AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ನಟನೆಯ ಸಿನಿಮಾ ದೃಶ್ಯ ಲೀಕ್; ಬೇಸರ ಹೊರಹಾಕಿದ ನಿರ್ದೇಶಕ

ಉಪೇಂದ್ರ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ರಜನಿಕಾಂತ್, ಅಕ್ಕಿನೇನಿ ನಾಗಾರ್ಜುನ ನಟನೆಯ ‘ಕೂಲಿ’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಸಿನಿಮಾದ ದೃಶ್ಯವೊಂದು ಸೋರಿಕೆ ಆಗಿದೆ.ಈ ಬಗ್ಗೆ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಅಸಮಧಾನ ಹೊರಹಾಕಿದ್ದಾರೆ.

ಉಪೇಂದ್ರ ನಟನೆಯ ಸಿನಿಮಾ ದೃಶ್ಯ ಲೀಕ್; ಬೇಸರ ಹೊರಹಾಕಿದ ನಿರ್ದೇಶಕ
ರಾಜೇಶ್ ದುಗ್ಗುಮನೆ
|

Updated on: Sep 19, 2024 | 8:49 AM

Share

ಡಿಜಿಟಲ್ ಜಗತ್ತು ವಿಸ್ತಾರವಾಗಿ ಬೆಳೆಯುತ್ತಿದೆ. ಇದರ ಪರಿಣಾಮವಾಗಿ ಹಲವು ಹೀರೋಗಳ ಸಿನಿಮಾಗಳ ಪೋಸ್ಟರ್​ಗಳು ಲೀಕ್ ಆಗುತ್ತಿವೆ. ಈಗ ರಜನಿಕಾಂತ್, ಉಪೇಂದ್ರ, ಅಕ್ಕಿನೇನಿ ನಾಗಾರ್ಜುನ ನಟಿಸುತ್ತಿರುವ ‘ಕೂಲಿ’ ಸಿನಿಮಾದ ದೃಶ್ಯ ಲೀಕ್ ಆಗಿದೆ. ಈ ಬಗ್ಗೆ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಅಸಮಧಾನ ಹೊರಹಾಕಿದ್ದಾರೆ. ಅಲ್ಲದೆ, ಅವರು ಕೈಮುಗಿದು ಒಂದು ಕೋರಿಕೆಯನ್ನು ಮಾಡಿಕೊಂಡಿದ್ದಾರೆ.

ರಜನಿಕಾಂತ್ ಅವರು ಸದ್ಯ ‘ವೆಟ್ಟೈಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ರಜನಿಕಾಂತ್, ಅಕ್ಕಿನೇನಿ ನಾಗಾರ್ಜುನ, ಉಪೇಂದ್ರ ಅವರಂಥ ಸ್ಟಾರ್ ಕಲಾವಿದರು ನಟಿಸುತ್ತಿರುವದರಿಂದ ಸಹಜವಾಗಿಯೇ ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದ ದೃಶ್ಯವೊಂದು ಸೋರಿಕೆ ಆಗಿದೆ.

ನಾಗಾರ್ಜುನ ಅವರು ಶೂಟ್​ನಲ್ಲಿ ಭಾಗಿ ಆದ ದೃಶ್ಯ ಇದಾಗಿದೆ. ನಾಗಾರ್ಜುನ ಅವರು ಆ್ಯಕ್ಷನ್ ಅವತಾರದಲ್ಲಿ ಮಿಂಚಿದ್ದಾರೆ. ಇದನ್ನು ಶೂಟ್ ಮಾಡಿದ್ದು ಯಾರು, ಲೀಕ್ ಮಾಡಿದ್ದು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈ ಘಟನೆ ಲೋಕೇಶ್ ಅವರಿಗೆ ಬೇಸರ ಮೂಡಿಸಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ಈ ರೆಕಾರ್ಡಿಂಗ್​ನಿಂದಾಗಿ ಹಲವು ಜನರ ಎರಡು ತಿಂಗಳ ಶ್ರಮ ವ್ಯರ್ಥವಾಯಿತು. ಈ ರೀತಿಯ ಕೆಲಸ ಮಾಡಬೇಡಿ. ಇದು ಒಳ್ಳೆಯ ಅನುಭವವನ್ನು ನಾಶ ಮಾಡುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ಕನ್ವೆನ್ಷನ್ ಸೆಂಟರ್​ ನೆಲಸಮ ವಿವಾದ, ನಾಗಾರ್ಜುನ ಸಹೋದರ ಹೇಳಿದ್ದೇನು?

ಸಾಮಾನ್ಯವಾಗಿ ಸಿನಿಮಾಗಳ ಬಗ್ಗೆ ತಂಡದವರು ಅಪ್​ಡೇಟ್ ಕೊಟ್ಟಾಗ, ತಂಡದ ಕಡೆಯಿಂದ ಪೋಸ್ಟರ್​-ಟೀಸರ್ ರಿಲೀಸ್ ಆದಾಗ ಒಂದು ಕುತೂಹಲ ಇರುತ್ತದೆ. ಆದರೆ, ಈ ರೀತಿ ದೃಶ್ಯ ಲೀಕ್ ಆಗುವುದರಿಂದ ಸಿನಿಮಾ ಬಗ್ಗೆ ಇರುವ ನಿರೀಕ್ಷೆ, ಕುತೂಹಲ ಹೋಗಿ ಬಿಡುತ್ತವೆ. ಆ ರೀತಿ ಆಗಬಾರದು ಎನ್ನುವ ದೃಶ್ಯ ಸೋರಿಕೆ ಆಗದಂತೆ ತಡೆಯಲು ಎಲ್ಲರೂ ಬಯಸುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್