಕೆಲವು ದಿನಗಳ ಹಿಂದೆ ಇವರ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆಯ ಅಧಿಕಾರಿಗಳು, ಕಟ್ಟಡ ನಿಯಮ ಉಲ್ಲಂಘನೆ ಅಡಿಯಲ್ಲಿ ಧ್ವಂಸಗೊಳಿಸಿದ್ದರು.

ಇದಾದ ಬಳಿಕ ಸಚಿವ ಅಠವಾಳೆ ನಟಿಯ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸದ್ಯ ನನಗೆ ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ. ಚಿತ್ರರಂಗದಲ್ಲಿ ನಾನು ಕೆಲಸ ಮಾಡುವವರೆಗೂ ನಾನು ರಾಜಕೀಯ ಕಣಕ್ಕೆ ಇಳಿಯುವುದಿಲ್ಲ ಎಂದು ಕಂಗನಾ, ರಾಮದಾಸ್​ ಅಠವಾಳೆಗೆ ತಿಳಿಸಿದರಂತೆ.

Published On - 2:34 pm, Fri, 11 September 20

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?