AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ನಟನೆಯ ಸಿನಿಮಾ ದೃಶ್ಯ ಲೀಕ್; ಬೇಸರ ಹೊರಹಾಕಿದ ನಿರ್ದೇಶಕ

ಉಪೇಂದ್ರ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ರಜನಿಕಾಂತ್, ಅಕ್ಕಿನೇನಿ ನಾಗಾರ್ಜುನ ನಟನೆಯ ‘ಕೂಲಿ’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಸಿನಿಮಾದ ದೃಶ್ಯವೊಂದು ಸೋರಿಕೆ ಆಗಿದೆ.ಈ ಬಗ್ಗೆ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಅಸಮಧಾನ ಹೊರಹಾಕಿದ್ದಾರೆ.

ಉಪೇಂದ್ರ ನಟನೆಯ ಸಿನಿಮಾ ದೃಶ್ಯ ಲೀಕ್; ಬೇಸರ ಹೊರಹಾಕಿದ ನಿರ್ದೇಶಕ
ರಾಜೇಶ್ ದುಗ್ಗುಮನೆ
|

Updated on: Sep 19, 2024 | 8:49 AM

Share

ಡಿಜಿಟಲ್ ಜಗತ್ತು ವಿಸ್ತಾರವಾಗಿ ಬೆಳೆಯುತ್ತಿದೆ. ಇದರ ಪರಿಣಾಮವಾಗಿ ಹಲವು ಹೀರೋಗಳ ಸಿನಿಮಾಗಳ ಪೋಸ್ಟರ್​ಗಳು ಲೀಕ್ ಆಗುತ್ತಿವೆ. ಈಗ ರಜನಿಕಾಂತ್, ಉಪೇಂದ್ರ, ಅಕ್ಕಿನೇನಿ ನಾಗಾರ್ಜುನ ನಟಿಸುತ್ತಿರುವ ‘ಕೂಲಿ’ ಸಿನಿಮಾದ ದೃಶ್ಯ ಲೀಕ್ ಆಗಿದೆ. ಈ ಬಗ್ಗೆ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಅಸಮಧಾನ ಹೊರಹಾಕಿದ್ದಾರೆ. ಅಲ್ಲದೆ, ಅವರು ಕೈಮುಗಿದು ಒಂದು ಕೋರಿಕೆಯನ್ನು ಮಾಡಿಕೊಂಡಿದ್ದಾರೆ.

ರಜನಿಕಾಂತ್ ಅವರು ಸದ್ಯ ‘ವೆಟ್ಟೈಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ರಜನಿಕಾಂತ್, ಅಕ್ಕಿನೇನಿ ನಾಗಾರ್ಜುನ, ಉಪೇಂದ್ರ ಅವರಂಥ ಸ್ಟಾರ್ ಕಲಾವಿದರು ನಟಿಸುತ್ತಿರುವದರಿಂದ ಸಹಜವಾಗಿಯೇ ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದ ದೃಶ್ಯವೊಂದು ಸೋರಿಕೆ ಆಗಿದೆ.

ನಾಗಾರ್ಜುನ ಅವರು ಶೂಟ್​ನಲ್ಲಿ ಭಾಗಿ ಆದ ದೃಶ್ಯ ಇದಾಗಿದೆ. ನಾಗಾರ್ಜುನ ಅವರು ಆ್ಯಕ್ಷನ್ ಅವತಾರದಲ್ಲಿ ಮಿಂಚಿದ್ದಾರೆ. ಇದನ್ನು ಶೂಟ್ ಮಾಡಿದ್ದು ಯಾರು, ಲೀಕ್ ಮಾಡಿದ್ದು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈ ಘಟನೆ ಲೋಕೇಶ್ ಅವರಿಗೆ ಬೇಸರ ಮೂಡಿಸಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ಈ ರೆಕಾರ್ಡಿಂಗ್​ನಿಂದಾಗಿ ಹಲವು ಜನರ ಎರಡು ತಿಂಗಳ ಶ್ರಮ ವ್ಯರ್ಥವಾಯಿತು. ಈ ರೀತಿಯ ಕೆಲಸ ಮಾಡಬೇಡಿ. ಇದು ಒಳ್ಳೆಯ ಅನುಭವವನ್ನು ನಾಶ ಮಾಡುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ಕನ್ವೆನ್ಷನ್ ಸೆಂಟರ್​ ನೆಲಸಮ ವಿವಾದ, ನಾಗಾರ್ಜುನ ಸಹೋದರ ಹೇಳಿದ್ದೇನು?

ಸಾಮಾನ್ಯವಾಗಿ ಸಿನಿಮಾಗಳ ಬಗ್ಗೆ ತಂಡದವರು ಅಪ್​ಡೇಟ್ ಕೊಟ್ಟಾಗ, ತಂಡದ ಕಡೆಯಿಂದ ಪೋಸ್ಟರ್​-ಟೀಸರ್ ರಿಲೀಸ್ ಆದಾಗ ಒಂದು ಕುತೂಹಲ ಇರುತ್ತದೆ. ಆದರೆ, ಈ ರೀತಿ ದೃಶ್ಯ ಲೀಕ್ ಆಗುವುದರಿಂದ ಸಿನಿಮಾ ಬಗ್ಗೆ ಇರುವ ನಿರೀಕ್ಷೆ, ಕುತೂಹಲ ಹೋಗಿ ಬಿಡುತ್ತವೆ. ಆ ರೀತಿ ಆಗಬಾರದು ಎನ್ನುವ ದೃಶ್ಯ ಸೋರಿಕೆ ಆಗದಂತೆ ತಡೆಯಲು ಎಲ್ಲರೂ ಬಯಸುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?