Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ನಟನೆಯ ಸಿನಿಮಾ ದೃಶ್ಯ ಲೀಕ್; ಬೇಸರ ಹೊರಹಾಕಿದ ನಿರ್ದೇಶಕ

ಉಪೇಂದ್ರ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ರಜನಿಕಾಂತ್, ಅಕ್ಕಿನೇನಿ ನಾಗಾರ್ಜುನ ನಟನೆಯ ‘ಕೂಲಿ’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಸಿನಿಮಾದ ದೃಶ್ಯವೊಂದು ಸೋರಿಕೆ ಆಗಿದೆ.ಈ ಬಗ್ಗೆ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಅಸಮಧಾನ ಹೊರಹಾಕಿದ್ದಾರೆ.

ಉಪೇಂದ್ರ ನಟನೆಯ ಸಿನಿಮಾ ದೃಶ್ಯ ಲೀಕ್; ಬೇಸರ ಹೊರಹಾಕಿದ ನಿರ್ದೇಶಕ
Follow us
ರಾಜೇಶ್ ದುಗ್ಗುಮನೆ
|

Updated on: Sep 19, 2024 | 8:49 AM

ಡಿಜಿಟಲ್ ಜಗತ್ತು ವಿಸ್ತಾರವಾಗಿ ಬೆಳೆಯುತ್ತಿದೆ. ಇದರ ಪರಿಣಾಮವಾಗಿ ಹಲವು ಹೀರೋಗಳ ಸಿನಿಮಾಗಳ ಪೋಸ್ಟರ್​ಗಳು ಲೀಕ್ ಆಗುತ್ತಿವೆ. ಈಗ ರಜನಿಕಾಂತ್, ಉಪೇಂದ್ರ, ಅಕ್ಕಿನೇನಿ ನಾಗಾರ್ಜುನ ನಟಿಸುತ್ತಿರುವ ‘ಕೂಲಿ’ ಸಿನಿಮಾದ ದೃಶ್ಯ ಲೀಕ್ ಆಗಿದೆ. ಈ ಬಗ್ಗೆ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಅಸಮಧಾನ ಹೊರಹಾಕಿದ್ದಾರೆ. ಅಲ್ಲದೆ, ಅವರು ಕೈಮುಗಿದು ಒಂದು ಕೋರಿಕೆಯನ್ನು ಮಾಡಿಕೊಂಡಿದ್ದಾರೆ.

ರಜನಿಕಾಂತ್ ಅವರು ಸದ್ಯ ‘ವೆಟ್ಟೈಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ರಜನಿಕಾಂತ್, ಅಕ್ಕಿನೇನಿ ನಾಗಾರ್ಜುನ, ಉಪೇಂದ್ರ ಅವರಂಥ ಸ್ಟಾರ್ ಕಲಾವಿದರು ನಟಿಸುತ್ತಿರುವದರಿಂದ ಸಹಜವಾಗಿಯೇ ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದ ದೃಶ್ಯವೊಂದು ಸೋರಿಕೆ ಆಗಿದೆ.

ನಾಗಾರ್ಜುನ ಅವರು ಶೂಟ್​ನಲ್ಲಿ ಭಾಗಿ ಆದ ದೃಶ್ಯ ಇದಾಗಿದೆ. ನಾಗಾರ್ಜುನ ಅವರು ಆ್ಯಕ್ಷನ್ ಅವತಾರದಲ್ಲಿ ಮಿಂಚಿದ್ದಾರೆ. ಇದನ್ನು ಶೂಟ್ ಮಾಡಿದ್ದು ಯಾರು, ಲೀಕ್ ಮಾಡಿದ್ದು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈ ಘಟನೆ ಲೋಕೇಶ್ ಅವರಿಗೆ ಬೇಸರ ಮೂಡಿಸಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ಈ ರೆಕಾರ್ಡಿಂಗ್​ನಿಂದಾಗಿ ಹಲವು ಜನರ ಎರಡು ತಿಂಗಳ ಶ್ರಮ ವ್ಯರ್ಥವಾಯಿತು. ಈ ರೀತಿಯ ಕೆಲಸ ಮಾಡಬೇಡಿ. ಇದು ಒಳ್ಳೆಯ ಅನುಭವವನ್ನು ನಾಶ ಮಾಡುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ಕನ್ವೆನ್ಷನ್ ಸೆಂಟರ್​ ನೆಲಸಮ ವಿವಾದ, ನಾಗಾರ್ಜುನ ಸಹೋದರ ಹೇಳಿದ್ದೇನು?

ಸಾಮಾನ್ಯವಾಗಿ ಸಿನಿಮಾಗಳ ಬಗ್ಗೆ ತಂಡದವರು ಅಪ್​ಡೇಟ್ ಕೊಟ್ಟಾಗ, ತಂಡದ ಕಡೆಯಿಂದ ಪೋಸ್ಟರ್​-ಟೀಸರ್ ರಿಲೀಸ್ ಆದಾಗ ಒಂದು ಕುತೂಹಲ ಇರುತ್ತದೆ. ಆದರೆ, ಈ ರೀತಿ ದೃಶ್ಯ ಲೀಕ್ ಆಗುವುದರಿಂದ ಸಿನಿಮಾ ಬಗ್ಗೆ ಇರುವ ನಿರೀಕ್ಷೆ, ಕುತೂಹಲ ಹೋಗಿ ಬಿಡುತ್ತವೆ. ಆ ರೀತಿ ಆಗಬಾರದು ಎನ್ನುವ ದೃಶ್ಯ ಸೋರಿಕೆ ಆಗದಂತೆ ತಡೆಯಲು ಎಲ್ಲರೂ ಬಯಸುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ