AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳ ಜತೆ ಮಧ್ಯರಾತ್ರಿ ಬರ್ತ್​​ಡೇ ಆಚರಿಸಿಕೊಂಡ ಉಪೇಂದ್ರ: ಸಾಹಸ ಸಿಂಹನನ್ನು ನೆನೆದ ರಿಯಲ್ ಸ್ಟಾರ್​

ಉಪೇಂದ್ರ ಅವರು ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಿವಾಸ ಹೊಂದಿದ್ದಾರೆ. ಉಪ್ಪಿ ನಿವಾಸಕ್ಕೆ ತಡರಾತ್ರಿಯೇ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದರು. ನೆಚ್ಚಿನ ನಟನಿಗೆ ಎಲ್ಲರೂ ಬರ್ತ್​​​ಡೇ ವಿಶ್ ತಿಳಿಸಿದ್ದಾರೆ.

ಅಭಿಮಾನಿಗಳ ಜತೆ ಮಧ್ಯರಾತ್ರಿ ಬರ್ತ್​​ಡೇ ಆಚರಿಸಿಕೊಂಡ ಉಪೇಂದ್ರ: ಸಾಹಸ ಸಿಂಹನನ್ನು ನೆನೆದ ರಿಯಲ್ ಸ್ಟಾರ್​
ಉಪೇಂದ್ರ
TV9 Web
| Edited By: |

Updated on: Sep 18, 2022 | 7:08 AM

Share

ನಟ ಉಪೇಂದ್ರ (Upendra) ಅವರಿಗೆ ಇಂದು (ಸೆಪ್ಟೆಂಬರ್ 18) ಬರ್ತ್​ಡೇ ಸಂಭ್ರಮ. ಅವರು ತಮ್ಮ 54ನೇ ಜನ್ಮದಿನವನ್ನು ಅಭಿಮಾನಿಗಳ ಜತೆ ಆಚರಿಸಿಕೊಂಡಿದ್ದಾರೆ. ಕಳೆದ ಎರಡು ವರ್ಷ ಕೊವಿಡ್ ಕಾರಣದಿಂದ ಸರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ, ಈಗ ಕೊವಿಡ್ ಕಡಿಮೆಯಾಗಿದೆ. ಈ ಕಾರಣದಿಂದ ಉಪೇಂದ್ರ (Upendra Birthday) ಅವರು ಅಭಿಮಾನಿಗಳ ಜತೆಗೂಡಿ ವಿಶೇಷ ದಿನವನ್ನು ಆಚರಿಸಿಕೊಂಡಿದ್ದಾರೆ. ಉಪೇಂದ್ರ ಅವರಿಗೆ ಅನೇಕ ಸೆಲೆಬ್ರಿಟಿಗಳು ಬರ್ತ್​ಡೇ ವಿಶ್ ಮಾಡುತ್ತಿದ್ದಾರೆ.

ಉಪೇಂದ್ರ ಅವರು ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಿವಾಸ ಹೊಂದಿದ್ದಾರೆ. ಉಪ್ಪಿ ನಿವಾಸಕ್ಕೆ ತಡರಾತ್ರಿಯೇ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದರು. ನೆಚ್ಚಿನ ನಟನಿಗೆ ಎಲ್ಲರೂ ಬರ್ತ್​​​ಡೇ ವಿಶ್ ತಿಳಿಸಿದ್ದಾರೆ. ಅಭಿಮಾನಿಗಳಿಗೆ ಉಪೇಂದ್ರ ಸಿಹಿ ಹಂಚಿದ್ದಾರೆ. ಈ ವೇಳೆ ಫ್ಯಾನ್ಸ್ ಸಂಭ್ರಮ ಮುಗಿಲುಮುಟ್ಟಿತ್ತು.

ಇದನ್ನೂ ಓದಿ
Image
Upendra: ‘ಈ ಕೆಲಸ ಮಾಡಿ, ನಮ್ಮ ಮನೆಗೆ ಬನ್ನಿ’; ಫ್ಯಾನ್ಸ್​ಗೆ ಆಹ್ವಾನ ನೀಡಿದ ಉಪೇಂದ್ರ: ಏನಿದು ಟಾಸ್ಕ್​?
Image
ವಿಷ್ಣುವರ್ಧನ್​ ಪ್ರೀತಿಸಿದ ಹುಡುಗಿಗೆ ಸುಂದರ್​ ರಾಜ್​ ಹೂವು ಕೊಟ್ಟಿದ್ದೇಕೆ? ಇಲ್ಲಿದೆ ಇಂಟರೆಸ್ಟಿಂಗ್​ ಘಟನೆಯ ವಿವರ
Image
‘ಗಂಧದ ಗುಡಿ’ ಬಳಿಕ ರಾಜ್​ಕುಮಾರ್​-ವಿಷ್ಣುವರ್ಧನ್​ ಏಕೆ ಒಟ್ಟಾಗಿ ನಟಿಸಲಿಲ್ಲ? ಕಾರಣ ನೀಡಿದ ಹಿರಿಯ ನಟ
Image
‘ವಿಷ್ಣುವರ್ಧನ್​-ಸುಹಾಸಿನಿ ನಡುವೆ ನಡೆಯುತ್ತಿದ್ದ ಮಾತುಕತೆಯೇ ಬೇರೆ’: ನಾಗತಿಹಳ್ಳಿ ಚಂದ್ರಶೇಖರ್​

ಉಪೇಂದ್ರ ಅವರಿಗೆ ಅನೇಕ ಸೆಲೆಬ್ರಿಟಿಗಳು ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟನ ಜತೆ ಇರುವ ಫೋಟೋ ಪೋಸ್ಟ್​ ಮಾಡಿ ಅಭಿಮಾನಿಗಳು ಉಪ್ಪಿಗೆ ಹ್ಯಾಪಿ ಬರ್ತ್​ಡೇ ಎನ್ನುತ್ತಿದ್ದಾರೆ. ಅಭಿಮಾನಿಗಳ ಜತೆಗೂಡಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಕಾರಣದಿಂದಲೂ ಉಪೇಂದ್ರ ಅವರಿಗೆ ಬರ್ತ್​ಡೇ ವಿಶೇಷ ಎನಿಸಿದೆ.

ಟೀಸರ್ ಗಿಫ್ಟ್:

ಸೆಲೆಬ್ರಿಟಿಗಳ ಬರ್ತ್​ಡೇ ಸಂದರ್ಭದಲ್ಲಿ ಸಿನಿಮಾ ತಂಡದ ಕಡೆಯಿಂದ ಫ್ಯಾನ್ಸ್​​ಗೆ ಗಿಫ್ಟ್ ಸಿಗುತ್ತದೆ. ಅದೇ ರೀತಿ, ‘ಕಬ್ಜ’ ತಂಡದವರು ಟೀಸರ್ ರಿಲೀಸ್ ಮಾಡಿದ್ದಾರೆ. ಈ ಟೀಸರ್ ನೋಡಿದ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದು, ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಕಾರಣದಿಂದಲೂ ಫ್ಯಾನ್ಸ್​ಗೆ ಉಪ್ಪಿ ಬರ್ತ್​ಡೇ ವಿಶೇಷ ಎನಿಸಿದೆ. ಆರ್​.ಚಂದ್ರು ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಕಾದಿದೆ ಮತ್ತೊಂದು ಗಿಫ್ಟ್?

‘ಯುಐ’ ಚಿತ್ರದಲ್ಲಿ ಉಪೇಂದ್ರ ಅವರು ನಟಿಸುವುದರ ಜತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಈ ಮೂಲಕ ಹಲವು ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳಿದ್ದಾರೆ. ಈ ಸಿನಿಮಾ ತಂಡದ ಕಡೆಯಿಂದ ಉಪ್ಪಿ ಜನ್ಮದಿನಕ್ಕೆ ವಿಶೇಷ ಉಡುಗೊರೆ ಸಿಗುವ ಸಾಧ್ಯತೆ ಇದೆ. ಹೊಸ ಪೋಸ್ಟರ್​ ಅನ್ನು ತಂಡ ಹಂಚಿಕೊಳ್ಳಲಿದೆ ಎನ್ನಲಾಗುತ್ತಿದೆ.

ವಿಷ್ಣುವರ್ಧನ್​ ಅವರನ್ನು ನೆನೆದ ಉಪ್ಪಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್​ ಅವರ ಜನ್ಮದಿನ ಕೂಡ ಹೌದು. ಈ ಕಾರಣಕ್ಕೆ ಉಪೇಂದ್ರ ಅವರು ಟ್ವಿಟರ್​​ನಲ್ಲಿ ವಿಷ್ಣು ಜತೆ ನಿಂತಿರುವ ಫೋಟೋ ಹಂಚಿಕೊಂಡಿದ್ದಾರೆ. ಈ ಮೂಲಕ ಸಾಹಸ ಸಿಂಹನನ್ನು ಅವರು ನೆನಪಿಸಿಕೊಂಡಿದ್ದಾರೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?