AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trishulam: ಹೈದರಾಬಾದ್ ಫಿಲ್ಮ್ ಫೆಡರೇಷನ್‌ನಿಂದ ಹಣಕ್ಕೆ ಬೇಡಿಕೆ; ರವಿಚಂದ್ರನ್, ಉಪೇಂದ್ರ ನಟನೆಯ ‘ತ್ರಿಶೂಲಂ’ ಶೂಟಿಂಗ್​ಗೆ ಅಡ್ಡಿ

Ravichandran | Upendra: ಸ್ಯಾಂಡಲ್​ವುಡ್​ನ ಖ್ಯಾತ ನಟರಾದ ರವಿಚಂದ್ರನ್ ಹಾಗೂ ಉಪೇಂದ್ರ ಅಭಿನಯದ ‘ತ್ರಿಶೂಲಂ’ ಚಿತ್ರದ ಚಿತ್ರೀಕರಣಕ್ಕೆ ಅಡ್ಡಿಯಾಗಿದೆ. ಈ ಕುರಿತು ನಿರ್ಮಾಪಕ ಕನಕಪುರ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

Trishulam: ಹೈದರಾಬಾದ್ ಫಿಲ್ಮ್ ಫೆಡರೇಷನ್‌ನಿಂದ ಹಣಕ್ಕೆ ಬೇಡಿಕೆ; ರವಿಚಂದ್ರನ್, ಉಪೇಂದ್ರ ನಟನೆಯ ‘ತ್ರಿಶೂಲಂ’ ಶೂಟಿಂಗ್​ಗೆ ಅಡ್ಡಿ
‘ತ್ರಿಶೂಲಂ’ ಚಿತ್ರದ ಪೋಸ್ಟರ್
TV9 Web
| Updated By: shivaprasad.hs|

Updated on:Oct 27, 2021 | 12:40 PM

Share

ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ರಿಯಲ್‌ಸ್ಟಾರ್ ಉಪೇಂದ್ರ ಅಭಿಯದ ‘ತ್ರಿಶೂಲಂ’ ಚಿತ್ರೀಕರಣಕ್ಕೆ ಅಡ್ಡಿಯಾಗಿದೆ. ಓಂ‌ ಪ್ರಕಾಶ್ ರಾವ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರವು, ಚಿತ್ರೀಕರಣಕ್ಕೆ ಹೈದರಾಬಾದ್​ಗೆ ತೆರಳಿತ್ತು. ಇದೀಗ ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೈದರಾಬಾದ್​ನ ಸಿನಿ‌ಫೆಡರೇಶನ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈಗಾಗಲೇ ಬೆಳಗ್ಗೆ 7 ಘಂಟೆಗೆ ಶೂಟಿಂಗ್ ಆರಂಭ ಆಗಬೇಕಿತ್ತು. ಆದರೆ ಇನ್ನೂ ಕೂಡ ಕ್ಯಾಮರಾ ಯೂನಿಟ್ ಸೇರಿದಂತೆ ಕೆಲವು ಕೆಲಸಗಾರರು ಆಗಮಿಸಿಲ್ಲ ಎಂದು ಶ್ರೀನಿವಾಸ್ ಆರೋಪಿಸಿದ್ದಾರೆ.

ನಿನ್ನೆಯಿಂದ ಹೈದರಾಬಾದ್‌ನಲ್ಲಿ ‘ತ್ರಿಶೂಲಂ’ ಚಿತ್ರತಂಡ ಚಿತ್ರೀಕರಣದಲ್ಲಿ ತೊಡಗಿಕೊಂಡಿದೆ. ಆಗುತ್ತಿರುವ ಸಮಸ್ಯೆಯ ಕುರಿತು ಮಾತನಾಡಿರುವ ಕನಕಪುರ ಶ್ರೀನಿವಾಸ್, ‘‘ಬಿಲ್ ಕೊಡದೇ ಹಣ ಕೇಳುತ್ತಿದ್ದಾರೆ. ₹ 6 ಲಕ್ಷ ಹಣ‌ಕಟ್ಟಬೇಕಿತ್ತು. ₹ 1 ಲಕ್ಷ ಹಣ ಕಟ್ಟಿದ್ದೇನೆ. ಅವರು ₹ 7 ಲಕ್ಷ ಪಾವತಿಸಿದರೆ ಮಾತ್ರ ಯುನಿಟ್ ಕಳುಹಿಸುವುದಾಗಿ ಹೇಳುತ್ತಿದ್ದಾರೆ. ಇನ್ನುಳಿದ ಹಣ ಪಾವತಿಗೆ ರಶೀತಿ ಬೇಕು’’ ಎಂದು ಶ್ರೀನಿವಾಸ್ ಹೇಳಿದ್ದಾರೆ. ಈ ಸಮಸ್ಯೆಯಿಂದಾಗಿ ಶೂಟಿಂಗ್​ಗೆ ತೊಂದರೆಯಾಗುತ್ತಿದೆ. ಸದ್ಯ ಒಂದು ದಿನ ಶೂಟಿಂಗ್ ನಿಂತ್ರೆ 20 ಲಕ್ಷ ಲಾಸ್ ಆಗುತ್ತೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

RS Productions letter

ಚಿತ್ರತಂಡ ದೂರು ನೀಡಿರುವ ಪತ್ರ

ಸದ್ಯ ಚಿತ್ರತಂಡ ಹೈದರಾಬಾದ್​ನಲ್ಲಿ ಬೀಡುಬಿಟ್ಟಿದ್ದು, ಸಾಂಗಿ ಟೆಂಪಲ್ ಬಳಿ ಚಿತ್ರೀಕರಣಕ್ಕೆ ತೆರಳಿದೆ. ಆದರೆ ಚಿತ್ರೀಕಣಕ್ಕೆ ತೊಂದರೆಯಾಗುತ್ತಿರುವ ಕುರಿತಂತೆ ಚಿತ್ರತಂಡ ಹೈದರಾಬಾದ್ ಸಿನಿಫೆಡರೇಶನ್ ವಿರುದ್ಧ ಗಂಭೀರ ಆರೋಪ ಮಾಡಿದೆ. ಸ್ಯಾಂಡಲ್​ವುಡ್​ನ ಖ್ಯಾತ ಕಲಾವಿದರು ಈ ಚಿತ್ರದಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ರವಿಚಂದ್ರನ್ ಹಾಗೂ ಉಪೇಂದ್ರ ಕಾಂಬಿನೇಷನ್​ ತೆರೆ ಮೇಲೆ ಕಾಣಿಸಿಕೊಳ್ಳಲಿದೆ. ಸಾನ್ವಿ ಶ್ರೀವಾಸ್ತವ್, ಸಾಧು ಕೋಕಿಲ, ನಿಮಿಕಾ ರತ್ನಾಕರ್, ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಾ ಬೆಳವಾಡಿ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

ಇದನ್ನೂ ಓದಿ:

Snehith: ಸ್ನೇಹಿತ್ ಮತ್ತು ತಂಡದ ಹಲ್ಲೆ ಪ್ರಕರಣ; ಮನೆ ಸೆಕ್ಯುರಿಟಿ ಗಾರ್ಡ್ ಅರೆಸ್ಟ್; ಉಳಿದವರ ಪತ್ತೆಗೆ ಬಲೆ ಬೀಸಿದ ಪೊಲೀಸರು

ರವಿಚಂದ್ರನ್​ ಪುತ್ರರ ಬಗ್ಗೆ ಕಾಕ್ರೋಚ್​ ಸುಧಿ ವಿಶೇಷ ಮಾತು; ‘ಕನಸುಗಾರ’ ನೆನಪಿಸಿದ ಮನು-ವಿಕ್ರಮ್​

Published On - 10:46 am, Wed, 27 October 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!