AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ’ ಮಾಡಲು ಲಾಂಗ್ ಹಿಡಿದ ಸ್ಯಾಂಡಲ್​ವುಡ್​ನ ಸೂಪರ್​ ಸ್ಟಾರ್​ ಉಪೇಂದ್ರ

ಸ್ಯಾಂಡಲ್​ವುಡ್​ಗೆ ಮಚ್ಚು, ಲಾಂಗ್ ಪರಿಚಯಿಸಿದ್ದೇ ಸೂಪರ್​ಸ್ಟಾರ್ ಉಪೇಂದ್ರ ಎಂಬ ಮಾತಿದೆ. 1995ರಲ್ಲಿ ತೆರೆಕಂಡ ಉಪೇಂದ್ರ ನಿರ್ದೇಶನದ ‘ಓಂ’ ಚಿತ್ರ ಬ್ಲಾಕ್ ಬ್ಲಸ್ಟರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಲಾಂಗ್ ಹಿಡಿದು ರೌಡಿ ಪಾತ್ರದಲ್ಲಿ ನಟಿಸಿದ್ರು.  ಇದೀಗ ಸ್ವಂತ ಉಪೇಂದ್ರ ಅವರೇ ‘ಕಬ್ಜ’ ಮಾಡಲು ಲಾಂಗ್ ಹಿಡಿದು ನಿಂತಿದ್ದಾರೆ. ಹೌದು ಆರ್​.ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಉಪೇಂದ್ರ ಅಭಿನಯದ ‘ಕಬ್ಜ’ ಚಿತ್ರದ ಫಸ್ಟ್​ ಲುಕ್ ಇದೀಗ ರಿಲೀಸ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಆರ್​.ಚಂದ್ರು ನಿರ್ದೇಶನದ ‘ಐ […]

‘ಕಬ್ಜ’ ಮಾಡಲು ಲಾಂಗ್ ಹಿಡಿದ ಸ್ಯಾಂಡಲ್​ವುಡ್​ನ ಸೂಪರ್​ ಸ್ಟಾರ್​ ಉಪೇಂದ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 16, 2019 | 6:50 PM

Share

ಸ್ಯಾಂಡಲ್​ವುಡ್​ಗೆ ಮಚ್ಚು, ಲಾಂಗ್ ಪರಿಚಯಿಸಿದ್ದೇ ಸೂಪರ್​ಸ್ಟಾರ್ ಉಪೇಂದ್ರ ಎಂಬ ಮಾತಿದೆ. 1995ರಲ್ಲಿ ತೆರೆಕಂಡ ಉಪೇಂದ್ರ ನಿರ್ದೇಶನದ ‘ಓಂ’ ಚಿತ್ರ ಬ್ಲಾಕ್ ಬ್ಲಸ್ಟರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಲಾಂಗ್ ಹಿಡಿದು ರೌಡಿ ಪಾತ್ರದಲ್ಲಿ ನಟಿಸಿದ್ರು.

 ಇದೀಗ ಸ್ವಂತ ಉಪೇಂದ್ರ ಅವರೇ ‘ಕಬ್ಜ’ ಮಾಡಲು ಲಾಂಗ್ ಹಿಡಿದು ನಿಂತಿದ್ದಾರೆ. ಹೌದು ಆರ್​.ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಉಪೇಂದ್ರ ಅಭಿನಯದ ‘ಕಬ್ಜ’ ಚಿತ್ರದ ಫಸ್ಟ್​ ಲುಕ್ ಇದೀಗ ರಿಲೀಸ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಆರ್​.ಚಂದ್ರು ನಿರ್ದೇಶನದ ‘ಐ ಲವ್​ ಯು’ ಸಿನಿಮಾ ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸಿದ್ರು. ಈಗ ಇದೇ ಜೋಡಿ ‘ಕಬ್ಜ’ ಮಾಡಲು ಮುಂದಾಗಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’​ ಚಿತ್ರ ಒಟ್ಟು 5 ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಬಳಿಕ ದರ್ಶನ್​ ನಟಿಸಿರುವ ‘ಕುರುಕ್ಷೇತ್ರ’ ಸಹ ಪಂಚ ಭಾಷೆಗಳಲ್ಲಿ ರಿಲೀಸ್ ಮಾಡಲಾಗಿತ್ತು. ಇತ್ತೀಚೆಗಷ್ಟೇ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾವೂ 5 ಭಾಷೆಗಳಲ್ಲಿ ತೆರೆಕಂಡಿತ್ತು. ಇದೀಗ ಉಪೇಂದ್ರ ಸಹ ಒಂದು ಹೆಜ್ಜೆ ಮುಂದೆ ಹೋಗಿ 7 ಭಾಷೆಗಳಲ್ಲಿ ‘ಕಬ್ಜ’ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

Published On - 1:17 pm, Mon, 16 September 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು